Homeಮುಖಪುಟಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

ಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

- Advertisement -
- Advertisement -

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆ ನಂತರ, ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಂಧೆ ಬಣದ ಸಂಸದ ಶ್ರೀರಂಗ್ ಬಾರ್ನೆ ಅವರು ಬಿಜೆಪಿಯ ಪಕ್ಷಪಾತದ ಆರೋಪ ಮಾಡಿದ್ದು, ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

‘ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು’

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದ ಪಕ್ಷಗಳನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದರು.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ಉದಾಹರಣೆಗೆ, ಇಬ್ಬರು ಸಂಸದರು ಆಯ್ಕೆಯಾದ ಜೆಡಿ (ಎಸ್) ನ ಎಚ್‌ಡಿ ಕುಮಾರಸ್ವಾಮಿ, ಬಿಹಾರದಿಂದ ಒಂದು ಸ್ಥಾನವನ್ನು ಗೆದ್ದ ಜಿತನ್ ರಾಮ್ ಮಾಂಝಿ ಅವರಿಗೂ ಕ್ಯಾಬಿನೆಟ್ ಸ್ಥಾನವನ್ನೂ ನೀಡಲಾಯಿತು” ಎಂದು ಬಾರ್ನೆ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಮೋದಿ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಿದೆ; ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದರು.

“ಐದು ಸ್ಥಾನಗಳನ್ನು ಗೆದ್ದ ಚಿರಾಗ್ ಪಾಸ್ವಾನ್ ಅವರಿಗೂ ಕ್ಯಾಬಿನೆಟ್ ಸ್ಥಾನ ನೀಡಲಾಯಿತು. ಆದರೆ, ಶಿವಸೇನೆಗೆ ಕೇವಲ ಒಂದು ಎಂಒಎಸ್ ಸ್ಥಾನ ಸಿಕ್ಕಿತು. ಶಿವಸೇನೆ ವಿರುದ್ಧ ಪಕ್ಷಪಾತವಿದೆ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಸೇನೆಗೆ ನ್ಯಾಯಯುತವಾದ ಸ್ಥಾನಮಾನ ಸಿಗಬೇಕು ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಏಕನಾಥ್ ಶಿಂಧೆ ಅವರ ದಿಟ್ಟ ಹೆಜ್ಜೆ ಮಹಾರಾಷ್ಟ್ರದಲ್ಲಿ ಅಧಿಕಾರ ಪರಿವರ್ತನೆಗೆ ಕಾರಣವಾಯಿತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಾವು ಬಿಜೆಪಿಯಿಂದ ಸಮರ್ಥನೀಯ ನಿಲುವನ್ನು ನಿರೀಕ್ಷಿಸುತ್ತೇವೆ” ಎಂದು ಬಾರ್ನೆ ಆಗ್ರಹಿಸಿದರು.

ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಬೇರ್ಪಟ್ಟರು ಮತ್ತು ಜೂನ್ 2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಿಕೊಂಡರು. ಅವರಿಗೆ ನಿಷ್ಠರಾಗಿರುವ ಗಮನಾರ್ಹ ಸಂಖ್ಯೆಯ ಶಾಸಕರನ್ನು ಕರೆತಂದರು. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸರ್ಕಾರದಲ್ಲಿ ಮಹಾರಾಷ್ಟ್ರದ ಆರು ಸಂಸದರು

ಮಹಾರಾಷ್ಟ್ರದ ಆರು ಸಂಸದರು ಭಾನುವಾರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡರು, ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಆರ್‌ಪಿಐ (ಎ) ತಲಾ ಒಂದನ್ನು ಪಡೆದುಕೊಂಡಿದೆ.

ಹೊಸ ಸರ್ಕಾರದಲ್ಲಿ ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಕ್ಯಾಬಿನೆಟ್ ಸಚಿವರಾಗಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡರು. ಮಹಾರಾಷ್ಟ್ರದ ಬಿಜೆಪಿಯ ಏಕೈಕ ಮಹಿಳಾ ಸಂಸದೆ ರಕ್ಷಾ ಖಡ್ಸೆ ಮತ್ತು ಮೊದಲ ಬಾರಿಗೆ ಸಂಸದ ಮುರಳೀಧರ್ ಮೊಹೋಲ್ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಮಿತ್ರಪಕ್ಷಗಳ ಪೈಕಿ, ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ಎಂಒಎಸ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಆದರೆ, ಪ್ರತಾಪ್ರರಾವ್ ಜಾಧವ್ ಅವರನ್ನು ಸ್ವತಂತ್ರ ಉಸ್ತುವಾರಿಯೊಂದಿಗೆ ಎಂಒಎಸ್ ಆಗಿ ಕರೆತರಲಾಯಿತು.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರ ಅನುಭವವನ್ನು ಉಲ್ಲೇಖಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಎಂಒಎಸ್‌ ಪ್ರಸ್ತಾಪವನ್ನು ನಿರಾಕರಿಸಿತು.

ಇದನ್ನೂ ಓದಿ; ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...