Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...