Homeಮುಖಪುಟಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

- Advertisement -
- Advertisement -

ಶುದ್ಧೋದನ |

ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ ಹಿಡನ್ ಅಜೆಂಡಾಗಳನ್ನೆಲ್ಲ ಜಾರಿಗೊಳಿಸಲು ಮೋದಿಯಂಥ “ಬದಲಿ ಶೂದ್ರ” ಸದ್ಯಕ್ಕಂತೂ ಆರೆಸೆಸ್-ವಿಎಚ್‍ಪಿ ಬಳಗಕ್ಕೆ ಸಿಗುವಹಾಗಿಲ್ಲ. ಹಾಗಾಗಿ ಹೇಗಾದರೂ ಮಾಡಿ ಸುಳ್ಳುಗಳಿಗೆ ಕಲಾತ್ಮಕವಾಗಿ ಹೂಳಪು ಕೊಡಲು ಚೆಡ್ಡಿ-ಕಾವಿ ತಂಡ ತರಹೇವಾರಿ ಮಸಲತ್ತು ಮಾಡಲಾರಂಭಿಸಿದೆ.
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಅಮಾಯಕ ಮಹಿಳೆಯರಿಗೆಲ್ಲ ನಿರಂತರ ಮೋಸ, ವಂಚನೆ ಮಾಡುತ್ತ ದೇಶದ ನೆಮ್ಮದಿ ಕೆಡಿಸಿದ ಪಾಪಕ್ಕೆ ಫಲವಾಗಿ ಅಧಃಪತನದ ಅಂಚಿಗೆ ಬಂದು ನಿಂತಿರುವ ಬಿಜೆಪಿ ಮನುವಾದಿಗಳೀಗ ಮೋದಿ ಕಳಾ ವೃದ್ಧಿಗೆ ಯಜ್ಞದ ಮೊರೆ ಹೋಗಿದ್ದಾರೆ. ಮೌಢ್ಯ ತುಂಬುವ ಹೋಮ-ಹವನ, ಯಜ್ಞ-ಯಾಗ, ಮಡಿ-ಮೈಲಿಗೆ, ಮೋಸ-ಸುಳ್ಳುಗಳ ಪೇಟೆಂಟ್ ಸಂಘಪರಿವಾರ ಪಡೆದುಕೊಂಡು ಅದ್ಯಾವುದೋ ಕಾಲವಾಗಿಹೋಗಿದೆ! ಆದರೆ ಈ ಆನಾಹುತಕಾರಿ ತಂತ್ರಗಳೇ ಸಂಘ ಪರಿವಾರದ ಕೈಗೊಂಬೆ ಮೋದಿಗೆ ತಿರುಗುಬಾಣ ಆಗುತ್ತಿವೆ. ಧನಾತ್ಮಕವಾಗಿ ಜನರ ಮನಸ್ಸು ಗೆಲ್ಲಲಾಗದ ಮೋದಿ ಶಿಷ್ಯಸಂಕುಲ, ಮತ್ತದೇ ವಾಮಮಾರ್ಗಕ್ಕೆ ಬಿದ್ದಿದೆ. ಯಜ್ಞ-ತಂತ್ರದಿಂದ ಜನರ ಮರುಳುಗೊಳಿಸಿ ಆಸ್ತಿತ್ವ ಉಳಿಸಿಕೊಳ್ಳಲು ತಿಣುಕಾಡುತ್ತಿದೆ.
