Homeಮುಖಪುಟಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

ಮೋದಿ ಸಂಪುಟ: ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಸಂಸದ ಬಾರ್ನೆ

- Advertisement -
- Advertisement -

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆ ನಂತರ, ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಂಧೆ ಬಣದ ಸಂಸದ ಶ್ರೀರಂಗ್ ಬಾರ್ನೆ ಅವರು ಬಿಜೆಪಿಯ ಪಕ್ಷಪಾತದ ಆರೋಪ ಮಾಡಿದ್ದು, ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

‘ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು’

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದ ಪಕ್ಷಗಳನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದರು.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ಉದಾಹರಣೆಗೆ, ಇಬ್ಬರು ಸಂಸದರು ಆಯ್ಕೆಯಾದ ಜೆಡಿ (ಎಸ್) ನ ಎಚ್‌ಡಿ ಕುಮಾರಸ್ವಾಮಿ, ಬಿಹಾರದಿಂದ ಒಂದು ಸ್ಥಾನವನ್ನು ಗೆದ್ದ ಜಿತನ್ ರಾಮ್ ಮಾಂಝಿ ಅವರಿಗೂ ಕ್ಯಾಬಿನೆಟ್ ಸ್ಥಾನವನ್ನೂ ನೀಡಲಾಯಿತು” ಎಂದು ಬಾರ್ನೆ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಮೋದಿ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಿದೆ; ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದರು.

“ಐದು ಸ್ಥಾನಗಳನ್ನು ಗೆದ್ದ ಚಿರಾಗ್ ಪಾಸ್ವಾನ್ ಅವರಿಗೂ ಕ್ಯಾಬಿನೆಟ್ ಸ್ಥಾನ ನೀಡಲಾಯಿತು. ಆದರೆ, ಶಿವಸೇನೆಗೆ ಕೇವಲ ಒಂದು ಎಂಒಎಸ್ ಸ್ಥಾನ ಸಿಕ್ಕಿತು. ಶಿವಸೇನೆ ವಿರುದ್ಧ ಪಕ್ಷಪಾತವಿದೆ ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಸೇನೆಗೆ ನ್ಯಾಯಯುತವಾದ ಸ್ಥಾನಮಾನ ಸಿಗಬೇಕು ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಏಕನಾಥ್ ಶಿಂಧೆ ಅವರ ದಿಟ್ಟ ಹೆಜ್ಜೆ ಮಹಾರಾಷ್ಟ್ರದಲ್ಲಿ ಅಧಿಕಾರ ಪರಿವರ್ತನೆಗೆ ಕಾರಣವಾಯಿತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಾವು ಬಿಜೆಪಿಯಿಂದ ಸಮರ್ಥನೀಯ ನಿಲುವನ್ನು ನಿರೀಕ್ಷಿಸುತ್ತೇವೆ” ಎಂದು ಬಾರ್ನೆ ಆಗ್ರಹಿಸಿದರು.

ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಬೇರ್ಪಟ್ಟರು ಮತ್ತು ಜೂನ್ 2022 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಿಕೊಂಡರು. ಅವರಿಗೆ ನಿಷ್ಠರಾಗಿರುವ ಗಮನಾರ್ಹ ಸಂಖ್ಯೆಯ ಶಾಸಕರನ್ನು ಕರೆತಂದರು. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸರ್ಕಾರದಲ್ಲಿ ಮಹಾರಾಷ್ಟ್ರದ ಆರು ಸಂಸದರು

ಮಹಾರಾಷ್ಟ್ರದ ಆರು ಸಂಸದರು ಭಾನುವಾರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡರು, ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಆರ್‌ಪಿಐ (ಎ) ತಲಾ ಒಂದನ್ನು ಪಡೆದುಕೊಂಡಿದೆ.

ಹೊಸ ಸರ್ಕಾರದಲ್ಲಿ ಬಿಜೆಪಿ ಸಂಸದರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಕ್ಯಾಬಿನೆಟ್ ಸಚಿವರಾಗಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡರು. ಮಹಾರಾಷ್ಟ್ರದ ಬಿಜೆಪಿಯ ಏಕೈಕ ಮಹಿಳಾ ಸಂಸದೆ ರಕ್ಷಾ ಖಡ್ಸೆ ಮತ್ತು ಮೊದಲ ಬಾರಿಗೆ ಸಂಸದ ಮುರಳೀಧರ್ ಮೊಹೋಲ್ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಮಿತ್ರಪಕ್ಷಗಳ ಪೈಕಿ, ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ಎಂಒಎಸ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಆದರೆ, ಪ್ರತಾಪ್ರರಾವ್ ಜಾಧವ್ ಅವರನ್ನು ಸ್ವತಂತ್ರ ಉಸ್ತುವಾರಿಯೊಂದಿಗೆ ಎಂಒಎಸ್ ಆಗಿ ಕರೆತರಲಾಯಿತು.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರ ಅನುಭವವನ್ನು ಉಲ್ಲೇಖಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಎಂಒಎಸ್‌ ಪ್ರಸ್ತಾಪವನ್ನು ನಿರಾಕರಿಸಿತು.

ಇದನ್ನೂ ಓದಿ; ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...