Homeಮುಖಪುಟಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

- Advertisement -
- Advertisement -

ಶುದ್ಧೋದನ |

ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ ಹಿಡನ್ ಅಜೆಂಡಾಗಳನ್ನೆಲ್ಲ ಜಾರಿಗೊಳಿಸಲು ಮೋದಿಯಂಥ “ಬದಲಿ ಶೂದ್ರ” ಸದ್ಯಕ್ಕಂತೂ ಆರೆಸೆಸ್-ವಿಎಚ್‍ಪಿ ಬಳಗಕ್ಕೆ ಸಿಗುವಹಾಗಿಲ್ಲ. ಹಾಗಾಗಿ ಹೇಗಾದರೂ ಮಾಡಿ ಸುಳ್ಳುಗಳಿಗೆ ಕಲಾತ್ಮಕವಾಗಿ ಹೂಳಪು ಕೊಡಲು ಚೆಡ್ಡಿ-ಕಾವಿ ತಂಡ ತರಹೇವಾರಿ ಮಸಲತ್ತು ಮಾಡಲಾರಂಭಿಸಿದೆ.
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಅಮಾಯಕ ಮಹಿಳೆಯರಿಗೆಲ್ಲ ನಿರಂತರ ಮೋಸ, ವಂಚನೆ ಮಾಡುತ್ತ ದೇಶದ ನೆಮ್ಮದಿ ಕೆಡಿಸಿದ ಪಾಪಕ್ಕೆ ಫಲವಾಗಿ ಅಧಃಪತನದ ಅಂಚಿಗೆ ಬಂದು ನಿಂತಿರುವ ಬಿಜೆಪಿ ಮನುವಾದಿಗಳೀಗ ಮೋದಿ ಕಳಾ ವೃದ್ಧಿಗೆ ಯಜ್ಞದ ಮೊರೆ ಹೋಗಿದ್ದಾರೆ. ಮೌಢ್ಯ ತುಂಬುವ ಹೋಮ-ಹವನ, ಯಜ್ಞ-ಯಾಗ, ಮಡಿ-ಮೈಲಿಗೆ, ಮೋಸ-ಸುಳ್ಳುಗಳ ಪೇಟೆಂಟ್ ಸಂಘಪರಿವಾರ ಪಡೆದುಕೊಂಡು ಅದ್ಯಾವುದೋ ಕಾಲವಾಗಿಹೋಗಿದೆ! ಆದರೆ ಈ ಆನಾಹುತಕಾರಿ ತಂತ್ರಗಳೇ ಸಂಘ ಪರಿವಾರದ ಕೈಗೊಂಬೆ ಮೋದಿಗೆ ತಿರುಗುಬಾಣ ಆಗುತ್ತಿವೆ. ಧನಾತ್ಮಕವಾಗಿ ಜನರ ಮನಸ್ಸು ಗೆಲ್ಲಲಾಗದ ಮೋದಿ ಶಿಷ್ಯಸಂಕುಲ, ಮತ್ತದೇ ವಾಮಮಾರ್ಗಕ್ಕೆ ಬಿದ್ದಿದೆ. ಯಜ್ಞ-ತಂತ್ರದಿಂದ ಜನರ ಮರುಳುಗೊಳಿಸಿ ಆಸ್ತಿತ್ವ ಉಳಿಸಿಕೊಳ್ಳಲು ತಿಣುಕಾಡುತ್ತಿದೆ.
