Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...