Homeಮುಖಪುಟಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

- Advertisement -
- Advertisement -

ಶುದ್ಧೋದನ |

ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ ಹಿಡನ್ ಅಜೆಂಡಾಗಳನ್ನೆಲ್ಲ ಜಾರಿಗೊಳಿಸಲು ಮೋದಿಯಂಥ “ಬದಲಿ ಶೂದ್ರ” ಸದ್ಯಕ್ಕಂತೂ ಆರೆಸೆಸ್-ವಿಎಚ್‍ಪಿ ಬಳಗಕ್ಕೆ ಸಿಗುವಹಾಗಿಲ್ಲ. ಹಾಗಾಗಿ ಹೇಗಾದರೂ ಮಾಡಿ ಸುಳ್ಳುಗಳಿಗೆ ಕಲಾತ್ಮಕವಾಗಿ ಹೂಳಪು ಕೊಡಲು ಚೆಡ್ಡಿ-ಕಾವಿ ತಂಡ ತರಹೇವಾರಿ ಮಸಲತ್ತು ಮಾಡಲಾರಂಭಿಸಿದೆ.
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಅಮಾಯಕ ಮಹಿಳೆಯರಿಗೆಲ್ಲ ನಿರಂತರ ಮೋಸ, ವಂಚನೆ ಮಾಡುತ್ತ ದೇಶದ ನೆಮ್ಮದಿ ಕೆಡಿಸಿದ ಪಾಪಕ್ಕೆ ಫಲವಾಗಿ ಅಧಃಪತನದ ಅಂಚಿಗೆ ಬಂದು ನಿಂತಿರುವ ಬಿಜೆಪಿ ಮನುವಾದಿಗಳೀಗ ಮೋದಿ ಕಳಾ ವೃದ್ಧಿಗೆ ಯಜ್ಞದ ಮೊರೆ ಹೋಗಿದ್ದಾರೆ. ಮೌಢ್ಯ ತುಂಬುವ ಹೋಮ-ಹವನ, ಯಜ್ಞ-ಯಾಗ, ಮಡಿ-ಮೈಲಿಗೆ, ಮೋಸ-ಸುಳ್ಳುಗಳ ಪೇಟೆಂಟ್ ಸಂಘಪರಿವಾರ ಪಡೆದುಕೊಂಡು ಅದ್ಯಾವುದೋ ಕಾಲವಾಗಿಹೋಗಿದೆ! ಆದರೆ ಈ ಆನಾಹುತಕಾರಿ ತಂತ್ರಗಳೇ ಸಂಘ ಪರಿವಾರದ ಕೈಗೊಂಬೆ ಮೋದಿಗೆ ತಿರುಗುಬಾಣ ಆಗುತ್ತಿವೆ. ಧನಾತ್ಮಕವಾಗಿ ಜನರ ಮನಸ್ಸು ಗೆಲ್ಲಲಾಗದ ಮೋದಿ ಶಿಷ್ಯಸಂಕುಲ, ಮತ್ತದೇ ವಾಮಮಾರ್ಗಕ್ಕೆ ಬಿದ್ದಿದೆ. ಯಜ್ಞ-ತಂತ್ರದಿಂದ ಜನರ ಮರುಳುಗೊಳಿಸಿ ಆಸ್ತಿತ್ವ ಉಳಿಸಿಕೊಳ್ಳಲು ತಿಣುಕಾಡುತ್ತಿದೆ.
