Homeಮುಖಪುಟಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ಪಟ್ಟಿ

ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ಪಟ್ಟಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೋದಿಯವರಿಗೆ ಪ್ರಧಾನಿ ಹುದ್ದೆಯ ಜೊತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಅಣುಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಎಲ್ಲಾ ಪ್ರಮುಖ ನೀತಿ ವಿಷಯಗಳು ಮತ್ತು ಯಾವುದೇ ಸಚಿವರಿಗೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು ನೀಡಲಾಗಿದೆ.

ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರಿಗೆ ಕ್ರಮವಾಗಿ ಗೃಹ, ರಕ್ಷಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಗಳನ್ನೇ ಮತ್ತೊಮ್ಮೆ ನೀಡಲಾಗಿದೆ.

ಮಾಜಿ ಸಿಎಂಗಳಾದ ಮನೋಹರ್ ಲಾಲ್‌ ಖಟ್ಟರ್‌ಗೆ ಇಂಧನ, ವಸತಿ ಮತ್ತು ನಗರ ವ್ಯವಹಾರಗಳು, ಶಿವರಾಜ್ ಸಿಂಗ್ ಚೌಹಾಣ್‌ಗೆ ಕೃಷಿ, ಜಿತನ್‌ ರಾಮ್‌ ಮಾಂಜಿಗೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆ, ಹೆಚ್‌.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯ ಹೊಣೆ ಹೊರಿಸಲಾಗಿದೆ.

ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಖಾತೆಯನ್ನು ಮತ್ತೊಮ್ಮೆ ನೀಡಲಾಗಿದ್ದು, ಹೆಚ್ಚುವರಿಯಾಗಿ ಮಾಹಿತಿ ಮತ್ತು ಪ್ರಸಾರ ಖಾತೆಯನ್ನು ಪಡೆದುಕೊಂಡಿದ್ದಾರೆ.

ಸಂಪೂರ್ಣ ಪಟ್ಟಿ ಇಲ್ಲಿದೆ  

ಟಿಡಿಪಿ ಸಂಸದ ರಾಮ್ ಮೋಹನ್ ನಾಯ್ಡು ಅವರಿಗೆ ನಾಗರಿಕ ವಿಮಾನಯಾನ, ಗುಜರಾತ್‌ನ ಬಿಜೆಪಿ ಸಂಸದ ಕಾರ್‌ ಪಾಟೀಲ್‌ ಅವರಿಗೆ ಜಲಶಕ್ತಿ ಮತ್ತು ಕಿರಣ್ ರಿಜಿಜು ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯ ನೀಡಲಾಗಿದೆ.

ಧರ್ಮೇಂದ್ರ ಪ್ರಧಾನ್‌ ಶಿಕ್ಷಣ ಖಾತೆ ಮತ್ತು ಭೂಪೇಂದ್ರ ಯಾದವ್ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಗಳನ್ನು ಮತ್ತೊಮ್ಮೆ ಪಡೆದಿದ್ದಾರೆ. ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಆರೋಗ್ಯ ಖಾತೆಯ ಜವಾಬ್ದಾರಿ ವಹಿಸಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾಗೆ ಟೆಲಿಕಾಂ ಖಾತೆ, ಅನ್ನಪೂರ್ಣ ದೇವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ, ಹರ್ದೀಪ್ ಪುರಿ ಅವರಿಗೆ ಪೆಟ್ರೋಲಿಯಂ, ಸರ್ಬಾನಂದ್ ಸೋನೋವಾಲ್‌ಗೆ ಶಿಪ್ಪಿಂಗ್, ನಿತೀಶ್ ಕುಮಾರ್ ಆಪ್ತ ಲಲನ್ ಸಿಂಗ್‌ಗೆ ಪಂಚಾಯತ್ ರಾಜ್ ಖಾತೆ ನೀಡಲಾಗಿದೆ.

ಪಿಯೂಷ್ ಗೋಯಲ್ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯನ್ನು ಮತ್ತೊಮ್ಮೆ ಪಡೆದಿದ್ದು, ಎರಡನೇ ಮೋದಿ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ ಪ್ರಲ್ಹಾದ್ ಜೋಶಿ ಅವರಿಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಗಳನ್ನು ನೀಡಲಾಗಿದೆ.

ಜೆಡಿಯು ಸಂಸದ ರಾಮ್ ನಾಥ್ ಠಾಕೂರ್ ಅವರು ಕೃಷಿ ಸಚಿವಾಲಯದ ಕಿರಿಯ ಸಚಿವರಾಗಿ ನೇಮಕಗೊಂಡಿದ್ದಾರೆ. ಆರ್‌ಎಲ್‌ಡಿ ಸಂಸದ ಜಯಂತ್ ಚೌಧರಿ ಅವರನ್ನು ಕೌಶಲ್ಯ, ಉದ್ಯಮಶೀಲತೆ ಸಚಿವಾಲಯಕ್ಕೆ ನಿಯೋಜಿಸಲಾಗಿದೆ. ಕಲ್ಲಿದ್ದಲು, ಗಣಿ ಸಚಿವರಾಗಿ ಜಿ ಕಿಶನ್ ರೆಡ್ಡಿ ಅವರನ್ನು ನೇಮಕಗೊಳಿಸಲಾಗಿದೆ.

ಒಡಿಶಾದ ಬಿಜೆಪಿ ಸಂಸದ ಜುಯಲ್ ಓರಾಮ್ ಅವರಿಗೆ ಬುಡಕಟ್ಟು ವ್ಯವಹಾರಗಳ ಸಚಿವಾಲಯವನ್ನು ಹಂಚಿಕೆ ಮಾಡಲಾಗಿದೆ. ಗಿರಿರಾಜ್ ಸಿಂಗ್ ಅವರನ್ನು ಜವಳಿ ಸಚಿವರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ : 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...