Homeಮುಖಪುಟ‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

- Advertisement -
- Advertisement -

ಮಾಲೆಗಾಂವ್‌ ಭಯೋತ್ಪಾದಕ ಸ್ಪೋಟದ ಪ್ರಮುಖ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌ ಅವರ ಕುರಿತಂತೆ, ‘ಪ್ರಧಾನಿ ಮೋದಿ ಮನಸು ಬದಲಾಯಿಸಿರುವ ಹಾಗೆ ತೋರುತ್ತಿದೆ’ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್‌ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಅಂತರ್‌‌ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಅಂದು ಸಂಸದರಿಗಾಗಿ ಲೋಕಸಭೆಯು ನಾಲ್ಕು ಆನ್‌ಲೈನ್‌‌‌‌ ಅಧಿವೇಶನಗಳನ್ನು ಆಯೋಜಿಸಿದೆ. ಅದರಲ್ಲಿ ಒಂದು ಅಧಿವೇಶನವನ್ನು ಉದ್ದೇಶಿಸಿ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಜ್ಞಾ ಠಾಕೂರ್‌ ಮಾತನಾಡಲಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು 2019 ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ದೇಶಭಕ್ತ” ಎಂದು ವೈಭವೀಕರಿಸಿ ಹೇಳಿಕೆ ನೀಡಿದ್ದ ಪ್ರಜ್ಞಾ ಠಾಕೂರ್ ಅವರ ಟೀಕೆಗಳನ್ನು ಪ್ರಧಾನಿ ಮೋದಿ ಖಂಡಿಸಿದ್ದರು. ಈ ಹೇಳಿಕೆಗಾಗಿ ತಾನು ಅವರನ್ನು ಮನಪೂರ್ವಕವಾಗಿ ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ವಿವಾದದ ಕುರಿತು ಪ್ರಧಾನಿ ಮೋದಿ ನೀಡುವ ಹೇಳಿಕೆಯ ವಿಡಿಯೋವನ್ನು ತನ್ನ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಮಾಣಿಕಂ ಟ್ಯಾಗೋರ್, “ಮೋದಿ ಸಾಹೀಬ್‌ ಅವರು ಪ್ರಜ್ಞಾ ಠಾಕೂರ್ ಅವರ ಕುರಿತಂತೆ ಮನಸ್ಸನ್ನು ಬದಲಾಯಿಸಿದ್ದೀರಾ? ಪ್ರಧಾನ ಮಂತ್ರಿಯ ಕನಸಿನ ಯೋಜನೆಯಾದ ಯೋಗ ದಿನದಂದು ಎಲ್ಲಾ ಸಂಸದರಿಗೆ ಅವರು ಮುಖ್ಯ ಅತಿಥಿಯಾಗಲಿದ್ದಾರೆ. ಇದು ಮನಪೂರ್ವಕವಾಗಿ ಕ್ಷಮಿಸಿರುವುದನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.

ವಿಡಿಯೊದಲ್ಲಿ, ಗಾಂಧಿಯ ಕೊಲೆಗಾರನನ್ನು ಹೊಗಳಿದ ಬಿಜೆಪಿ ಅಭ್ಯರ್ಥಿಯ ಬಗ್ಗೆ ಮೋದಿಯೊಂದಿಗೆ ಪತ್ರಕರ್ತ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಮೋದಿ, “ಗಾಂಧಿ ಮತ್ತು ಗಾಡ್ಸೆ ಕುರಿತಾದ ಕಾಮೆಂಟ್‌ಗಳು ಭಯಾನಕವಾಗಿದೆ. ಇದು ತಿರಸ್ಕಾರಾರ್ಹ ಮತ್ತು ಖಂಡನೀಯವಾಗಿದ್ದು, ಈ ರೀತಿಯ ಮನಸ್ಥಿತಿಯು ಸುಸಂಸ್ಕೃತ ಸಮಾಜದ್ದಲ್ಲ. ಈ ರೀತಿಯ ಹೇಳಿಕೆ ನೀಡುವವರು ಭವಿಷ್ಯದಲ್ಲಿ 100 ಬಾರಿ ಯೋಚಿಸಬೇಕು. ತನ್ನ ಹೇಳಿಕೆಗಾಗಿ ಅವರು ಈಗ ಕ್ಷಮೆಯಾಚಿಸಿದ್ದಾರೆ, ಅದು ಒಳ್ಳೆಯದಾಗಿದೆ. ಆದರೆ ನಾನು ಅವರನ್ನು ನನ್ನ ಮನಪೂರ್ವಕವಾಗಿ ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

 

ಪ್ರಜ್ಞಾ ಠಾಕೂರ್ ಭೋಪಾಲ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರನ್ನು ಸೋಲಿಸಿ ಚುನಾವಣೆಯಲ್ಲಿ ಜಯಗಳಿಸಿದ್ದರು. ಅಂದಿನಿಂದ ಅವರು ಹಲವಾರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಲೆ ಬಂದಿದ್ದಾರೆ.

ಮಹಾತ್ಮ ಗಾಂಧಿ ಮೇಲಿನ ವಿವಾದಾತ್ಮಕ ಹೇಳಿಕೆ ನಂತರ ಪ್ರಜ್ಞಾ ಠಾಕೂರ್ ಅವರನ್ನು ರಕ್ಷಣಾ ಸಂಸದೀಯ ಸಮಿತಿಯಿಂದ ಕಿತ್ತುಹಾಕಲಾಯಿತು ಮತ್ತು ಬಿಜೆಪಿ ಸಂಸದೀಯ ಸಭೆಗಳಿಂದ ಹೊರಗಿಡಲಾಗಿತ್ತು.

ಸಂಸದೆ ಪ್ರಜ್ಞಾ ಠಾಕೂರ್ 2008 ರ ‘ಮಾಲೆಗಾಂವ್ ಸ್ಫೋಟ’ದಲ್ಲಿನ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಡೆಯಿದ್ದಾರೆ. ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಸ್ಫೋಟಕ ಸಾಧನವೊಂದು ಸ್ಪೋಟಗೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂದಿದ್ದರು.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...