Homeಮುಖಪುಟಮೋದಿ ಕಾರ್ಟೂನ್ ವಿವಾದ : 'ವಿಕಟನ್ ವೆಬ್‌ಸೈಟ್‌' ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

ಮೋದಿ ಕಾರ್ಟೂನ್ ವಿವಾದ : ‘ವಿಕಟನ್ ವೆಬ್‌ಸೈಟ್‌’ ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತ ವ್ಯಂಗ್ಯ ಚಿತ್ರ (ಕಾರ್ಟೂನ್‌) ಪ್ರಕಟಿಸಿದ್ದಕ್ಕೆ ತಮಿಳು ನಿಯತಕಾಲಿಕೆ ‘ಆನಂದ ವಿಕಟನ್‌’ನ ವೆಬ್‌ಸೈಟ್‌ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ವಿಧಿಸಿರುವ ನಿರ್ಬಂಧ ಮುಂದುವರಿದಿದೆ.

ಈ ಕುರಿತು ಗುರುವಾರ (ಫೆ.27) ಪ್ರತಿಕ್ರಿಯೆ ನೀಡಿರುವ ವಿಕಟನ್ ಸಂಸ್ಥೆ, “ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ ಪ್ರವೇಶವನ್ನು ಪುನಃಸ್ಥಾಪಿಸಲು ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತೇವೆ” ಎಂದು ಹೇಳಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದಲ್ಲಿ ಕೈಗೆ ಸರಪಳಿ ಬಿಗಿದ ರೀತಿಯ ಮೋದಿ ಭಯಭೀತರಾಗಿ ಕುಳಿತಿರುವ ವ್ಯಂಗ್ಯ ಚಿತ್ರವನ್ನು ಫೆಬ್ರವರಿ 15ರಂದು ವಿಕಟನ್ ವೆಬ್‌ಸೈಟ್‌ ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ವೆಬ್‌ಸೈಟ್‌ ಮೇಲೆ ನಿರ್ಬಂಧ ವಿಧಿಸಿದೆ.

ಟ್ರಂಪ್‌ ಆಡಳಿತ ಅಕ್ರಮ ವಲಸಿಗರೆಂದು ನೂರಾರು ಭಾರತೀಯರನ್ನು ಕೈ, ಕಾಲಿಗೆ ಸರಪಳಿ ಬಿಗಿದು, ಸೇನಾ ವಿಮಾನದಲ್ಲಿ ಕರೆ ತಂದು ಬಿಟ್ಟಾಗ ಏನೂ ಮಾತನಾಡದೆ ಟ್ರಂಪ್ ಮುಂದೆ ಪ್ರಧಾನಿ ಮೋದಿ ತಲೆಬಾಗಿ ನಿಂತಿದ್ದನ್ನು ವಿಕಟನ್ ವ್ಯಂಗ್ಯ ಚಿತ್ರದ ಮೂಲಕ ಅಭಿವ್ಯಕ್ತಿಪಡಿಸಿತ್ತು.

“ಯಾವುದೇ ಮುನ್ಸೂಚನೆ ನೀಡದೆ ನಮ್ಮ ವೆಬ್‌ಸೈಟ್ ಮೇಲೆ ನಿರ್ಬಂಧ ವಿಧಿಸಲಾಗಿದೆ. ವಿಚಾರಣೆಯ ನಂತರ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿರುವ ಕುರಿತು ಸರ್ಕಾರಕ್ಕೆ ನಾವು ವಿವರಣೆ ನೀಡಿದ್ದೇವೆ” ಎಂದು ವಿಕಟನ್ ತಿಳಿಸಿದೆ.

“ಫೆಬ್ರವರಿ 25ರ ರಾತ್ರಿ, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ಆದೇಶ ಹೊರಡಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಮುಂದಿನ ಹಂತಗಳನ್ನು ನಿರ್ಧರಿಸಲು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ” ಎಂದು ವಿಕಟನ್ ಪ್ರಕಟಣೆಯಲ್ಲಿ ಹೇಳಿದೆ.

ವಿಕಟನ್ ವಿವರಣೆಯಿಂದ ಕೇಂದ್ರ ಸರ್ಕಾರ ತೃಪ್ತಿಗೊಂಡಿಲ್ಲ ಎಂಬುವುದು, ಅದರ ಪ್ರಕಟಣೆಯಿಂದ ಗೊತ್ತಾಗಿದೆ.

“ಒಂದು ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕಾಗಿ ಶತಮಾನದಷ್ಟು ಹಳೆಯದಾದ ನಿಯತಕಾಲಿಕೆ ಗುಂಪಿನ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ನೂರು ವ್ಯಂಗ್ಯಚಿತ್ರಕಾರರಿಗೆ ಶ್ರೀಮಂತ ವಿಷಯವನ್ನು ಒದಗಿಸುತ್ತದೆ. ಈ ಪ್ರತಿಭಾನ್ವಿತ ಆರ್.ಕೆ. ಲಕ್ಷ್ಮಣ್ ಈ ಮೂಲಕ ಏನು ಮಾಡಿದ್ದಾರೆ ಎಂದು ಊಹಿಸಿ!” ಎಂದು ಹೇಳುವ ಮೂಲಕ ದಿ ಹಿಂದೂ ಪಬ್ಲಿಷಿಂಗ್ ಗ್ರೂಪ್‌ನ ನಿರ್ದೇಶಕ ಮತ್ತು ಪತ್ರಕರ್ತ ಎನ್. ರಾಮ್ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

“ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ಅನಿಯಂತ್ರಿತ ಮತ್ತು ಕಾನೂನುಬಾಹಿರ ದಾಳಿಯನ್ನು ವಿರೋಧಿಸಿ. VikatanForFreedomOfExpressionನೊಂದಿಗೆ ಒಗ್ಗಟ್ಟಿನಿಂದ ನಿಲ್ಲೋಣ” ಎಂದಿದ್ದಾರೆ.

ಇಂಟರ್‌ನೆಟ್‌ನಲ್ಲಿ ವಿಕಟನ್ ಎಂದು ಹುಡುಕಿದಾಗ ವಿಕಟನ್ ವೆಬ್‌ಸೈಟ್‌ಗೆ ಪ್ರವೇಶಿಸಲು ನಮಗೆ ಸಾಧ್ಯವಾಗಿದೆ.ಆದರೆ ದಿ ಹಿಂದೂ ವರದಿಯ ಪ್ರಕಾರ, ಫೆಬ್ರವರಿ 15 ರಿಂದ ನಿಯತಕಾಲಿಕೆಯ ಪ್ರಾಥಮಿಕ ಡೊಮೇನ್ vikatan.comಗೆ ಕೆಲವು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ನಿಯತಕಾಲಿಕೆಯ ಎರಡನೇ ಡೊಮೇನ್ anandavikatan.com ಗೆ ಪ್ರವೇಶಿಸಲು ಸಾಧ್ಯವಾಗುತ್ತಿದೆ. ನಮಗೆ ಎರಡೂ ವೆಬ್‌ಸೈಟ್‌ಗಳಿಗೆ ಪ್ರವೇಶಿಸಲು ಸಾಧ್ಯವಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...