ಲೋಕಸಭಾ ಚುನಾವಣೆ ಎದುರಾಗಿರುವ ಈ ಯುದ್ಧಕಾಲದಲ್ಲಿ ಸೇನಾಧಿಪತಿಯೇ ಕಾಲು ಮುರಿದುಕೊಂಡು ಕೂತಂತಾಗಿದೆ ಬಿಜೆಪಿ ಪರಿಸ್ಥಿತಿ. ಹುಸಿ ವೀರಾವೇಷದ ಭಾಷಣ ಎರಚುವ ಮೋದಿಯ ಮನಮುರಕು ಮಾತುಗಳನ್ನು ಕೇಳುವ ಸ್ಥಿತಿಯಲ್ಲೀಗ ಜನರಿಲ್ಲ ಎಂಬುವುದು ಪರಿವಾರ ಪುರೋಹಿತರಿಗೆ ಪಕ್ಕಾ ಆಗಿದೆ. ರಾಮಮಂದಿರ-ಹಿಂದೂತ್ವದ ಶಾರ್ಟ್‍ಕಟ್ ದಾರಿಯಲ್ಲಿ ದಿಲ್ಲಿ ಸಿಂಹಾಸನ ತಲುಪಿದ್ದ ಮೋದಿಗೆ ಪ್ರಧಾನಿಯಾಗಿ ನಾಲ್ಕುವರೆ ವರ್ಷ ಕಳೆದರೂ ಅಯೋಧ್ಯೆ, ರಾಮಮಂದಿರ ನೆನಪಾಗಲೇ ಇಲ್ಲ. ಕಟ್ಟರ್ ಹಿಂದೂತ್ವದ ಹುಡುಗರಿಗೂ ಅಯೋಧ್ಯೆಯ ರಾಮಮಂದಿರ ಅನ್ನೋದು, ಬಿಜೆಪಿಯು ಎಲೆಕ್ಷನ್ ಗೆಲುವಿನ ಸಲುವಾಗಿ ಹುಟ್ಟುಹಾಕುವ ಅತಿದೊಡ್ಡ ವಂಚನೆ ಅನ್ನೋದು ನಿಸ್ಸಂಶಯವಾಗಿ ಅರ್ಥವಾಗಿಬಿಟ್ಟಿದೆ! ಆ ಕಾರಣಕ್ಕೇ 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಹೊತ್ತಿ ಉರಿದಿದ್ದ ಮಧ್ಯಪ್ರದೇಶ, ರಾಜಸ್ಥಾನದಂತಹ ಉತ್ತರ ಭಾರತದ ಹಿಂದಿ ಹಾರ್ಟ್‍ಲ್ಯಾಂಡ್‍ಗಳಲ್ಲೇ ಕೇಸರಿ ಸಾಧುಗಳ ರಾಮಮಂದಿರ ಜನಾಗ್ರಹ ಸಮಾವೇಶಗಳು ಬಿಜೆಪಿಗೆ ಮತ ತಂದುಕೊಡುವಲ್ಲಿ ಸಂಪೂರ್ಣವಾಗಿ ಸೋತುಹೋಗಿವೆ.
ದೇಶದ ಬೆನ್ನೆಲುಬಾದ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿದಿದ್ದರೆ, ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿ ಇರೋ ಉದ್ಯೋಗಗಳನ್ನೇ ನಾಶ ಮಾಡುವ ಕೆಲಸಕ್ಕೆ ಹೈಹಾಕಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ಜನಮನ ಗೆದ್ದಿದ್ದ ಇಂದಿರಾ ಗಾಂಧಿಯಂತೆ ನೋಟ್ ಬ್ಯಾನ್ ಮಾಡಲು ಹೋಗಿ ಮೋದಿ ಇಡೀ ದೇಶದ ಆರ್ಥಿಕತೆಯೇ ಮುಗ್ಗರಿಸಿ ಬೀಳುವಂತೆ ಮಾಡಿದ್ದಾರೆ. ಕಪ್ಪುಹಣವನ್ನೂ ತರದೆ, ಪ್ರತಿ ಅಕೌಂಟಿಗೆ ಹದಿನೈದು ಲಕ್ಷವನ್ನೂ ಡೆಪಾಸಿಟ್ ಮಾಡದ ಮೋದಿಯ ವರ್ಚಸ್ಸೀಗ ಸಂಪೂರ್ಣ ಕುಸಿದುಬಿದ್ದಿದೆ. ಸಾಲದ್ದಕ್ಕೆ ಅಂಬಾನಿ-ಅದಾನಿಗಳ ಖಜಾನೆ ಹಿಗ್ಗಿಸಲು ಹೋಗಿ ರಫೇಲ್ ಭಾನ್ಗಡಿಯಲ್ಲಿ ಮೋದಿ ಮುಸುಡಿಯನ್ನೇ ಸಿಗಾಕಿಕೊಂಡು ಕೂತು ದೇಶದ ಮುಂದೆ ಬೆತ್ತಲಾಗಿದ್ದಾರೆ. ಮೊನ್ನೆ ನಡೆದ ಪಂಚರಾಜ್ಯ ಫಲಿತಾಂಶಗಳೇ ಇದಕ್ಕೆ ಸಾಕ್ಷಿ.