ಲೋಕಸಭಾ ಚುನಾವಣೆ ಎದುರಾಗಿರುವ ಈ ಯುದ್ಧಕಾಲದಲ್ಲಿ ಸೇನಾಧಿಪತಿಯೇ ಕಾಲು ಮುರಿದುಕೊಂಡು ಕೂತಂತಾಗಿದೆ ಬಿಜೆಪಿ ಪರಿಸ್ಥಿತಿ. ಹುಸಿ ವೀರಾವೇಷದ ಭಾಷಣ ಎರಚುವ ಮೋದಿಯ ಮನಮುರಕು ಮಾತುಗಳನ್ನು ಕೇಳುವ ಸ್ಥಿತಿಯಲ್ಲೀಗ ಜನರಿಲ್ಲ ಎಂಬುವುದು ಪರಿವಾರ ಪುರೋಹಿತರಿಗೆ ಪಕ್ಕಾ ಆಗಿದೆ. ರಾಮಮಂದಿರ-ಹಿಂದೂತ್ವದ ಶಾರ್ಟ್‍ಕಟ್ ದಾರಿಯಲ್ಲಿ ದಿಲ್ಲಿ ಸಿಂಹಾಸನ ತಲುಪಿದ್ದ ಮೋದಿಗೆ ಪ್ರಧಾನಿಯಾಗಿ ನಾಲ್ಕುವರೆ ವರ್ಷ ಕಳೆದರೂ ಅಯೋಧ್ಯೆ, ರಾಮಮಂದಿರ ನೆನಪಾಗಲೇ ಇಲ್ಲ. ಕಟ್ಟರ್ ಹಿಂದೂತ್ವದ ಹುಡುಗರಿಗೂ ಅಯೋಧ್ಯೆಯ ರಾಮಮಂದಿರ ಅನ್ನೋದು, ಬಿಜೆಪಿಯು ಎಲೆಕ್ಷನ್ ಗೆಲುವಿನ ಸಲುವಾಗಿ ಹುಟ್ಟುಹಾಕುವ ಅತಿದೊಡ್ಡ ವಂಚನೆ ಅನ್ನೋದು ನಿಸ್ಸಂಶಯವಾಗಿ ಅರ್ಥವಾಗಿಬಿಟ್ಟಿದೆ! ಆ ಕಾರಣಕ್ಕೇ 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಹೊತ್ತಿ ಉರಿದಿದ್ದ ಮಧ್ಯಪ್ರದೇಶ, ರಾಜಸ್ಥಾನದಂತಹ ಉತ್ತರ ಭಾರತದ ಹಿಂದಿ ಹಾರ್ಟ್‍ಲ್ಯಾಂಡ್‍ಗಳಲ್ಲೇ ಕೇಸರಿ ಸಾಧುಗಳ ರಾಮಮಂದಿರ ಜನಾಗ್ರಹ ಸಮಾವೇಶಗಳು ಬಿಜೆಪಿಗೆ ಮತ ತಂದುಕೊಡುವಲ್ಲಿ ಸಂಪೂರ್ಣವಾಗಿ ಸೋತುಹೋಗಿವೆ.
ದೇಶದ ಬೆನ್ನೆಲುಬಾದ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿದಿದ್ದರೆ, ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿ ಇರೋ ಉದ್ಯೋಗಗಳನ್ನೇ ನಾಶ ಮಾಡುವ ಕೆಲಸಕ್ಕೆ ಹೈಹಾಕಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ಜನಮನ ಗೆದ್ದಿದ್ದ ಇಂದಿರಾ ಗಾಂಧಿಯಂತೆ ನೋಟ್ ಬ್ಯಾನ್ ಮಾಡಲು ಹೋಗಿ ಮೋದಿ ಇಡೀ ದೇಶದ ಆರ್ಥಿಕತೆಯೇ ಮುಗ್ಗರಿಸಿ ಬೀಳುವಂತೆ ಮಾಡಿದ್ದಾರೆ. ಕಪ್ಪುಹಣವನ್ನೂ ತರದೆ, ಪ್ರತಿ ಅಕೌಂಟಿಗೆ ಹದಿನೈದು ಲಕ್ಷವನ್ನೂ ಡೆಪಾಸಿಟ್ ಮಾಡದ ಮೋದಿಯ ವರ್ಚಸ್ಸೀಗ ಸಂಪೂರ್ಣ ಕುಸಿದುಬಿದ್ದಿದೆ. ಸಾಲದ್ದಕ್ಕೆ ಅಂಬಾನಿ-ಅದಾನಿಗಳ ಖಜಾನೆ ಹಿಗ್ಗಿಸಲು ಹೋಗಿ ರಫೇಲ್ ಭಾನ್ಗಡಿಯಲ್ಲಿ ಮೋದಿ ಮುಸುಡಿಯನ್ನೇ ಸಿಗಾಕಿಕೊಂಡು ಕೂತು ದೇಶದ ಮುಂದೆ ಬೆತ್ತಲಾಗಿದ್ದಾರೆ. ಮೊನ್ನೆ ನಡೆದ ಪಂಚರಾಜ್ಯ ಫಲಿತಾಂಶಗಳೇ ಇದಕ್ಕೆ ಸಾಕ್ಷಿ.
