Homeಮುಖಪುಟಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

- Advertisement -
- Advertisement -

ಶುದ್ಧೋದನ |

ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ ಹಿಡನ್ ಅಜೆಂಡಾಗಳನ್ನೆಲ್ಲ ಜಾರಿಗೊಳಿಸಲು ಮೋದಿಯಂಥ “ಬದಲಿ ಶೂದ್ರ” ಸದ್ಯಕ್ಕಂತೂ ಆರೆಸೆಸ್-ವಿಎಚ್‍ಪಿ ಬಳಗಕ್ಕೆ ಸಿಗುವಹಾಗಿಲ್ಲ. ಹಾಗಾಗಿ ಹೇಗಾದರೂ ಮಾಡಿ ಸುಳ್ಳುಗಳಿಗೆ ಕಲಾತ್ಮಕವಾಗಿ ಹೂಳಪು ಕೊಡಲು ಚೆಡ್ಡಿ-ಕಾವಿ ತಂಡ ತರಹೇವಾರಿ ಮಸಲತ್ತು ಮಾಡಲಾರಂಭಿಸಿದೆ.
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಅಮಾಯಕ ಮಹಿಳೆಯರಿಗೆಲ್ಲ ನಿರಂತರ ಮೋಸ, ವಂಚನೆ ಮಾಡುತ್ತ ದೇಶದ ನೆಮ್ಮದಿ ಕೆಡಿಸಿದ ಪಾಪಕ್ಕೆ ಫಲವಾಗಿ ಅಧಃಪತನದ ಅಂಚಿಗೆ ಬಂದು ನಿಂತಿರುವ ಬಿಜೆಪಿ ಮನುವಾದಿಗಳೀಗ ಮೋದಿ ಕಳಾ ವೃದ್ಧಿಗೆ ಯಜ್ಞದ ಮೊರೆ ಹೋಗಿದ್ದಾರೆ. ಮೌಢ್ಯ ತುಂಬುವ ಹೋಮ-ಹವನ, ಯಜ್ಞ-ಯಾಗ, ಮಡಿ-ಮೈಲಿಗೆ, ಮೋಸ-ಸುಳ್ಳುಗಳ ಪೇಟೆಂಟ್ ಸಂಘಪರಿವಾರ ಪಡೆದುಕೊಂಡು ಅದ್ಯಾವುದೋ ಕಾಲವಾಗಿಹೋಗಿದೆ! ಆದರೆ ಈ ಆನಾಹುತಕಾರಿ ತಂತ್ರಗಳೇ ಸಂಘ ಪರಿವಾರದ ಕೈಗೊಂಬೆ ಮೋದಿಗೆ ತಿರುಗುಬಾಣ ಆಗುತ್ತಿವೆ. ಧನಾತ್ಮಕವಾಗಿ ಜನರ ಮನಸ್ಸು ಗೆಲ್ಲಲಾಗದ ಮೋದಿ ಶಿಷ್ಯಸಂಕುಲ, ಮತ್ತದೇ ವಾಮಮಾರ್ಗಕ್ಕೆ ಬಿದ್ದಿದೆ. ಯಜ್ಞ-ತಂತ್ರದಿಂದ ಜನರ ಮರುಳುಗೊಳಿಸಿ ಆಸ್ತಿತ್ವ ಉಳಿಸಿಕೊಳ್ಳಲು ತಿಣುಕಾಡುತ್ತಿದೆ.
