HomeUncategorizedಸಿನಿಮಾ ರಂಗ - ಹಾಸ್ಯ, ವಿಮರ್ಷೆ, ಆಶಯ

ಸಿನಿಮಾ ರಂಗ – ಹಾಸ್ಯ, ವಿಮರ್ಷೆ, ಆಶಯ

- Advertisement -
- Advertisement -

ಫಿಟ್‍ನೆಸ್ ಫಜೀತಿಗಳು

ಸಿನಿಮಾಕ್ಕಾಗಿ ತಮ್ಮ ದೇಹವನ್ನೇ ಏರುಪೇರು ಮಾಡಿಕೊಳ್ಳುವ ಈಗಿನ ಹೀರೋಗಳ ಕಾಯಿಲೆ ಯಾರ್ಯಾರಿಗೋ ಹಬ್ಬಿ, ಏನೇನೋ ರಾದ್ಧಾಂತ ಮಾಡುತ್ತಿದೆ. ಸಿನಿಮಾದ ಪಾತ್ರಕ್ಕಾಗಿ ದಪ್ಪ-ಸಣ್ಣ ಆಗುವುದು, ದಾಡಿ ಬೆಳೆಸುವುದು, ಹುಚ್ಚಾಪಟ್ಟೆ ಹೇರ್‍ಸ್ಟೈಲ್ ಮಾಡಿಕೊಳ್ಳೋದು ಮಾಮೂಲಿ. ಪಾತ್ರವೊಂದು ನಿಜವಾಗಿಯೂ ಅಂತಹ ಮಾರ್ಪಾಟನ್ನು ಬಯಸಿದರೆ ತಪ್ಪೇನು ಇಲ್ಲ. ಆದರೆ ಸ್ನಾಯುಗಳನ್ನು ತೋರಿಸೋದೆ ಟ್ರೆಂಡ್ ಆಗಿದೆ ಅನ್ನೋ ಕಾರಣಕ್ಕೆ, ಅಗತ್ಯವಿಲ್ಲದಿದ್ದರು ನಾಯಕರುಗಳು `ಮೈ’ಮಾಟ ತೋರಿಸುವ ದೃಶ್ಯಗಳನ್ನು ತುರುಕಿ ಸಿನಿಮಾವನ್ನೇ ಹಾಳು ಮಾಡುವ ಖಯಾಲಿ ಈಚೀಚೆಗೆ ಹೆಚ್ಚಾಗಿದೆ. ಜಿಮ್‍ಗಳಲ್ಲಿ ಕಸರತ್ತು ಮಾಡಿಕೊಂಡಿದ್ದ ಹೀರೋಗಳು ಈಗ ಫಿಟ್ನೆಸ್ ಹೆಸರಲ್ಲಿ ಒಬ್ಬರಿಗೊಬ್ಬರ ಕಾಲೆಳೆದುಕೊಂಡು ಅಭಿಮಾನಿಗಳಿಗೆ ಪುಕ್ಕಟೆ ಮನರಂಜನೆ ಕೊಡಲು ಶುರು ಮಾಡಿದ್ದಾರೆ. ಮೊನ್ನೆ ಸುದೀಪ್ ಇಂತದ್ದೇ ಹುಚ್ಚಾಟ ಮಾಡಿಕೊಂಡು ಯಶ್ ಮತ್ತು ಉಪೇಂದ್ರರಿಗೆ ಫಿಟ್ನೆಸ್ ಸವಾಲು ಹಾಕಲು ಹೋಗಿ, ಅವರಿಂದ ಡಿಫೆರೆಂಟ್ ಆಗಿಯೇ ಉತ್ತರ ಪಡೆದು ಮುಖಕ್ಕೆ ಟವೆಲ್ ಮುಚ್ಕೊಳೋ ಕೆಲಸ ಮಾಡಿಕೊಂಡರು.
ಈಗ ಈ ಚಾಲೆಂಜ್ ದಹಲಿಯ ಸಂಸತ್‍ವರೆಗೂ ತಲುಪಿದೆ. ವಿಶ್ವಗುರು ಆಗಲು ಹೊರಟಿರುವ ನಮ್ಮ ದೇಶದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಭಾರತ ತಂಡದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿಗೆ ವರ್ಕ್‍ಔಟ್ ಚಾಲೆಂಜ್ ಹಾಕಿ ವಿಚಿತ್ರ ಟ್ರೆಂಡೊಂದನ್ನು ಹುಟ್ಟುಹಾಕಿದ್ದಾರೆ. ದೇಶಸೇವೆ ಮಾಡುವ ಬದಲು ದೇಹಸೇವೆ ಮಾಡಿಕೊಳ್ಳಲು ಮುಂದಾಗಿರುವ ಅವರು ಇದೀಗ ಇರಲಾರದೆ ಇರುವೆ ಬಿಟ್ಟುಕೊಂಡವರಂತೆ ರಾಷ್ಟ್ರದ ಜನರೆದುರು ಕಾಮಿಡಿ ಪೀಸ್ ಆಗ್ಬಿಟ್ಟಿದ್ದಾರೆ. ಹುಲ್ಲು, ನೀರು, ಕಾಂಕ್ರಿಟ್ ಮೇಲೆ ನಡೆಯುತ್ತಾ ಕಲ್ಲು ಬಂಡೆಯ ಮೇಲೆ ಯೋಗ ವ್ಯಾಯಾಮ ಮಾಡುತ್ತಿದ್ದ ಮೋದಿಯನ್ನು ಚುಡಾಯಿಸಲು ಮೋದಿಯನ್ನೇ ಅನುಸರಿಸಿ ಕೆಲವರು ಕಾಮಿಡಿ ವಿಡಿಯೊ ಮಾಡಿದರೆ, ಕೆಲವರು ಫೋಟೋಶಾಪ್ ಮಾಡಿ ಅವರನ್ನು ಹೀನಾಮಾನ ಅಣಕಿಸುತ್ತಿದ್ದಾರೆ. ಪ್ರಧಾನ ಸೇವಕರಿಗೆ ಇದೆಲ್ಲಾ ಬೇಕಿತ್ತಾ ಅನ್ನೋದೆ ಮಿಲಿಯನ್ ಡಾಲರ್ ಪ್ರಶ್ನೆ.