ಇಂಥಾ ಯಡವಟ್ಟುಗಳನ್ನು ಸರಿ ಮಾಡಿಕೊಂಡು ಜನರ ಮನಸ್ಸನ್ನು ಗೆಲ್ಲೋದು ಬಿಟ್ಟು, ಮೋದಿಯ ಪರಿವಾರದ ಪಟಾಲಮ್ಮು ಯಜ್ಞ, ಯಾಗ ಮಾಡಿ ವರ್ಚಸ್ಸು ವೃದ್ಧಿಗೆ ಕೈಹಾಕಿದೆ! ಆ ಮೂಲಕ ತಮ್ಮ ಹಾದಿಯೇನಿದ್ದರೂ ಪ್ರಗತಿಯತ್ತಲ್ಲ, ಹಳೇ ಶಿಲಾಯುಗದತ್ತ ಅನ್ನೋದನ್ನು ತಾನೇ ಸಾಬೀತು ಮಾಡಿಕೊಂಡಿದೆ. ಬಿಜೆಪಿಯ ಈ ಶಿಲಾಯುಗದ ನಿದರ್ಶನ ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗೋವಾ ಬಿಜೆಪಿ ಸರ್ಕಾರದ ಕೃಷಿ ಇಲಾಖೆ ವೇದ-ಮಂತ್ರ ಪಠಣದಿಂದ ರೈತರು ಬಂಪರ್ ಬೆಳೆ ತೆಗೆದು ಸುಖವಾಗಿ ಇರಬಹುದೆಂದು ಅಧೀಕೃತವಾಗೇ ಘೋಷಿಸಿದ್ದು ಓದುಗರಿಗೆ ನೆನಪಿರಬಹುದು.
ಟೀಮ್ ಮೋದಿ ತನ್ನ ಕಫ್ತಾನನ ವೈಫಲ್ಯಗಳನ್ನು ಮುಚ್ಚಿಹಾಕುವ ಸಲುವಾಗಿ ಮೌಢ್ಯದ ಯಜ್ಞ-ಮಂತ್ರ-ವೇದಗಳ ಮೊರೆಹೋಗಿರೋದನ್ನು ಕಂಡು ಜನ ನಗಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಬದಿಯಡ್ಕ ಬಳಿಯ ಮಾನ್ಯ ಸಮೀಪದ ಮೇಗಿನಡ್ಕ ಎಂಬಲ್ಲಿ ಮೋದಿಯನ್ನು ಕಂಟಕದಿಂದ ಪಾರು ಮಾಡಲು ಯಜ್ಞ ಒಂದನ್ನು ಇದೇ ಡಿಸೆಂಬರ್ 28 ರಿಂದ 31ರವರೆಗೆ ನಡೆಸಲು ಚೆಡ್ಡಿಗಳು ನಿರ್ಧರಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಕಳಾವೃದ್ಧಿ ಧಾರ್ಮಿಕ ದಗಲುಬಾಜಿತನದಿಂದಲೇ ಪ್ರವರ್ಧಮಾನಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು ಬೆಂಕಿ ಬ್ರಾಂಡಿನ ಸಂಸದ ನಳಿನ್ ಕುಮಾರ್ ಕಟೀಲ್ ಗುರು-ಶಿಷ್ಯರ “ನಮೋ ಯಜ್ಞ” ಎಂಬ ಸರ್ಕಸ್ಸೇ ಈ ಲೇಟೆಸ್ಟ್ ಪ್ರಹಸನ. ನಾಲ್ಕು ದಿನ ನಮೋ, ಜ್ಞಾನ, ಭಕ್ತಿ ಮತ್ತು ಯಕ್ಷ ಯಜ್ಞಗಳೆಂಬ ಚತುರ್ವಿಧ ಹಿಕಮತ್ತಿನ ಮೂಲ ಉದ್ದೇಶ ಮೋದಿಗೆ ಅರ್ಥಾತ್ ಬಿಜೆಪಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡೋದು!