ಇಂಥಾ ಯಡವಟ್ಟುಗಳನ್ನು ಸರಿ ಮಾಡಿಕೊಂಡು ಜನರ ಮನಸ್ಸನ್ನು ಗೆಲ್ಲೋದು ಬಿಟ್ಟು, ಮೋದಿಯ ಪರಿವಾರದ ಪಟಾಲಮ್ಮು ಯಜ್ಞ, ಯಾಗ ಮಾಡಿ ವರ್ಚಸ್ಸು ವೃದ್ಧಿಗೆ ಕೈಹಾಕಿದೆ! ಆ ಮೂಲಕ ತಮ್ಮ ಹಾದಿಯೇನಿದ್ದರೂ ಪ್ರಗತಿಯತ್ತಲ್ಲ, ಹಳೇ ಶಿಲಾಯುಗದತ್ತ ಅನ್ನೋದನ್ನು ತಾನೇ ಸಾಬೀತು ಮಾಡಿಕೊಂಡಿದೆ. ಬಿಜೆಪಿಯ ಈ ಶಿಲಾಯುಗದ ನಿದರ್ಶನ ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗೋವಾ ಬಿಜೆಪಿ ಸರ್ಕಾರದ ಕೃಷಿ ಇಲಾಖೆ ವೇದ-ಮಂತ್ರ ಪಠಣದಿಂದ ರೈತರು ಬಂಪರ್ ಬೆಳೆ ತೆಗೆದು ಸುಖವಾಗಿ ಇರಬಹುದೆಂದು ಅಧೀಕೃತವಾಗೇ ಘೋಷಿಸಿದ್ದು ಓದುಗರಿಗೆ ನೆನಪಿರಬಹುದು.
ಟೀಮ್ ಮೋದಿ ತನ್ನ ಕಫ್ತಾನನ ವೈಫಲ್ಯಗಳನ್ನು ಮುಚ್ಚಿಹಾಕುವ ಸಲುವಾಗಿ ಮೌಢ್ಯದ ಯಜ್ಞ-ಮಂತ್ರ-ವೇದಗಳ ಮೊರೆಹೋಗಿರೋದನ್ನು ಕಂಡು ಜನ ನಗಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಬದಿಯಡ್ಕ ಬಳಿಯ ಮಾನ್ಯ ಸಮೀಪದ ಮೇಗಿನಡ್ಕ ಎಂಬಲ್ಲಿ ಮೋದಿಯನ್ನು ಕಂಟಕದಿಂದ ಪಾರು ಮಾಡಲು ಯಜ್ಞ ಒಂದನ್ನು ಇದೇ ಡಿಸೆಂಬರ್ 28 ರಿಂದ 31ರವರೆಗೆ ನಡೆಸಲು ಚೆಡ್ಡಿಗಳು ನಿರ್ಧರಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಕಳಾವೃದ್ಧಿ ಧಾರ್ಮಿಕ ದಗಲುಬಾಜಿತನದಿಂದಲೇ ಪ್ರವರ್ಧಮಾನಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು ಬೆಂಕಿ ಬ್ರಾಂಡಿನ ಸಂಸದ ನಳಿನ್ ಕುಮಾರ್ ಕಟೀಲ್ ಗುರು-ಶಿಷ್ಯರ “ನಮೋ ಯಜ್ಞ” ಎಂಬ ಸರ್ಕಸ್ಸೇ ಈ ಲೇಟೆಸ್ಟ್ ಪ್ರಹಸನ. ನಾಲ್ಕು ದಿನ ನಮೋ, ಜ್ಞಾನ, ಭಕ್ತಿ ಮತ್ತು ಯಕ್ಷ ಯಜ್ಞಗಳೆಂಬ ಚತುರ್ವಿಧ ಹಿಕಮತ್ತಿನ ಮೂಲ ಉದ್ದೇಶ ಮೋದಿಗೆ ಅರ್ಥಾತ್ ಬಿಜೆಪಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡೋದು!
