Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...