Homeಮುಖಪುಟಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ - ಕಾಂಗ್ರೆಸ್‌

ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

- Advertisement -
- Advertisement -

ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ನಡೆದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಒಂದು ವರ್ಷವಾಗಿದ್ದು, ಆದರೂ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಭೇಟಿ ನೀಡಿಲ್ಲ ಎಂದು ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಮಣಿಪುರದ ಜನರನ್ನು

ನಿರುದ್ಯೋಗ, ಬೆಲೆ ಏರಿಕೆ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು 2024ರ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ‘ನ್ಯಾಯ ಯಾತ್ರೆ’ ಆರಂಭಿಸಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷವೂ, ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಂತ್ರಸ್ತರ ಅಳಲು ಆಲಿಸಬೇಕು ಮತ್ತು ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿತ್ತು. ಅದಾಗ್ಯೂ, ಯಾತ್ರೆ ನಡೆದು ಒಂದು ವರ್ಷವಾದರೂ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪಕ್ಷವೂ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿ ಅವರಿಗೆ ಪ್ರಪಂಚದ ಎಲ್ಲ ಭಾಗಗಳಿಗೆ ಹೋಗಲು ಸಮಯ, ಒಲವು ಮತ್ತು ಶಕ್ತಿ ಇದೆ. ಆದರೆ, ಈಶಾನ್ಯ ರಾಜ್ಯದಲ್ಲಿ (ಮಣಿಪುರ) ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಅದರ ಅಗತ್ಯವೂ ಅವರಿಗೆ ಇಲ್ಲ” ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಮಣಿಪುರದ ಜನರನ್ನು

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿ, “ಇಂದಿಗೆ, ನಿಖರವಾಗಿ ಒಂದು ವರ್ಷದ ಹಿಂದೆ, ಮಣಿಪುರದಿಂದ ಕಾಂಗ್ರೆಸ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸಿತು. ಐತಿಹಾಸಿಕ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ನಂತರ ನ್ಯಾಯ ಯಾತ್ರೆಯು 15 ರಾಜ್ಯಗಳ ಮೂಲಕ 6,600 ಕಿ.ಮೀ.ಗಳನ್ನು ಕ್ರಮಿಸಿತ್ತು. 2024ರ ಮಾರ್ಚ್ 16ರಂದು ಮುಂಬೈನಲ್ಲಿ ಸಮಾರೋಪಗೊಂಡಿತ್ತು.

ಪ್ರಧಾನಿಯವರ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ. ಅವರು ಪ್ರಪಂಚದಾದ್ಯಂತ ಹೋಗಲು ಸಮಯ, ಒಲವು ಮತ್ತು ಶಕ್ತಿಯನ್ನು ಹೊಂದಿದ್ದಾರೆ. ಆದರೆ, ಮಣಿಪುರದ ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡುವುದು ಅವರಿಗೆ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. “ಪ್ರಧಾನಿಯವರು ತಮ್ಮ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಮಣಿಪುರದ ರಾಜಕೀಯ ನಾಯಕರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಮಣಿಪುರದಲ್ಲಿ 2023ರ ಮೇ 3 ವೇಳೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಇನ್ನೂ ಮುಂದುವರೆದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಅದಾಗ್ಯೂ, ಕಳೆದ ನವೆಂಬರ್‌ನಿಂದ ಈ ಹಿಂಸಾಚಾರ ಮತ್ತೇ ಹೆಚ್ಚಾಗಿವೆ.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...