ಲೋಕಸಭಾ ಚುನಾವಣೆ ಎದುರಾಗಿರುವ ಈ ಯುದ್ಧಕಾಲದಲ್ಲಿ ಸೇನಾಧಿಪತಿಯೇ ಕಾಲು ಮುರಿದುಕೊಂಡು ಕೂತಂತಾಗಿದೆ ಬಿಜೆಪಿ ಪರಿಸ್ಥಿತಿ. ಹುಸಿ ವೀರಾವೇಷದ ಭಾಷಣ ಎರಚುವ ಮೋದಿಯ ಮನಮುರಕು ಮಾತುಗಳನ್ನು ಕೇಳುವ ಸ್ಥಿತಿಯಲ್ಲೀಗ ಜನರಿಲ್ಲ ಎಂಬುವುದು ಪರಿವಾರ ಪುರೋಹಿತರಿಗೆ ಪಕ್ಕಾ ಆಗಿದೆ. ರಾಮಮಂದಿರ-ಹಿಂದೂತ್ವದ ಶಾರ್ಟ್‍ಕಟ್ ದಾರಿಯಲ್ಲಿ ದಿಲ್ಲಿ ಸಿಂಹಾಸನ ತಲುಪಿದ್ದ ಮೋದಿಗೆ ಪ್ರಧಾನಿಯಾಗಿ ನಾಲ್ಕುವರೆ ವರ್ಷ ಕಳೆದರೂ ಅಯೋಧ್ಯೆ, ರಾಮಮಂದಿರ ನೆನಪಾಗಲೇ ಇಲ್ಲ. ಕಟ್ಟರ್ ಹಿಂದೂತ್ವದ ಹುಡುಗರಿಗೂ ಅಯೋಧ್ಯೆಯ ರಾಮಮಂದಿರ ಅನ್ನೋದು, ಬಿಜೆಪಿಯು ಎಲೆಕ್ಷನ್ ಗೆಲುವಿನ ಸಲುವಾಗಿ ಹುಟ್ಟುಹಾಕುವ ಅತಿದೊಡ್ಡ ವಂಚನೆ ಅನ್ನೋದು ನಿಸ್ಸಂಶಯವಾಗಿ ಅರ್ಥವಾಗಿಬಿಟ್ಟಿದೆ! ಆ ಕಾರಣಕ್ಕೇ 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಹೊತ್ತಿ ಉರಿದಿದ್ದ ಮಧ್ಯಪ್ರದೇಶ, ರಾಜಸ್ಥಾನದಂತಹ ಉತ್ತರ ಭಾರತದ ಹಿಂದಿ ಹಾರ್ಟ್‍ಲ್ಯಾಂಡ್‍ಗಳಲ್ಲೇ ಕೇಸರಿ ಸಾಧುಗಳ ರಾಮಮಂದಿರ ಜನಾಗ್ರಹ ಸಮಾವೇಶಗಳು ಬಿಜೆಪಿಗೆ ಮತ ತಂದುಕೊಡುವಲ್ಲಿ ಸಂಪೂರ್ಣವಾಗಿ ಸೋತುಹೋಗಿವೆ.
ದೇಶದ ಬೆನ್ನೆಲುಬಾದ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿದಿದ್ದರೆ, ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿ ಇರೋ ಉದ್ಯೋಗಗಳನ್ನೇ ನಾಶ ಮಾಡುವ ಕೆಲಸಕ್ಕೆ ಹೈಹಾಕಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ಜನಮನ ಗೆದ್ದಿದ್ದ ಇಂದಿರಾ ಗಾಂಧಿಯಂತೆ ನೋಟ್ ಬ್ಯಾನ್ ಮಾಡಲು ಹೋಗಿ ಮೋದಿ ಇಡೀ ದೇಶದ ಆರ್ಥಿಕತೆಯೇ ಮುಗ್ಗರಿಸಿ ಬೀಳುವಂತೆ ಮಾಡಿದ್ದಾರೆ. ಕಪ್ಪುಹಣವನ್ನೂ ತರದೆ, ಪ್ರತಿ ಅಕೌಂಟಿಗೆ ಹದಿನೈದು ಲಕ್ಷವನ್ನೂ ಡೆಪಾಸಿಟ್ ಮಾಡದ ಮೋದಿಯ ವರ್ಚಸ್ಸೀಗ ಸಂಪೂರ್ಣ ಕುಸಿದುಬಿದ್ದಿದೆ. ಸಾಲದ್ದಕ್ಕೆ ಅಂಬಾನಿ-ಅದಾನಿಗಳ ಖಜಾನೆ ಹಿಗ್ಗಿಸಲು ಹೋಗಿ ರಫೇಲ್ ಭಾನ್ಗಡಿಯಲ್ಲಿ ಮೋದಿ ಮುಸುಡಿಯನ್ನೇ ಸಿಗಾಕಿಕೊಂಡು ಕೂತು ದೇಶದ ಮುಂದೆ ಬೆತ್ತಲಾಗಿದ್ದಾರೆ. ಮೊನ್ನೆ ನಡೆದ ಪಂಚರಾಜ್ಯ ಫಲಿತಾಂಶಗಳೇ ಇದಕ್ಕೆ ಸಾಕ್ಷಿ.