ಕಾರ್ಯಕ್ರಮದ ಸಂಘಟಕರೇ ಹೇಳುವ ಹಾಗೆ ಇದೊಂದು ಮೋದಿಗೆ ಶಕ್ತಿ ತುಂಬುವ ಯಾಗ. ಅಲ್ಲಿಗೆ ಮೋದಿ ದುರ್ಬಲಗೊಂಡಿದ್ದಾರೆ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಂಡಂತಾಯ್ತು! ಇಂಥದೊಂದು ಯಜ್ಞ ಮೋದಿಗಿಂತ ಹೆಚ್ಚಾಗಿ ಸೋಲಿನ ಭೀತಿಯಲ್ಲಿರುವ ಲೋಕಲ್ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ಬೇಕಾಗಿದೆ. ಪರಮ ಚೆಡ್ಡಿ ಸಾಹಿತಿಗಳಾದ ಎಸ್.ಎಲ್.ಭೈರಪ್ಪ, ಪ್ರಧಾನ್ ಗುರುದತ್ತ ಜತೆ ಸಂವಾದ ಕಾರ್ಯಕ್ರಮ ಹೆಣೆದಿರುವ ಕಲ್ಲಡ್ಕ, ನಳಿನ್‍ರ ಮುಖ್ಯಗುರಿ ಯುವಕರ ದಿಕ್ಕುತಪ್ಪಿಸಿ ಚುನಾವಣೆಗೆ ಅಣಿಯಾಗುವುದು. ಒಂದು ಕಾಲಕ್ಕೆ ಸುಶಿಕ್ಷಿತರ, ಪ್ರಜ್ಞಾವಂತರ ಜಿಲ್ಲೆಯೆಂದೇ ಹೆಸರಾಗಿದ್ದ ದಕ್ಷಿಣ ಕನ್ನಡದ ಮಂದಿ ಈಗ ಇಂಥಾ ಹುಚ್ಚಾಟಗಳಿಗೆ ಸಾಕ್ಷಿಯಾಗಬೇಕಾಗಿ ಬಂದಿರೋದು ದುರಂತ.
ತಮಾಷೆಯೆಂದರೆ, ತೆಲಂಗಾಣದ ಎಲೆಕ್ಷನ್ ಹೊತ್ತಲ್ಲಿ ಪ್ರಧಾನಿ ಮೋದಿಯು ಅಲ್ಲಿನ ಟಿಆರ್‍ಎಸ್ ಪಕ್ಷದ ಅಧಿನಾಯಕ ಕೆಸಿಆರ್‍ಗೆ ಸೋಲಿನ ಭೀತಿ ಆವರಿಸಿರೋದರಿಂದ ಜ್ಯೋತಿಷಿಗಳ ಮಾತುಕೇಳಿಕೊಂಡು ಹೋಮ-ಹವನ-ಪೂಜೆ ಮಾಡಿಸಿಕೊಂಡು ತಿರುಗಾಡುತ್ತಿದ್ದಾರೆಂದು ಗೇಲಿ ಮಾಡಿದ್ದುಂಟು!! ಈಗ ಮೋದಿ ಭಕ್ತರು ಅದೇ ಹಾದಿಯಲ್ಲಿದ್ದಾರೆ. ಅಂದಹಾಗೆ, ಎಲ್ಲರನ್ನೂ ಎಲ್ಲ ಕಾಲಕ್ಕೂ ಮೂರ್ಖರನ್ನಾಗಿ ಮಾಡಲು ಸಾಧ್ಯವಾ?
ಅಂತೂ ತಮ್ಮ ಪತನ ಪ್ರಾರಂಭವಾಗಿದೆ ಅನ್ನೋದನ್ನು ಮೋದಿ ಪರಿವಾರವೇ ಈ ಯಜ್ಞದ ಮೂಲಕ ಒಪ್ಪಿಕೊಂಡಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...