HomeUncategorizedಸಿನಿಮಾ ರಂಗ - ಹಾಸ್ಯ, ವಿಮರ್ಷೆ, ಆಶಯ

ಸಿನಿಮಾ ರಂಗ – ಹಾಸ್ಯ, ವಿಮರ್ಷೆ, ಆಶಯ

- Advertisement -
- Advertisement -

ಫಿಟ್‍ನೆಸ್ ಫಜೀತಿಗಳು

ಸಿನಿಮಾಕ್ಕಾಗಿ ತಮ್ಮ ದೇಹವನ್ನೇ ಏರುಪೇರು ಮಾಡಿಕೊಳ್ಳುವ ಈಗಿನ ಹೀರೋಗಳ ಕಾಯಿಲೆ ಯಾರ್ಯಾರಿಗೋ ಹಬ್ಬಿ, ಏನೇನೋ ರಾದ್ಧಾಂತ ಮಾಡುತ್ತಿದೆ. ಸಿನಿಮಾದ ಪಾತ್ರಕ್ಕಾಗಿ ದಪ್ಪ-ಸಣ್ಣ ಆಗುವುದು, ದಾಡಿ ಬೆಳೆಸುವುದು, ಹುಚ್ಚಾಪಟ್ಟೆ ಹೇರ್‍ಸ್ಟೈಲ್ ಮಾಡಿಕೊಳ್ಳೋದು ಮಾಮೂಲಿ. ಪಾತ್ರವೊಂದು ನಿಜವಾಗಿಯೂ ಅಂತಹ ಮಾರ್ಪಾಟನ್ನು ಬಯಸಿದರೆ ತಪ್ಪೇನು ಇಲ್ಲ. ಆದರೆ ಸ್ನಾಯುಗಳನ್ನು ತೋರಿಸೋದೆ ಟ್ರೆಂಡ್ ಆಗಿದೆ ಅನ್ನೋ ಕಾರಣಕ್ಕೆ, ಅಗತ್ಯವಿಲ್ಲದಿದ್ದರು ನಾಯಕರುಗಳು `ಮೈ’ಮಾಟ ತೋರಿಸುವ ದೃಶ್ಯಗಳನ್ನು ತುರುಕಿ ಸಿನಿಮಾವನ್ನೇ ಹಾಳು ಮಾಡುವ ಖಯಾಲಿ ಈಚೀಚೆಗೆ ಹೆಚ್ಚಾಗಿದೆ. ಜಿಮ್‍ಗಳಲ್ಲಿ ಕಸರತ್ತು ಮಾಡಿಕೊಂಡಿದ್ದ ಹೀರೋಗಳು ಈಗ ಫಿಟ್ನೆಸ್ ಹೆಸರಲ್ಲಿ ಒಬ್ಬರಿಗೊಬ್ಬರ ಕಾಲೆಳೆದುಕೊಂಡು ಅಭಿಮಾನಿಗಳಿಗೆ ಪುಕ್ಕಟೆ ಮನರಂಜನೆ ಕೊಡಲು ಶುರು ಮಾಡಿದ್ದಾರೆ. ಮೊನ್ನೆ ಸುದೀಪ್ ಇಂತದ್ದೇ ಹುಚ್ಚಾಟ ಮಾಡಿಕೊಂಡು ಯಶ್ ಮತ್ತು ಉಪೇಂದ್ರರಿಗೆ ಫಿಟ್ನೆಸ್ ಸವಾಲು ಹಾಕಲು ಹೋಗಿ, ಅವರಿಂದ ಡಿಫೆರೆಂಟ್ ಆಗಿಯೇ ಉತ್ತರ ಪಡೆದು ಮುಖಕ್ಕೆ ಟವೆಲ್ ಮುಚ್ಕೊಳೋ ಕೆಲಸ ಮಾಡಿಕೊಂಡರು.
ಈಗ ಈ ಚಾಲೆಂಜ್ ದಹಲಿಯ ಸಂಸತ್‍ವರೆಗೂ ತಲುಪಿದೆ. ವಿಶ್ವಗುರು ಆಗಲು ಹೊರಟಿರುವ ನಮ್ಮ ದೇಶದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಭಾರತ ತಂಡದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿಗೆ ವರ್ಕ್‍ಔಟ್ ಚಾಲೆಂಜ್ ಹಾಕಿ ವಿಚಿತ್ರ ಟ್ರೆಂಡೊಂದನ್ನು ಹುಟ್ಟುಹಾಕಿದ್ದಾರೆ. ದೇಶಸೇವೆ ಮಾಡುವ ಬದಲು ದೇಹಸೇವೆ ಮಾಡಿಕೊಳ್ಳಲು ಮುಂದಾಗಿರುವ ಅವರು ಇದೀಗ ಇರಲಾರದೆ ಇರುವೆ ಬಿಟ್ಟುಕೊಂಡವರಂತೆ ರಾಷ್ಟ್ರದ ಜನರೆದುರು ಕಾಮಿಡಿ ಪೀಸ್ ಆಗ್ಬಿಟ್ಟಿದ್ದಾರೆ. ಹುಲ್ಲು, ನೀರು, ಕಾಂಕ್ರಿಟ್ ಮೇಲೆ ನಡೆಯುತ್ತಾ ಕಲ್ಲು ಬಂಡೆಯ ಮೇಲೆ ಯೋಗ ವ್ಯಾಯಾಮ ಮಾಡುತ್ತಿದ್ದ ಮೋದಿಯನ್ನು ಚುಡಾಯಿಸಲು ಮೋದಿಯನ್ನೇ ಅನುಸರಿಸಿ ಕೆಲವರು ಕಾಮಿಡಿ ವಿಡಿಯೊ ಮಾಡಿದರೆ, ಕೆಲವರು ಫೋಟೋಶಾಪ್ ಮಾಡಿ ಅವರನ್ನು ಹೀನಾಮಾನ ಅಣಕಿಸುತ್ತಿದ್ದಾರೆ. ಪ್ರಧಾನ ಸೇವಕರಿಗೆ ಇದೆಲ್ಲಾ ಬೇಕಿತ್ತಾ ಅನ್ನೋದೆ ಮಿಲಿಯನ್ ಡಾಲರ್ ಪ್ರಶ್ನೆ.