ಲೋಕಸಭಾ ಚುನಾವಣೆ ಎದುರಾಗಿರುವ ಈ ಯುದ್ಧಕಾಲದಲ್ಲಿ ಸೇನಾಧಿಪತಿಯೇ ಕಾಲು ಮುರಿದುಕೊಂಡು ಕೂತಂತಾಗಿದೆ ಬಿಜೆಪಿ ಪರಿಸ್ಥಿತಿ. ಹುಸಿ ವೀರಾವೇಷದ ಭಾಷಣ ಎರಚುವ ಮೋದಿಯ ಮನಮುರಕು ಮಾತುಗಳನ್ನು ಕೇಳುವ ಸ್ಥಿತಿಯಲ್ಲೀಗ ಜನರಿಲ್ಲ ಎಂಬುವುದು ಪರಿವಾರ ಪುರೋಹಿತರಿಗೆ ಪಕ್ಕಾ ಆಗಿದೆ. ರಾಮಮಂದಿರ-ಹಿಂದೂತ್ವದ ಶಾರ್ಟ್‍ಕಟ್ ದಾರಿಯಲ್ಲಿ ದಿಲ್ಲಿ ಸಿಂಹಾಸನ ತಲುಪಿದ್ದ ಮೋದಿಗೆ ಪ್ರಧಾನಿಯಾಗಿ ನಾಲ್ಕುವರೆ ವರ್ಷ ಕಳೆದರೂ ಅಯೋಧ್ಯೆ, ರಾಮಮಂದಿರ ನೆನಪಾಗಲೇ ಇಲ್ಲ. ಕಟ್ಟರ್ ಹಿಂದೂತ್ವದ ಹುಡುಗರಿಗೂ ಅಯೋಧ್ಯೆಯ ರಾಮಮಂದಿರ ಅನ್ನೋದು, ಬಿಜೆಪಿಯು ಎಲೆಕ್ಷನ್ ಗೆಲುವಿನ ಸಲುವಾಗಿ ಹುಟ್ಟುಹಾಕುವ ಅತಿದೊಡ್ಡ ವಂಚನೆ ಅನ್ನೋದು ನಿಸ್ಸಂಶಯವಾಗಿ ಅರ್ಥವಾಗಿಬಿಟ್ಟಿದೆ! ಆ ಕಾರಣಕ್ಕೇ 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಹೊತ್ತಿ ಉರಿದಿದ್ದ ಮಧ್ಯಪ್ರದೇಶ, ರಾಜಸ್ಥಾನದಂತಹ ಉತ್ತರ ಭಾರತದ ಹಿಂದಿ ಹಾರ್ಟ್‍ಲ್ಯಾಂಡ್‍ಗಳಲ್ಲೇ ಕೇಸರಿ ಸಾಧುಗಳ ರಾಮಮಂದಿರ ಜನಾಗ್ರಹ ಸಮಾವೇಶಗಳು ಬಿಜೆಪಿಗೆ ಮತ ತಂದುಕೊಡುವಲ್ಲಿ ಸಂಪೂರ್ಣವಾಗಿ ಸೋತುಹೋಗಿವೆ.
ದೇಶದ ಬೆನ್ನೆಲುಬಾದ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿದಿದ್ದರೆ, ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿ ಇರೋ ಉದ್ಯೋಗಗಳನ್ನೇ ನಾಶ ಮಾಡುವ ಕೆಲಸಕ್ಕೆ ಹೈಹಾಕಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ಜನಮನ ಗೆದ್ದಿದ್ದ ಇಂದಿರಾ ಗಾಂಧಿಯಂತೆ ನೋಟ್ ಬ್ಯಾನ್ ಮಾಡಲು ಹೋಗಿ ಮೋದಿ ಇಡೀ ದೇಶದ ಆರ್ಥಿಕತೆಯೇ ಮುಗ್ಗರಿಸಿ ಬೀಳುವಂತೆ ಮಾಡಿದ್ದಾರೆ. ಕಪ್ಪುಹಣವನ್ನೂ ತರದೆ, ಪ್ರತಿ ಅಕೌಂಟಿಗೆ ಹದಿನೈದು ಲಕ್ಷವನ್ನೂ ಡೆಪಾಸಿಟ್ ಮಾಡದ ಮೋದಿಯ ವರ್ಚಸ್ಸೀಗ ಸಂಪೂರ್ಣ ಕುಸಿದುಬಿದ್ದಿದೆ. ಸಾಲದ್ದಕ್ಕೆ ಅಂಬಾನಿ-ಅದಾನಿಗಳ ಖಜಾನೆ ಹಿಗ್ಗಿಸಲು ಹೋಗಿ ರಫೇಲ್ ಭಾನ್ಗಡಿಯಲ್ಲಿ ಮೋದಿ ಮುಸುಡಿಯನ್ನೇ ಸಿಗಾಕಿಕೊಂಡು ಕೂತು ದೇಶದ ಮುಂದೆ ಬೆತ್ತಲಾಗಿದ್ದಾರೆ. ಮೊನ್ನೆ ನಡೆದ ಪಂಚರಾಜ್ಯ ಫಲಿತಾಂಶಗಳೇ ಇದಕ್ಕೆ ಸಾಕ್ಷಿ.