ಇಂಥಾ ಯಡವಟ್ಟುಗಳನ್ನು ಸರಿ ಮಾಡಿಕೊಂಡು ಜನರ ಮನಸ್ಸನ್ನು ಗೆಲ್ಲೋದು ಬಿಟ್ಟು, ಮೋದಿಯ ಪರಿವಾರದ ಪಟಾಲಮ್ಮು ಯಜ್ಞ, ಯಾಗ ಮಾಡಿ ವರ್ಚಸ್ಸು ವೃದ್ಧಿಗೆ ಕೈಹಾಕಿದೆ! ಆ ಮೂಲಕ ತಮ್ಮ ಹಾದಿಯೇನಿದ್ದರೂ ಪ್ರಗತಿಯತ್ತಲ್ಲ, ಹಳೇ ಶಿಲಾಯುಗದತ್ತ ಅನ್ನೋದನ್ನು ತಾನೇ ಸಾಬೀತು ಮಾಡಿಕೊಂಡಿದೆ. ಬಿಜೆಪಿಯ ಈ ಶಿಲಾಯುಗದ ನಿದರ್ಶನ ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗೋವಾ ಬಿಜೆಪಿ ಸರ್ಕಾರದ ಕೃಷಿ ಇಲಾಖೆ ವೇದ-ಮಂತ್ರ ಪಠಣದಿಂದ ರೈತರು ಬಂಪರ್ ಬೆಳೆ ತೆಗೆದು ಸುಖವಾಗಿ ಇರಬಹುದೆಂದು ಅಧೀಕೃತವಾಗೇ ಘೋಷಿಸಿದ್ದು ಓದುಗರಿಗೆ ನೆನಪಿರಬಹುದು.
ಟೀಮ್ ಮೋದಿ ತನ್ನ ಕಫ್ತಾನನ ವೈಫಲ್ಯಗಳನ್ನು ಮುಚ್ಚಿಹಾಕುವ ಸಲುವಾಗಿ ಮೌಢ್ಯದ ಯಜ್ಞ-ಮಂತ್ರ-ವೇದಗಳ ಮೊರೆಹೋಗಿರೋದನ್ನು ಕಂಡು ಜನ ನಗಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಬದಿಯಡ್ಕ ಬಳಿಯ ಮಾನ್ಯ ಸಮೀಪದ ಮೇಗಿನಡ್ಕ ಎಂಬಲ್ಲಿ ಮೋದಿಯನ್ನು ಕಂಟಕದಿಂದ ಪಾರು ಮಾಡಲು ಯಜ್ಞ ಒಂದನ್ನು ಇದೇ ಡಿಸೆಂಬರ್ 28 ರಿಂದ 31ರವರೆಗೆ ನಡೆಸಲು ಚೆಡ್ಡಿಗಳು ನಿರ್ಧರಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಕಳಾವೃದ್ಧಿ ಧಾರ್ಮಿಕ ದಗಲುಬಾಜಿತನದಿಂದಲೇ ಪ್ರವರ್ಧಮಾನಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು ಬೆಂಕಿ ಬ್ರಾಂಡಿನ ಸಂಸದ ನಳಿನ್ ಕುಮಾರ್ ಕಟೀಲ್ ಗುರು-ಶಿಷ್ಯರ “ನಮೋ ಯಜ್ಞ” ಎಂಬ ಸರ್ಕಸ್ಸೇ ಈ ಲೇಟೆಸ್ಟ್ ಪ್ರಹಸನ. ನಾಲ್ಕು ದಿನ ನಮೋ, ಜ್ಞಾನ, ಭಕ್ತಿ ಮತ್ತು ಯಕ್ಷ ಯಜ್ಞಗಳೆಂಬ ಚತುರ್ವಿಧ ಹಿಕಮತ್ತಿನ ಮೂಲ ಉದ್ದೇಶ ಮೋದಿಗೆ ಅರ್ಥಾತ್ ಬಿಜೆಪಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡೋದು!
