Homeಮುಖಪುಟಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

ಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

- Advertisement -
- Advertisement -

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆ ನಂತರ, ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಂಧೆ ಬಣದ ಸಂಸದ ಶ್ರೀರಂಗ್ ಬಾರ್ನೆ ಅವರು ಬಿಜೆಪಿಯ ಪಕ್ಷಪಾತದ ಆರೋಪ ಮಾಡಿದ್ದು, ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

‘ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು’

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದ ಪಕ್ಷಗಳನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದರು.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ಉದಾಹರಣೆಗೆ, ಇಬ್ಬರು ಸಂಸದರು ಆಯ್ಕೆಯಾದ ಜೆಡಿ (ಎಸ್) ನ ಎಚ್‌ಡಿ ಕುಮಾರಸ್ವಾಮಿ, ಬಿಹಾರದಿಂದ ಒಂದು ಸ್ಥಾನವನ್ನು ಗೆದ್ದ ಜಿತನ್ ರಾಮ್ ಮಾಂಝಿ ಅವರಿಗೂ ಕ್ಯಾಬಿನೆಟ್ ಸ್ಥಾನವನ್ನೂ ನೀಡಲಾಯಿತು” ಎಂದು ಬಾರ್ನೆ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಮೋದಿ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಿದೆ; ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದರು.

“ಐದು ಸ್ಥಾನಗಳನ್ನು ಗೆದ್ದ ಚಿರಾಗ್ ಪಾಸ್ವಾನ್ ಅವರಿಗೂ ಕ್ಯಾಬಿನೆಟ್ ಸ್ಥಾನ ನೀಡಲಾಯಿತು. ಆದರೆ, ಶಿವಸೇನೆಗೆ ಕೇವಲ ಒಂದು ಎಂಒಎಸ್ ಸ್ಥಾನ ಸಿಕ್ಕಿತು. ಶಿವಸೇನೆ ವಿರುದ್ಧ ಪಕ್ಷಪಾತವಿದೆ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಸೇನೆಗೆ ನ್ಯಾಯಯುತವಾದ ಸ್ಥಾನಮಾನ ಸಿಗಬೇಕು ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಏಕನಾಥ್ ಶಿಂಧೆ ಅವರ ದಿಟ್ಟ ಹೆಜ್ಜೆ ಮಹಾರಾಷ್ಟ್ರದಲ್ಲಿ ಅಧಿಕಾರ ಪರಿವರ್ತನೆಗೆ ಕಾರಣವಾಯಿತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಾವು ಬಿಜೆಪಿಯಿಂದ ಸಮರ್ಥನೀಯ ನಿಲುವನ್ನು ನಿರೀಕ್ಷಿಸುತ್ತೇವೆ” ಎಂದು ಬಾರ್ನೆ ಆಗ್ರಹಿಸಿದರು.

ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಬೇರ್ಪಟ್ಟರು ಮತ್ತು ಜೂನ್ 2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಿಕೊಂಡರು. ಅವರಿಗೆ ನಿಷ್ಠರಾಗಿರುವ ಗಮನಾರ್ಹ ಸಂಖ್ಯೆಯ ಶಾಸಕರನ್ನು ಕರೆತಂದರು. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸರ್ಕಾರದಲ್ಲಿ ಮಹಾರಾಷ್ಟ್ರದ ಆರು ಸಂಸದರು

ಮಹಾರಾಷ್ಟ್ರದ ಆರು ಸಂಸದರು ಭಾನುವಾರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡರು, ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಆರ್‌ಪಿಐ (ಎ) ತಲಾ ಒಂದನ್ನು ಪಡೆದುಕೊಂಡಿದೆ.

ಹೊಸ ಸರ್ಕಾರದಲ್ಲಿ ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಕ್ಯಾಬಿನೆಟ್ ಸಚಿವರಾಗಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡರು. ಮಹಾರಾಷ್ಟ್ರದ ಬಿಜೆಪಿಯ ಏಕೈಕ ಮಹಿಳಾ ಸಂಸದೆ ರಕ್ಷಾ ಖಡ್ಸೆ ಮತ್ತು ಮೊದಲ ಬಾರಿಗೆ ಸಂಸದ ಮುರಳೀಧರ್ ಮೊಹೋಲ್ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಮಿತ್ರಪಕ್ಷಗಳ ಪೈಕಿ, ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ಎಂಒಎಸ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಆದರೆ, ಪ್ರತಾಪ್ರರಾವ್ ಜಾಧವ್ ಅವರನ್ನು ಸ್ವತಂತ್ರ ಉಸ್ತುವಾರಿಯೊಂದಿಗೆ ಎಂಒಎಸ್ ಆಗಿ ಕರೆತರಲಾಯಿತು.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರ ಅನುಭವವನ್ನು ಉಲ್ಲೇಖಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಎಂಒಎಸ್‌ ಪ್ರಸ್ತಾಪವನ್ನು ನಿರಾಕರಿಸಿತು.

ಇದನ್ನೂ ಓದಿ; ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...