ಇಂಥಾ ಯಡವಟ್ಟುಗಳನ್ನು ಸರಿ ಮಾಡಿಕೊಂಡು ಜನರ ಮನಸ್ಸನ್ನು ಗೆಲ್ಲೋದು ಬಿಟ್ಟು, ಮೋದಿಯ ಪರಿವಾರದ ಪಟಾಲಮ್ಮು ಯಜ್ಞ, ಯಾಗ ಮಾಡಿ ವರ್ಚಸ್ಸು ವೃದ್ಧಿಗೆ ಕೈಹಾಕಿದೆ! ಆ ಮೂಲಕ ತಮ್ಮ ಹಾದಿಯೇನಿದ್ದರೂ ಪ್ರಗತಿಯತ್ತಲ್ಲ, ಹಳೇ ಶಿಲಾಯುಗದತ್ತ ಅನ್ನೋದನ್ನು ತಾನೇ ಸಾಬೀತು ಮಾಡಿಕೊಂಡಿದೆ. ಬಿಜೆಪಿಯ ಈ ಶಿಲಾಯುಗದ ನಿದರ್ಶನ ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗೋವಾ ಬಿಜೆಪಿ ಸರ್ಕಾರದ ಕೃಷಿ ಇಲಾಖೆ ವೇದ-ಮಂತ್ರ ಪಠಣದಿಂದ ರೈತರು ಬಂಪರ್ ಬೆಳೆ ತೆಗೆದು ಸುಖವಾಗಿ ಇರಬಹುದೆಂದು ಅಧೀಕೃತವಾಗೇ ಘೋಷಿಸಿದ್ದು ಓದುಗರಿಗೆ ನೆನಪಿರಬಹುದು.
ಟೀಮ್ ಮೋದಿ ತನ್ನ ಕಫ್ತಾನನ ವೈಫಲ್ಯಗಳನ್ನು ಮುಚ್ಚಿಹಾಕುವ ಸಲುವಾಗಿ ಮೌಢ್ಯದ ಯಜ್ಞ-ಮಂತ್ರ-ವೇದಗಳ ಮೊರೆಹೋಗಿರೋದನ್ನು ಕಂಡು ಜನ ನಗಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಬದಿಯಡ್ಕ ಬಳಿಯ ಮಾನ್ಯ ಸಮೀಪದ ಮೇಗಿನಡ್ಕ ಎಂಬಲ್ಲಿ ಮೋದಿಯನ್ನು ಕಂಟಕದಿಂದ ಪಾರು ಮಾಡಲು ಯಜ್ಞ ಒಂದನ್ನು ಇದೇ ಡಿಸೆಂಬರ್ 28 ರಿಂದ 31ರವರೆಗೆ ನಡೆಸಲು ಚೆಡ್ಡಿಗಳು ನಿರ್ಧರಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಕಳಾವೃದ್ಧಿ ಧಾರ್ಮಿಕ ದಗಲುಬಾಜಿತನದಿಂದಲೇ ಪ್ರವರ್ಧಮಾನಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು ಬೆಂಕಿ ಬ್ರಾಂಡಿನ ಸಂಸದ ನಳಿನ್ ಕುಮಾರ್ ಕಟೀಲ್ ಗುರು-ಶಿಷ್ಯರ “ನಮೋ ಯಜ್ಞ” ಎಂಬ ಸರ್ಕಸ್ಸೇ ಈ ಲೇಟೆಸ್ಟ್ ಪ್ರಹಸನ. ನಾಲ್ಕು ದಿನ ನಮೋ, ಜ್ಞಾನ, ಭಕ್ತಿ ಮತ್ತು ಯಕ್ಷ ಯಜ್ಞಗಳೆಂಬ ಚತುರ್ವಿಧ ಹಿಕಮತ್ತಿನ ಮೂಲ ಉದ್ದೇಶ ಮೋದಿಗೆ ಅರ್ಥಾತ್ ಬಿಜೆಪಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡೋದು!
