Homeಮುಖಪುಟಮೋದಿ ಕಾರ್ಟೂನ್ ವಿವಾದ : 'ವಿಕಟನ್ ವೆಬ್‌ಸೈಟ್‌' ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

ಮೋದಿ ಕಾರ್ಟೂನ್ ವಿವಾದ : ‘ವಿಕಟನ್ ವೆಬ್‌ಸೈಟ್‌’ ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತ ವ್ಯಂಗ್ಯ ಚಿತ್ರ (ಕಾರ್ಟೂನ್‌) ಪ್ರಕಟಿಸಿದ್ದಕ್ಕೆ ತಮಿಳು ನಿಯತಕಾಲಿಕೆ ‘ಆನಂದ ವಿಕಟನ್‌’ನ ವೆಬ್‌ಸೈಟ್‌ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ವಿಧಿಸಿರುವ ನಿರ್ಬಂಧ ಮುಂದುವರಿದಿದೆ.

ಈ ಕುರಿತು ಗುರುವಾರ (ಫೆ.27) ಪ್ರತಿಕ್ರಿಯೆ ನೀಡಿರುವ ವಿಕಟನ್ ಸಂಸ್ಥೆ, “ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ ಪ್ರವೇಶವನ್ನು ಪುನಃಸ್ಥಾಪಿಸಲು ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತೇವೆ” ಎಂದು ಹೇಳಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದಲ್ಲಿ ಕೈಗೆ ಸರಪಳಿ ಬಿಗಿದ ರೀತಿಯ ಮೋದಿ ಭಯಭೀತರಾಗಿ ಕುಳಿತಿರುವ ವ್ಯಂಗ್ಯ ಚಿತ್ರವನ್ನು ಫೆಬ್ರವರಿ 15ರಂದು ವಿಕಟನ್ ವೆಬ್‌ಸೈಟ್‌ ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ವೆಬ್‌ಸೈಟ್‌ ಮೇಲೆ ನಿರ್ಬಂಧ ವಿಧಿಸಿದೆ.

ಟ್ರಂಪ್‌ ಆಡಳಿತ ಅಕ್ರಮ ವಲಸಿಗರೆಂದು ನೂರಾರು ಭಾರತೀಯರನ್ನು ಕೈ, ಕಾಲಿಗೆ ಸರಪಳಿ ಬಿಗಿದು, ಸೇನಾ ವಿಮಾನದಲ್ಲಿ ಕರೆ ತಂದು ಬಿಟ್ಟಾಗ ಏನೂ ಮಾತನಾಡದೆ ಟ್ರಂಪ್ ಮುಂದೆ ಪ್ರಧಾನಿ ಮೋದಿ ತಲೆಬಾಗಿ ನಿಂತಿದ್ದನ್ನು ವಿಕಟನ್ ವ್ಯಂಗ್ಯ ಚಿತ್ರದ ಮೂಲಕ ಅಭಿವ್ಯಕ್ತಿಪಡಿಸಿತ್ತು.

“ಯಾವುದೇ ಮುನ್ಸೂಚನೆ ನೀಡದೆ ನಮ್ಮ ವೆಬ್‌ಸೈಟ್ ಮೇಲೆ ನಿರ್ಬಂಧ ವಿಧಿಸಲಾಗಿದೆ. ವಿಚಾರಣೆಯ ನಂತರ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿರುವ ಕುರಿತು ಸರ್ಕಾರಕ್ಕೆ ನಾವು ವಿವರಣೆ ನೀಡಿದ್ದೇವೆ” ಎಂದು ವಿಕಟನ್ ತಿಳಿಸಿದೆ.

“ಫೆಬ್ರವರಿ 25ರ ರಾತ್ರಿ, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ಆದೇಶ ಹೊರಡಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಮುಂದಿನ ಹಂತಗಳನ್ನು ನಿರ್ಧರಿಸಲು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ” ಎಂದು ವಿಕಟನ್ ಪ್ರಕಟಣೆಯಲ್ಲಿ ಹೇಳಿದೆ.

ವಿಕಟನ್ ವಿವರಣೆಯಿಂದ ಕೇಂದ್ರ ಸರ್ಕಾರ ತೃಪ್ತಿಗೊಂಡಿಲ್ಲ ಎಂಬುವುದು, ಅದರ ಪ್ರಕಟಣೆಯಿಂದ ಗೊತ್ತಾಗಿದೆ.

“ಒಂದು ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕಾಗಿ ಶತಮಾನದಷ್ಟು ಹಳೆಯದಾದ ನಿಯತಕಾಲಿಕೆ ಗುಂಪಿನ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ನೂರು ವ್ಯಂಗ್ಯಚಿತ್ರಕಾರರಿಗೆ ಶ್ರೀಮಂತ ವಿಷಯವನ್ನು ಒದಗಿಸುತ್ತದೆ. ಈ ಪ್ರತಿಭಾನ್ವಿತ ಆರ್.ಕೆ. ಲಕ್ಷ್ಮಣ್ ಈ ಮೂಲಕ ಏನು ಮಾಡಿದ್ದಾರೆ ಎಂದು ಊಹಿಸಿ!” ಎಂದು ಹೇಳುವ ಮೂಲಕ ದಿ ಹಿಂದೂ ಪಬ್ಲಿಷಿಂಗ್ ಗ್ರೂಪ್‌ನ ನಿರ್ದೇಶಕ ಮತ್ತು ಪತ್ರಕರ್ತ ಎನ್. ರಾಮ್ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

“ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ಅನಿಯಂತ್ರಿತ ಮತ್ತು ಕಾನೂನುಬಾಹಿರ ದಾಳಿಯನ್ನು ವಿರೋಧಿಸಿ. VikatanForFreedomOfExpressionನೊಂದಿಗೆ ಒಗ್ಗಟ್ಟಿನಿಂದ ನಿಲ್ಲೋಣ” ಎಂದಿದ್ದಾರೆ.

ಇಂಟರ್‌ನೆಟ್‌ನಲ್ಲಿ ವಿಕಟನ್ ಎಂದು ಹುಡುಕಿದಾಗ ವಿಕಟನ್ ವೆಬ್‌ಸೈಟ್‌ಗೆ ಪ್ರವೇಶಿಸಲು ನಮಗೆ ಸಾಧ್ಯವಾಗಿದೆ.ಆದರೆ ದಿ ಹಿಂದೂ ವರದಿಯ ಪ್ರಕಾರ, ಫೆಬ್ರವರಿ 15 ರಿಂದ ನಿಯತಕಾಲಿಕೆಯ ಪ್ರಾಥಮಿಕ ಡೊಮೇನ್ vikatan.comಗೆ ಕೆಲವು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ನಿಯತಕಾಲಿಕೆಯ ಎರಡನೇ ಡೊಮೇನ್ anandavikatan.com ಗೆ ಪ್ರವೇಶಿಸಲು ಸಾಧ್ಯವಾಗುತ್ತಿದೆ. ನಮಗೆ ಎರಡೂ ವೆಬ್‌ಸೈಟ್‌ಗಳಿಗೆ ಪ್ರವೇಶಿಸಲು ಸಾಧ್ಯವಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...