Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...