****

ದರ್ಶನ್ ಪ್ರಪಂಚ ಮತ್ತಷ್ಟು ಹಿಗ್ಗಲಿ

ಸಿನಿಮಾ ಅಂದ್ರೆ ಬೆಳ್ಳೆತೆರೆಗೆ ಸೀಮಿತವಾದ ಕ್ಷೇತ್ರವಲ್ಲ. ಅದು ಬದುಕಿನ ಪ್ರತಿಫಲನ, ಪೀಳಿಗೆಗಳ ಪಾಠ. ಅದೆಷ್ಟೊ ಜನರ ಬದುಕನ್ನೆ ಬದಲಿಸಿದ ಹಲವಾರು ಸಿನಿಮಾಗಳು ನಿದರ್ಶನ ನಮ್ಮ ಕಣ್ಮುಂದಿದೆ. ರಾಜ್‍ಕುಮಾರ್ ತಮ್ಮ ನಟನೆಯ ಹೊರತಾಗಿಯೂ ಜನರಿಗೆ ಹತ್ತಿರವಾದದ್ದು ಅವರ ಕಾಳಜಿ, ಕಳಕಳಿ, ಮುಗ್ಧತೆಯಿಂದ. ಅವುಗಳಿಂದ ಪ್ರಭಾವಿತರಾದ ಅಪಾರ ಅಭಿಮಾನಿ ಸಮೂಹವಿದೆ. ನಟ ತನ್ನ ಪಾತ್ರಗಳನ್ನೂ ಮೀರಿ ಬೆಳೆಯುವ ಸಾಧ್ಯತೆಯನ್ನು ರಾಜ್, ವಿಷ್ಣು, ಶಂಕರ್‍ನಾಗ್‍ರಂತಹ ದಿಗ್ಗಜರು ತೋರಿಸಿಕೊಟ್ಟು ಹೋಗಿದ್ದಾರೆ. ಆದರೆ ಈಗಿನ ನಟರಲ್ಲಿ ಅಂತದ್ದನ್ನು ಕಾಣೋದೆ ಅಪರೂಪವಾಗಿದೆ. ಇವತ್ತಿನ ದಿನಗಳಲ್ಲಿ ಯಶೋಗಾಥೆ, ಪ್ರಕಾಶ್‍ರಾಜ್ ಫೌಂಡೇಷನ್‍ನಂತಹ ಜನರಿಗೆ ಉಪಕಾರಿಯಾಗುವಂತಹ, ಜನಪರವಾಗಿ ಮಾತನಾಡುವ, ಜನರ ಹೋರಾಟಗಳಲ್ಲಿ ಭಾಗಿಯಾಗುವ ಹಲವು ಸ್ಯಾಂಡಲ್‍ವುಡ್‍ನ ಹೀರೋಗಳ ಮಧ್ಯೆ ತನ್ನ ಸ್ನೇಹಿತರ ಬಳಗಕ್ಕೆ ಒಂದಲ್ಲ ಒಂದು ರೀತಿಯಲ್ಲಿ ನೆರವು ನೀಡುತ್ತಾ ಬಂದಿರುವ ದರ್ಶನ್, ಸಿನಿಮಾಗಳಲ್ಲಿ ಅವಕಾಶ ಸಿಗದೆ ಜೀವನಕ್ಕಾಗಿ ಟ್ಯಾಕ್ಸಿ ಡ್ರೈವಿಂಗ್ ಮಾಡುತ್ತಿದ್ದ ಹಿರಿಯ ನಟ ಅಶ್ವಥ್ ಅವರ ಮಗ ಶಂಕರ್ ಅಶ್ವಥ್‍ಗೆ ಪಿ.ಕುಮಾರ್ ಆಕ್ಷನ್ ಕಟ್ ಹೇಳುತ್ತಿರುವ ತನ್ನ ಯಜಮಾನ ಸಿನಿಮಾದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ತನಗೆ ಅವಕಾಶ ಕಲ್ಪಿಸಿಕೊಟ್ಟ ದರ್ಶನ್‍ರನ್ನ ಶಂಕರ್ ಚಿತ್ರರಂಗದ ದಿಗ್ವಿಜಯರಾದ ರಾಜ್, ವಿಷ್ಣುರ ಸಾಲಿಗೆ ಸೇರಿಸಿ ಹೊಗಳಿದ್ದಾರೆ. ನಟರಾದವರಿಗೆ ನಿಜಕ್ಕೂ ತಮ್ಮ ಸುತ್ತಲಿನ ಪ್ರಪಂಚದ ಬಗ್ಗೆ ಇಂತಹ ಕಾಳಜಿ ಇರಬೇಕು. ಆದರೆ ಆ ಸುತ್ತಲಿನ ಪ್ರಪಂಚ ಕೇವಲ ತಮ್ಮ ಬಂಧು, ಸ್ನೇಹಿತರು, ಪಾಲುದಾರರಿಗೆ ಮಾತ್ರ ಸೀಮಿತವಾದರೆ ಅದರಿಂದ ಹೆಚ್ಚೇನು ಲಾಭವಿಲ್ಲ. ದರ್ಶನ್‍ರ ಈ ಕಾಳಜಿಯ ಪ್ರಪಂಚ ಮತ್ತಷ್ಟು ಹಿಗ್ಗುವಂತಾದಾಗ ಅವರು ನಿಜಕ್ಕೂ ಮಹನೀಯರ ಸಾಲಿನಲ್ಲಿ ನಿಲ್ಲಲು ಅರ್ಹರೆನಿಸುತ್ತಾರೆ. ಹಾಗಾಗಲಿ ಎಂಬುದೇ ನಮ್ಮ ಹಾರೈಕೆ.

