Homeಮುಖಪುಟಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ...

ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಮಣಿಪುರದ ಹಿಂಸಾಚಾರ ಮತ್ತು ನಿರುದ್ಯೋಗದಂತಹ ಸಮಸ್ಯೆಗಳ ಮೇಲಿನ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಹೇಳಿವೆ.

ಈ ಏಕರೂಪದ ನಾಗರಿಕ ಸಂಹಿತೆಯು ವಿವಿಧ ನಂಬಿಕೆಗಳ ಜನರಿಗೆ ವಿಭಿನ್ನ ವೈಯಕ್ತಿಕ ಕಾನೂನುಗಳನ್ನು ಅನುಮತಿಸುವ ಬದಲು ಎಲ್ಲಾ ಭಾರತೀಯರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವ ಹೀಗೆ ಅನೇ ಆಚಾರವಿಚಾರಗಳನ್ನು ನಿಯಂತ್ರಿಸಲು ಒಂದೇ ಸಾಮಾನ್ಯ ಕಾನೂನುಗಳನ್ನು ಒಳಗೊಂಡಿರುತ್ತದೆ.

ಈ ಸಂಹಿತೆಯನ್ನು ಜಾರಿಗೆ ತರುವುದು ಬಿಜೆಪಿಯ ಕಾರ್ಯಸೂಚಿಯಲ್ಲಿ ವರ್ಷಗಳಿಂದಲೂ ಇದೆ. ಈ ತಿಂಗಳ ಆರಂಭದಲ್ಲಿ, ಕಾನೂನು ಆಯೋಗವು ಈ ವಿಷಯದ ಬಗ್ಗೆ ನಾಗರಿಕರು ಮತ್ತು ಧಾರ್ಮಿಕ ಗುಂಪುಗಳ ಅಭಿಪ್ರಾಯಗಳನ್ನು ಕೇಳಿದೆ.

ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಭಾರತದಲ್ಲಿ ಮುಸ್ಲಿಮರನ್ನು ಪ್ರಚೋದಿಸಲಾಗುತ್ತಿದೆ ಮತ್ತು ಸುಪ್ರೀಂ ಕೋರ್ಟ್ ಕೂಡ ಅದನ್ನು ಪ್ರತಿಪಾದಿಸಿದೆ ಎಂದು ಮೋದಿ ಮಂಗಳವಾರ ಹೇಳಿದ್ದರು. ಅವರ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು “ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

ಮಣಿಪುರವು ಮೇ 3 ರಿಂದ ಮೈಟೈಸ್ ಮತ್ತು ಕುಕಿಗಳ ನಡುವಿನ ಜನಾಂಗೀಯ ಘರ್ಷಣೆಗಳಿಗೆ ಸಾಕ್ಷಿಯಾಗಿದೆ. ಇದು 100 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯಗಳ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಮುಸ್ಲಿಮರನ್ನು ‘ಹಿಂದೂ ನಾಗರಿಕ ಸಂಹಿತೆ’ಗೆ ಸೇರಿಸಲು ಮೋದಿ ಯತ್ನ: ಪ್ರಧಾನಿ ವಿರುದ್ಧ ಗುಡುಗಿದ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...