ಕಾರ್ಯಕ್ರಮದ ಸಂಘಟಕರೇ ಹೇಳುವ ಹಾಗೆ ಇದೊಂದು ಮೋದಿಗೆ ಶಕ್ತಿ ತುಂಬುವ ಯಾಗ. ಅಲ್ಲಿಗೆ ಮೋದಿ ದುರ್ಬಲಗೊಂಡಿದ್ದಾರೆ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಂಡಂತಾಯ್ತು! ಇಂಥದೊಂದು ಯಜ್ಞ ಮೋದಿಗಿಂತ ಹೆಚ್ಚಾಗಿ ಸೋಲಿನ ಭೀತಿಯಲ್ಲಿರುವ ಲೋಕಲ್ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ಬೇಕಾಗಿದೆ. ಪರಮ ಚೆಡ್ಡಿ ಸಾಹಿತಿಗಳಾದ ಎಸ್.ಎಲ್.ಭೈರಪ್ಪ, ಪ್ರಧಾನ್ ಗುರುದತ್ತ ಜತೆ ಸಂವಾದ ಕಾರ್ಯಕ್ರಮ ಹೆಣೆದಿರುವ ಕಲ್ಲಡ್ಕ, ನಳಿನ್‍ರ ಮುಖ್ಯಗುರಿ ಯುವಕರ ದಿಕ್ಕುತಪ್ಪಿಸಿ ಚುನಾವಣೆಗೆ ಅಣಿಯಾಗುವುದು. ಒಂದು ಕಾಲಕ್ಕೆ ಸುಶಿಕ್ಷಿತರ, ಪ್ರಜ್ಞಾವಂತರ ಜಿಲ್ಲೆಯೆಂದೇ ಹೆಸರಾಗಿದ್ದ ದಕ್ಷಿಣ ಕನ್ನಡದ ಮಂದಿ ಈಗ ಇಂಥಾ ಹುಚ್ಚಾಟಗಳಿಗೆ ಸಾಕ್ಷಿಯಾಗಬೇಕಾಗಿ ಬಂದಿರೋದು ದುರಂತ.
ತಮಾಷೆಯೆಂದರೆ, ತೆಲಂಗಾಣದ ಎಲೆಕ್ಷನ್ ಹೊತ್ತಲ್ಲಿ ಪ್ರಧಾನಿ ಮೋದಿಯು ಅಲ್ಲಿನ ಟಿಆರ್‍ಎಸ್ ಪಕ್ಷದ ಅಧಿನಾಯಕ ಕೆಸಿಆರ್‍ಗೆ ಸೋಲಿನ ಭೀತಿ ಆವರಿಸಿರೋದರಿಂದ ಜ್ಯೋತಿಷಿಗಳ ಮಾತುಕೇಳಿಕೊಂಡು ಹೋಮ-ಹವನ-ಪೂಜೆ ಮಾಡಿಸಿಕೊಂಡು ತಿರುಗಾಡುತ್ತಿದ್ದಾರೆಂದು ಗೇಲಿ ಮಾಡಿದ್ದುಂಟು!! ಈಗ ಮೋದಿ ಭಕ್ತರು ಅದೇ ಹಾದಿಯಲ್ಲಿದ್ದಾರೆ. ಅಂದಹಾಗೆ, ಎಲ್ಲರನ್ನೂ ಎಲ್ಲ ಕಾಲಕ್ಕೂ ಮೂರ್ಖರನ್ನಾಗಿ ಮಾಡಲು ಸಾಧ್ಯವಾ?
ಅಂತೂ ತಮ್ಮ ಪತನ ಪ್ರಾರಂಭವಾಗಿದೆ ಅನ್ನೋದನ್ನು ಮೋದಿ ಪರಿವಾರವೇ ಈ ಯಜ್ಞದ ಮೂಲಕ ಒಪ್ಪಿಕೊಂಡಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...