****

ತೆಲುಗಿನ NTR ಜೀವನ ‘ಚಿತ್ರ’ದಲ್ಲಿ ಕನ್ನಡದ ರಾಜ್ ಪಾತ್ರ

ಟಾಲಿಹುಡ್‍ನ ಸೂಪರ್ ಸ್ಟಾರ್ ನಟ ಎನ್.ಟಿ.ರಾಮದೇವ್‍ರವರ ಬಯೋಪಿಕ್ ಸಿನಿಮಾ ಈಗಾಗಲೇ ಸೆಟ್ಟೇರಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಈ ಚಿತ್ರ ಎನ್‍ಟಿಆರ್ ಅವರ ಖಾಸಗೀ ಜೀವನದ ಹಲವು ವಿಷಯಗಳನ್ನು ಒಳಗೊಂಡಿದೆ. ಅವರ ಬಾಲ್ಯ, ಸಿನಿಮಾ ರಾಜಕೀಯ ಮತ್ತು ಜೀವನದಲ್ಲಾದ ವಿವಾದಗಳನ್ನು ಒಳಗೊಂಡಿದೆ. ಎನ್‍ಟಿಆರ್ ಬಯೋಪಿಕ್ ಚಿತ್ರದಲ್ಲಿ ಎನ್‍ಟಿಆರ್ ಬಣ್ಣದ ಜೀವನದಲ್ಲಿ ಪ್ರಭಾವ ಬೀರಿದ ಚಿತ್ರರಂಗದ ಸ್ಟಾರ್‍ಗಳ ಪಾತ್ರಗಳನ್ನು ಸಹ ತೋರಿಸಲಾಗಿದ್ದು. ಕನ್ನಡದ ಸ್ಯಾಂಡಲ್‍ಹುಡ್‍ನ ದಿಗ್ಗಜ ಡಾ.ರಾಜ್‍ಕುಮಾರ್ ಅವರ ಪಾತ್ರವೂ ಬರಲಿದೆ. ಕನ್ನಡ ಚಿತ್ರರಂಗವನ್ನು ದಾಟಿ ಹೊರಹೋಗದ ರಾಜಣ್ಣ ಎನ್‍ಟಿಆರ್ ಬದುಕಿನಲ್ಲಿ ಬೀರಿದ ಪಾತ್ರವೇನು, ಚಿತ್ರದಲ್ಲಿ ರಾಜ್ ಅವರ ಪಾತ್ರಕ್ಕೆ ಬಣ್ಣ ಹಚ್ಚುವವರಾರು? ಎಂಬ ಪ್ರಶ್ನೆ ಕನ್ನಡಿಗರಲ್ಲಿ ಕಾಡತ್ತಿದೆ. ಆದರೆ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ನಿರ್ದೇಶಕ ತೇಜ್ ಮಹಿತಿ ಬಿಟ್ಟುಕೊಟ್ಟಿಲ್ಲ.

