Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...