ಕಾರ್ಯಕ್ರಮದ ಸಂಘಟಕರೇ ಹೇಳುವ ಹಾಗೆ ಇದೊಂದು ಮೋದಿಗೆ ಶಕ್ತಿ ತುಂಬುವ ಯಾಗ. ಅಲ್ಲಿಗೆ ಮೋದಿ ದುರ್ಬಲಗೊಂಡಿದ್ದಾರೆ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಂಡಂತಾಯ್ತು! ಇಂಥದೊಂದು ಯಜ್ಞ ಮೋದಿಗಿಂತ ಹೆಚ್ಚಾಗಿ ಸೋಲಿನ ಭೀತಿಯಲ್ಲಿರುವ ಲೋಕಲ್ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ಬೇಕಾಗಿದೆ. ಪರಮ ಚೆಡ್ಡಿ ಸಾಹಿತಿಗಳಾದ ಎಸ್.ಎಲ್.ಭೈರಪ್ಪ, ಪ್ರಧಾನ್ ಗುರುದತ್ತ ಜತೆ ಸಂವಾದ ಕಾರ್ಯಕ್ರಮ ಹೆಣೆದಿರುವ ಕಲ್ಲಡ್ಕ, ನಳಿನ್‍ರ ಮುಖ್ಯಗುರಿ ಯುವಕರ ದಿಕ್ಕುತಪ್ಪಿಸಿ ಚುನಾವಣೆಗೆ ಅಣಿಯಾಗುವುದು. ಒಂದು ಕಾಲಕ್ಕೆ ಸುಶಿಕ್ಷಿತರ, ಪ್ರಜ್ಞಾವಂತರ ಜಿಲ್ಲೆಯೆಂದೇ ಹೆಸರಾಗಿದ್ದ ದಕ್ಷಿಣ ಕನ್ನಡದ ಮಂದಿ ಈಗ ಇಂಥಾ ಹುಚ್ಚಾಟಗಳಿಗೆ ಸಾಕ್ಷಿಯಾಗಬೇಕಾಗಿ ಬಂದಿರೋದು ದುರಂತ.
ತಮಾಷೆಯೆಂದರೆ, ತೆಲಂಗಾಣದ ಎಲೆಕ್ಷನ್ ಹೊತ್ತಲ್ಲಿ ಪ್ರಧಾನಿ ಮೋದಿಯು ಅಲ್ಲಿನ ಟಿಆರ್‍ಎಸ್ ಪಕ್ಷದ ಅಧಿನಾಯಕ ಕೆಸಿಆರ್‍ಗೆ ಸೋಲಿನ ಭೀತಿ ಆವರಿಸಿರೋದರಿಂದ ಜ್ಯೋತಿಷಿಗಳ ಮಾತುಕೇಳಿಕೊಂಡು ಹೋಮ-ಹವನ-ಪೂಜೆ ಮಾಡಿಸಿಕೊಂಡು ತಿರುಗಾಡುತ್ತಿದ್ದಾರೆಂದು ಗೇಲಿ ಮಾಡಿದ್ದುಂಟು!! ಈಗ ಮೋದಿ ಭಕ್ತರು ಅದೇ ಹಾದಿಯಲ್ಲಿದ್ದಾರೆ. ಅಂದಹಾಗೆ, ಎಲ್ಲರನ್ನೂ ಎಲ್ಲ ಕಾಲಕ್ಕೂ ಮೂರ್ಖರನ್ನಾಗಿ ಮಾಡಲು ಸಾಧ್ಯವಾ?
ಅಂತೂ ತಮ್ಮ ಪತನ ಪ್ರಾರಂಭವಾಗಿದೆ ಅನ್ನೋದನ್ನು ಮೋದಿ ಪರಿವಾರವೇ ಈ ಯಜ್ಞದ ಮೂಲಕ ಒಪ್ಪಿಕೊಂಡಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...