ಕಾರ್ಯಕ್ರಮದ ಸಂಘಟಕರೇ ಹೇಳುವ ಹಾಗೆ ಇದೊಂದು ಮೋದಿಗೆ ಶಕ್ತಿ ತುಂಬುವ ಯಾಗ. ಅಲ್ಲಿಗೆ ಮೋದಿ ದುರ್ಬಲಗೊಂಡಿದ್ದಾರೆ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಂಡಂತಾಯ್ತು! ಇಂಥದೊಂದು ಯಜ್ಞ ಮೋದಿಗಿಂತ ಹೆಚ್ಚಾಗಿ ಸೋಲಿನ ಭೀತಿಯಲ್ಲಿರುವ ಲೋಕಲ್ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ಬೇಕಾಗಿದೆ. ಪರಮ ಚೆಡ್ಡಿ ಸಾಹಿತಿಗಳಾದ ಎಸ್.ಎಲ್.ಭೈರಪ್ಪ, ಪ್ರಧಾನ್ ಗುರುದತ್ತ ಜತೆ ಸಂವಾದ ಕಾರ್ಯಕ್ರಮ ಹೆಣೆದಿರುವ ಕಲ್ಲಡ್ಕ, ನಳಿನ್‍ರ ಮುಖ್ಯಗುರಿ ಯುವಕರ ದಿಕ್ಕುತಪ್ಪಿಸಿ ಚುನಾವಣೆಗೆ ಅಣಿಯಾಗುವುದು. ಒಂದು ಕಾಲಕ್ಕೆ ಸುಶಿಕ್ಷಿತರ, ಪ್ರಜ್ಞಾವಂತರ ಜಿಲ್ಲೆಯೆಂದೇ ಹೆಸರಾಗಿದ್ದ ದಕ್ಷಿಣ ಕನ್ನಡದ ಮಂದಿ ಈಗ ಇಂಥಾ ಹುಚ್ಚಾಟಗಳಿಗೆ ಸಾಕ್ಷಿಯಾಗಬೇಕಾಗಿ ಬಂದಿರೋದು ದುರಂತ.
ತಮಾಷೆಯೆಂದರೆ, ತೆಲಂಗಾಣದ ಎಲೆಕ್ಷನ್ ಹೊತ್ತಲ್ಲಿ ಪ್ರಧಾನಿ ಮೋದಿಯು ಅಲ್ಲಿನ ಟಿಆರ್‍ಎಸ್ ಪಕ್ಷದ ಅಧಿನಾಯಕ ಕೆಸಿಆರ್‍ಗೆ ಸೋಲಿನ ಭೀತಿ ಆವರಿಸಿರೋದರಿಂದ ಜ್ಯೋತಿಷಿಗಳ ಮಾತುಕೇಳಿಕೊಂಡು ಹೋಮ-ಹವನ-ಪೂಜೆ ಮಾಡಿಸಿಕೊಂಡು ತಿರುಗಾಡುತ್ತಿದ್ದಾರೆಂದು ಗೇಲಿ ಮಾಡಿದ್ದುಂಟು!! ಈಗ ಮೋದಿ ಭಕ್ತರು ಅದೇ ಹಾದಿಯಲ್ಲಿದ್ದಾರೆ. ಅಂದಹಾಗೆ, ಎಲ್ಲರನ್ನೂ ಎಲ್ಲ ಕಾಲಕ್ಕೂ ಮೂರ್ಖರನ್ನಾಗಿ ಮಾಡಲು ಸಾಧ್ಯವಾ?
ಅಂತೂ ತಮ್ಮ ಪತನ ಪ್ರಾರಂಭವಾಗಿದೆ ಅನ್ನೋದನ್ನು ಮೋದಿ ಪರಿವಾರವೇ ಈ ಯಜ್ಞದ ಮೂಲಕ ಒಪ್ಪಿಕೊಂಡಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...