****

`ಕಲಿ’ಗೆ ಅದೇನು ಕೇಡುಗಾಲ ಬಂತು

ಗಿಮಿಕ್ ನಿರ್ದೇಶಕ ಪ್ರೇಮ್‍ರವರ ಡ್ರೀಮ್ ಪ್ರಾಜೆಕ್ಟ್ ಎಂದೇ ಸುದ್ದಿಯಾಗಿದ್ದ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿನಯಿಸಲಿದ್ದ ‘ಕಲಿ’ ಚಿತ್ರ ಮುಹೂರ್ತ ಮುಗಿಸಿ ಸುಮ್ಮನಾಗಿಬಿಟ್ಟಿದೆ. ಮುಹೂರ್ತ ಮುಗಿದು ಎರಡು ವರ್ಷವಾದರೂ ಚಿತ್ರ ಸೆಟ್ಟೇರಿದಿದ್ದರಿಂದ ಕಲಿ ಚಿತ್ರದ ಅಬ್ಬರದ ಕನಸು ಕಂಡಿದ್ದ ಸುದೀಪ್ ಅಭಿಮಾನಿಗಳು ಚಿತ್ರ ಸೆಟ್ಟೇರುವುದೋ , ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಲೇ ಇತ್ತು. ಇಷ್ಟಾದರೂ ಚಿತ್ರ ಬಗ್ಗೆ ಸುದೀಪ್ ಆಗಲೀ, ಪ್ರೇಮ್ ಆಗಲಿ ತುಟಿ ಬಿಚ್ಚಿರಲಿಲ್ಲ. ನಿರ್ಮಾಪಕ ಮನೋಹರ್ ಮಾತ್ರ ಚಿತ್ರ ನಿಂತು ಹೋಗಿಲ್ಲ ಡಿಲೇ ಆಗಿದೆ ಅಷ್ಡೇ ಎಂದಿದ್ದರು.
ಆದರೆ ಸುದೀಪ್ ಈಗ ಚಿತ್ರ ಸೆಟ್ಟೇರುವುದಿಲ್ಲ, ಸಿನಿಮಾ ಡ್ರಾಪ್ ಆಗಿದೆ ಎಂದಿದ್ದಾರೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂ.1 ಯಾರಿ ವಿತ್ ಶಿವಣ್ಣ, ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಸುದೀಪ್ ಸತ್ಯ ಬಿಚ್ಚಿಟ್ಟಿದ್ದಾರೆ. ಮಹಾಭಾರತ ಯಾವುದೋ ಭಾಗವನ್ನು ಆಯ್ದುಕೊಂಡು ಸ್ಕ್ರಿಪ್ಟ್ ರೆಡಿಯಾಗಿತ್ತು, ಅದನ್ನು ಸುದೀಪ್ ಮೆಚ್ಚಿಕೊಂಡಿದ್ದರು. ಆದರೆ ಮುಹೂರ್ತದ ನಂತರ ಈ ಸ್ಕ್ರಿಪ್ಟ್ ಸರಿಯಿಲ್ಲ, ಯಾವುದೊ ಒಂದು ಪಾಸಿಟಿವ್ ಆಗಿಲ್ಲ ಎನ್ನಿಸುತ್ತಿತ್ತು ಹಾಗೂ ಮಹಾಭಾರತದ ಆ ಭಾಗವನ್ನು ಮುಟ್ಟಬೇಡಿ ಅದು ಸರಿಯಿಲ್ಲ, ಆ ಸ್ಕ್ರಿಪ್ಟ್ ಪಾಸಿಟಿವ್ ಆದುದ್ದಲ್ಲ ಎಂದು ತುಂಬಾ ಜನ ಹೇಳಿದ್ದರು, ಹಾಗಾಗಿ ಈ ಸ್ಕ್ರಿಪ್ಟ್ ಬೇಡ ಬೇರೆಯದು ಮಾಡೋಣ ಎಂದು ಪ್ರೇಮ್ ಅವರನ್ನು ಒಪ್ಪಿಸಿದ್ದೇನೆ ಎಂದಿದ್ದಾರೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...