ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ನಡೆದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಒಂದು ವರ್ಷವಾಗಿದ್ದು, ಆದರೂ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಭೇಟಿ ನೀಡಿಲ್ಲ ಎಂದು ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಣಿಪುರದ ಜನರನ್ನು
ನಿರುದ್ಯೋಗ, ಬೆಲೆ ಏರಿಕೆ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಅವರು 2024ರ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ‘ನ್ಯಾಯ ಯಾತ್ರೆ’ ಆರಂಭಿಸಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷವೂ, ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಂತ್ರಸ್ತರ ಅಳಲು ಆಲಿಸಬೇಕು ಮತ್ತು ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿತ್ತು. ಅದಾಗ್ಯೂ, ಯಾತ್ರೆ ನಡೆದು ಒಂದು ವರ್ಷವಾದರೂ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪಕ್ಷವೂ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮೋದಿ ಅವರಿಗೆ ಪ್ರಪಂಚದ ಎಲ್ಲ ಭಾಗಗಳಿಗೆ ಹೋಗಲು ಸಮಯ, ಒಲವು ಮತ್ತು ಶಕ್ತಿ ಇದೆ. ಆದರೆ, ಈಶಾನ್ಯ ರಾಜ್ಯದಲ್ಲಿ (ಮಣಿಪುರ) ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಅದರ ಅಗತ್ಯವೂ ಅವರಿಗೆ ಇಲ್ಲ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಣಿಪುರದ ಜನರನ್ನು
Today, exactly a year ago, the Bharat Jodo Nyay Yatra was launched by the Indian National Congress from Manipur. The BJNY followed in the wake of the historic Kanyakumari to Kashmir Bharat Jodo Yatra and covered 6,600 kms going through 15 states, culminating in Mumbai on March… pic.twitter.com/D42FwEoCf5
— Jairam Ramesh (@Jairam_Ramesh) January 14, 2025
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿ, “ಇಂದಿಗೆ, ನಿಖರವಾಗಿ ಒಂದು ವರ್ಷದ ಹಿಂದೆ, ಮಣಿಪುರದಿಂದ ಕಾಂಗ್ರೆಸ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸಿತು. ಐತಿಹಾಸಿಕ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ನಂತರ ನ್ಯಾಯ ಯಾತ್ರೆಯು 15 ರಾಜ್ಯಗಳ ಮೂಲಕ 6,600 ಕಿ.ಮೀ.ಗಳನ್ನು ಕ್ರಮಿಸಿತ್ತು. 2024ರ ಮಾರ್ಚ್ 16ರಂದು ಮುಂಬೈನಲ್ಲಿ ಸಮಾರೋಪಗೊಂಡಿತ್ತು.
ಪ್ರಧಾನಿಯವರ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ. ಅವರು ಪ್ರಪಂಚದಾದ್ಯಂತ ಹೋಗಲು ಸಮಯ, ಒಲವು ಮತ್ತು ಶಕ್ತಿಯನ್ನು ಹೊಂದಿದ್ದಾರೆ. ಆದರೆ, ಮಣಿಪುರದ ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡುವುದು ಅವರಿಗೆ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. “ಪ್ರಧಾನಿಯವರು ತಮ್ಮ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಮಣಿಪುರದ ರಾಜಕೀಯ ನಾಯಕರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.
ಮಣಿಪುರದಲ್ಲಿ 2023ರ ಮೇ 3 ವೇಳೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಇನ್ನೂ ಮುಂದುವರೆದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಅದಾಗ್ಯೂ, ಕಳೆದ ನವೆಂಬರ್ನಿಂದ ಈ ಹಿಂಸಾಚಾರ ಮತ್ತೇ ಹೆಚ್ಚಾಗಿವೆ.
ಇದನ್ನೂಓದಿ: ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ


