Homeಮುಖಪುಟಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ಪಟ್ಟಿ

ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ಪಟ್ಟಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೋದಿಯವರಿಗೆ ಪ್ರಧಾನಿ ಹುದ್ದೆಯ ಜೊತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಅಣುಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಎಲ್ಲಾ ಪ್ರಮುಖ ನೀತಿ ವಿಷಯಗಳು ಮತ್ತು ಯಾವುದೇ ಸಚಿವರಿಗೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು ನೀಡಲಾಗಿದೆ.

ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರಿಗೆ ಕ್ರಮವಾಗಿ ಗೃಹ, ರಕ್ಷಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಗಳನ್ನೇ ಮತ್ತೊಮ್ಮೆ ನೀಡಲಾಗಿದೆ.

ಮಾಜಿ ಸಿಎಂಗಳಾದ ಮನೋಹರ್ ಲಾಲ್‌ ಖಟ್ಟರ್‌ಗೆ ಇಂಧನ, ವಸತಿ ಮತ್ತು ನಗರ ವ್ಯವಹಾರಗಳು, ಶಿವರಾಜ್ ಸಿಂಗ್ ಚೌಹಾಣ್‌ಗೆ ಕೃಷಿ, ಜಿತನ್‌ ರಾಮ್‌ ಮಾಂಜಿಗೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆ, ಹೆಚ್‌.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯ ಹೊಣೆ ಹೊರಿಸಲಾಗಿದೆ.

ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಖಾತೆಯನ್ನು ಮತ್ತೊಮ್ಮೆ ನೀಡಲಾಗಿದ್ದು, ಹೆಚ್ಚುವರಿಯಾಗಿ ಮಾಹಿತಿ ಮತ್ತು ಪ್ರಸಾರ ಖಾತೆಯನ್ನು ಪಡೆದುಕೊಂಡಿದ್ದಾರೆ.

ಸಂಪೂರ್ಣ ಪಟ್ಟಿ ಇಲ್ಲಿದೆ  

ಟಿಡಿಪಿ ಸಂಸದ ರಾಮ್ ಮೋಹನ್ ನಾಯ್ಡು ಅವರಿಗೆ ನಾಗರಿಕ ವಿಮಾನಯಾನ, ಗುಜರಾತ್‌ನ ಬಿಜೆಪಿ ಸಂಸದ ಕಾರ್‌ ಪಾಟೀಲ್‌ ಅವರಿಗೆ ಜಲಶಕ್ತಿ ಮತ್ತು ಕಿರಣ್ ರಿಜಿಜು ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯ ನೀಡಲಾಗಿದೆ.

ಧರ್ಮೇಂದ್ರ ಪ್ರಧಾನ್‌ ಶಿಕ್ಷಣ ಖಾತೆ ಮತ್ತು ಭೂಪೇಂದ್ರ ಯಾದವ್ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಗಳನ್ನು ಮತ್ತೊಮ್ಮೆ ಪಡೆದಿದ್ದಾರೆ. ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಆರೋಗ್ಯ ಖಾತೆಯ ಜವಾಬ್ದಾರಿ ವಹಿಸಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾಗೆ ಟೆಲಿಕಾಂ ಖಾತೆ, ಅನ್ನಪೂರ್ಣ ದೇವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ, ಹರ್ದೀಪ್ ಪುರಿ ಅವರಿಗೆ ಪೆಟ್ರೋಲಿಯಂ, ಸರ್ಬಾನಂದ್ ಸೋನೋವಾಲ್‌ಗೆ ಶಿಪ್ಪಿಂಗ್, ನಿತೀಶ್ ಕುಮಾರ್ ಆಪ್ತ ಲಲನ್ ಸಿಂಗ್‌ಗೆ ಪಂಚಾಯತ್ ರಾಜ್ ಖಾತೆ ನೀಡಲಾಗಿದೆ.

ಪಿಯೂಷ್ ಗೋಯಲ್ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯನ್ನು ಮತ್ತೊಮ್ಮೆ ಪಡೆದಿದ್ದು, ಎರಡನೇ ಮೋದಿ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ ಪ್ರಲ್ಹಾದ್ ಜೋಶಿ ಅವರಿಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಗಳನ್ನು ನೀಡಲಾಗಿದೆ.

ಜೆಡಿಯು ಸಂಸದ ರಾಮ್ ನಾಥ್ ಠಾಕೂರ್ ಅವರು ಕೃಷಿ ಸಚಿವಾಲಯದ ಕಿರಿಯ ಸಚಿವರಾಗಿ ನೇಮಕಗೊಂಡಿದ್ದಾರೆ. ಆರ್‌ಎಲ್‌ಡಿ ಸಂಸದ ಜಯಂತ್ ಚೌಧರಿ ಅವರನ್ನು ಕೌಶಲ್ಯ, ಉದ್ಯಮಶೀಲತೆ ಸಚಿವಾಲಯಕ್ಕೆ ನಿಯೋಜಿಸಲಾಗಿದೆ. ಕಲ್ಲಿದ್ದಲು, ಗಣಿ ಸಚಿವರಾಗಿ ಜಿ ಕಿಶನ್ ರೆಡ್ಡಿ ಅವರನ್ನು ನೇಮಕಗೊಳಿಸಲಾಗಿದೆ.

ಒಡಿಶಾದ ಬಿಜೆಪಿ ಸಂಸದ ಜುಯಲ್ ಓರಾಮ್ ಅವರಿಗೆ ಬುಡಕಟ್ಟು ವ್ಯವಹಾರಗಳ ಸಚಿವಾಲಯವನ್ನು ಹಂಚಿಕೆ ಮಾಡಲಾಗಿದೆ. ಗಿರಿರಾಜ್ ಸಿಂಗ್ ಅವರನ್ನು ಜವಳಿ ಸಚಿವರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ : 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...