Homeಕರೋನಾ ತಲ್ಲಣಮೋದಿ ಟೀಕಿಸಿ ಪೋಸ್ಟರ್‌: 'ನನ್ನನ್ನೂ ಬಂಧಿಸಿ' ಎಂದ ರಾಹುಲ್‌ಗಾಂಧಿ

ಮೋದಿ ಟೀಕಿಸಿ ಪೋಸ್ಟರ್‌: ‘ನನ್ನನ್ನೂ ಬಂಧಿಸಿ’ ಎಂದ ರಾಹುಲ್‌ಗಾಂಧಿ

ಬಂಧಿತರಲ್ಲಿ ಬಹುತೇಕರು ದಿನಗೂಲಿ ಕಾರ್ಮಿಕರಾಗಿದ್ದು ಕೆಲಸವಿಲ್ಲದಿದ್ದಾಗ ಈ ಪೋಸ್ಟರ್ ಹಾಕುವ ಕೆಲಸ ಮಾಡಿದ್ದಾರೆ. ಅದರಲ್ಲಿ ಏನು ಬರೆದಿದೆ ಎಂಬುದು ಸಹ ಅವರಿಗೆ ತಿಳಿದಿಲ್ಲ ಎನ್ನಲಾಗಿದೆ.

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಟೀಕಿಸುವ ಭಿತ್ತಿಪತ್ರಗಳನ್ನು ಹಾಕಿದ್ದಕ್ಕಾಗಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ “ನನ್ನನ್ನೂ ಬಂಧಿಸಿ” ಎಂದು ಸವಾಲು ಹಾಕಿದ್ದಾರೆ.

ಕಪ್ಪು ಪೋಸ್ಟರ್‌ಗಳ ಮೇಲೆ ಬಿಳಿ ಬಣ್ಣದಲ್ಲಿ “ಮೋದಿ ಜಿ, ನಮ್ಮ ಮಕ್ಕಳಿಗೆ ಲಸಿಕೆ ಇಲ್ಲ, ವಿದೇಶಗಳಿಗೆ ಲಸಿಕೆಯನ್ನು ಏಕೆ ಕಳಿಸಿದಿರಿ?” ಎಂದು ಪ್ರಶ್ನಿಸಿ ದೆಹಲಿಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು.

ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ದೆಹಲಿ ಪೊಲೀಸರು ಬಂಧಿಸಿದವರಲ್ಲಿ 19 ವರ್ಷದ ಶಾಲೆ ಬಿಟ್ಟ ಯುವಕ, 30 ವರ್ಷದ ಆಟೋ ಚಾಲಕ, 61 ವರ್ಷದ ದಿನಗೂಲಿ ನೌಕರ ಕೂಡ ಇದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಹಲವರು ದಿನಗೂಲಿ ಕೆಲಸ ಮಾಡುವವರು. ಲಾಕ್‌ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಕಷ್ಟದಲ್ಲಿದ್ದಾಗ ಈ ಪೋಸ್ಟರ್ ಮತ್ತು ಬ್ಯಾನರ್ ಹಾಕುವ ಕೆಲಸ ಮಾಡಿದ್ದಾರೆ. ಅದರಲ್ಲಿ ಏನು ಬರೆದಿದೆ ಎಂಬುದು ಸಹ ಅವರಿಗೆ ತಿಳಿದಿಲ್ಲ ಎನ್ನಲಾಗಿದೆ.

ಬ್ಯಾನರ್ ಮತ್ತು ಪೋಸ್ಟರ್ ಪ್ರಿಂಟ್ ಮಾಡಿಸಿದವನು, ಆಟೋದಲ್ಲಿ ಸಾಗಿಸಿದವನು ಮತ್ತು ಅದನ್ನು ಅಂಟಿಸಿದವರನ್ನು ಬಂಧಿಸಲಾಗಿದೆ. ಅವರೆಲ್ಲರೂ ತಮ್ಮ ಹೊಟ್ಟೆಪಾಡಿಗಾಗಿ ಆ ಕೆಲಸ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಭಿತ್ತಿಪತ್ರ ಅಂಟಿಸಿದ್ದಕ್ಕಾಗಿ ಸಾರ್ವಜನಿಕರನ್ನು ಬಂಧಿಸಿರುವ ಸರ್ಕಾರದ ವಿರುದ್ದ ಕಿಡಿಕಾರಿರುವ  ರಾಹುಲ್‌ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರು “ನನ್ನನ್ನೂ ಬಂಧಿಸಿ” ಎಂದು ಟ್ವೀಟ್‌ ಮಾಡಿದ್ದಾರೆ.

ಅಗತ್ಯವಿರುವವರಿಗೆ ಸಹಾಯ ಕೆಲಸಗಳಿಂದಾಗಿ ದೇಶದ ಗಮನ ಸೆಳೆದಿರುವ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಸಹ ಅದೇ ಪೋಸ್ಟರ್ ಹಿಡಿದು ಪ್ರತಿಭಟನೆ ದಾಖಲಿಸಿದ್ದಾರೆ. “ಮೋದಿಯವರು ತಮ್ಮ ಇಮೇಜ್ ಬಿಲ್ಡ್ ಮಾಡಲು 6 ಕೋಟಿಗಿಂತ ಹೆಚ್ಚು ಲಸಿಕೆಗಳನ್ನು ‘ರಫ್ತು’ ಮಾಡದಿದ್ದರೆ, ಇಂದು ಎಷ್ಟೋ ಭಾರತೀಯರು ಉಳಿಯುತ್ತಿದ್ದರು.. ಎಷ್ಟೊ ಕುಟುಂಬಗಳು ರಕ್ಷಿಸಲ್ಪಡುತ್ತಿದ್ದರು. ಈ ಪ್ರಶ್ನೆಗಳನ್ನು ಕೇಳುವುದು ಅಪರಾಧವಾದರೆ, ಯೂತ್ ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರು ಬಂಧನಕ್ಕೆ ಸಿದ್ದರಾಗಿದ್ದಾರೆ. ನನ್ನನ್ನೂ ಬಂಧಿಸಿ” ಎಂದು ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? ಎಂದು ಪ್ರಶ್ನಿಸಿ ಪೋಸ್ಟರ್‌, 17 FIR, 15 ಮಂದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...