Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...