****

ದರ್ಶನ್ ಪ್ರಪಂಚ ಮತ್ತಷ್ಟು ಹಿಗ್ಗಲಿ

ಸಿನಿಮಾ ಅಂದ್ರೆ ಬೆಳ್ಳೆತೆರೆಗೆ ಸೀಮಿತವಾದ ಕ್ಷೇತ್ರವಲ್ಲ. ಅದು ಬದುಕಿನ ಪ್ರತಿಫಲನ, ಪೀಳಿಗೆಗಳ ಪಾಠ. ಅದೆಷ್ಟೊ ಜನರ ಬದುಕನ್ನೆ ಬದಲಿಸಿದ ಹಲವಾರು ಸಿನಿಮಾಗಳು ನಿದರ್ಶನ ನಮ್ಮ ಕಣ್ಮುಂದಿದೆ. ರಾಜ್‍ಕುಮಾರ್ ತಮ್ಮ ನಟನೆಯ ಹೊರತಾಗಿಯೂ ಜನರಿಗೆ ಹತ್ತಿರವಾದದ್ದು ಅವರ ಕಾಳಜಿ, ಕಳಕಳಿ, ಮುಗ್ಧತೆಯಿಂದ. ಅವುಗಳಿಂದ ಪ್ರಭಾವಿತರಾದ ಅಪಾರ ಅಭಿಮಾನಿ ಸಮೂಹವಿದೆ. ನಟ ತನ್ನ ಪಾತ್ರಗಳನ್ನೂ ಮೀರಿ ಬೆಳೆಯುವ ಸಾಧ್ಯತೆಯನ್ನು ರಾಜ್, ವಿಷ್ಣು, ಶಂಕರ್‍ನಾಗ್‍ರಂತಹ ದಿಗ್ಗಜರು ತೋರಿಸಿಕೊಟ್ಟು ಹೋಗಿದ್ದಾರೆ. ಆದರೆ ಈಗಿನ ನಟರಲ್ಲಿ ಅಂತದ್ದನ್ನು ಕಾಣೋದೆ ಅಪರೂಪವಾಗಿದೆ. ಇವತ್ತಿನ ದಿನಗಳಲ್ಲಿ ಯಶೋಗಾಥೆ, ಪ್ರಕಾಶ್‍ರಾಜ್ ಫೌಂಡೇಷನ್‍ನಂತಹ ಜನರಿಗೆ ಉಪಕಾರಿಯಾಗುವಂತಹ, ಜನಪರವಾಗಿ ಮಾತನಾಡುವ, ಜನರ ಹೋರಾಟಗಳಲ್ಲಿ ಭಾಗಿಯಾಗುವ ಹಲವು ಸ್ಯಾಂಡಲ್‍ವುಡ್‍ನ ಹೀರೋಗಳ ಮಧ್ಯೆ ತನ್ನ ಸ್ನೇಹಿತರ ಬಳಗಕ್ಕೆ ಒಂದಲ್ಲ ಒಂದು ರೀತಿಯಲ್ಲಿ ನೆರವು ನೀಡುತ್ತಾ ಬಂದಿರುವ ದರ್ಶನ್, ಸಿನಿಮಾಗಳಲ್ಲಿ ಅವಕಾಶ ಸಿಗದೆ ಜೀವನಕ್ಕಾಗಿ ಟ್ಯಾಕ್ಸಿ ಡ್ರೈವಿಂಗ್ ಮಾಡುತ್ತಿದ್ದ ಹಿರಿಯ ನಟ ಅಶ್ವಥ್ ಅವರ ಮಗ ಶಂಕರ್ ಅಶ್ವಥ್‍ಗೆ ಪಿ.ಕುಮಾರ್ ಆಕ್ಷನ್ ಕಟ್ ಹೇಳುತ್ತಿರುವ ತನ್ನ ಯಜಮಾನ ಸಿನಿಮಾದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ತನಗೆ ಅವಕಾಶ ಕಲ್ಪಿಸಿಕೊಟ್ಟ ದರ್ಶನ್‍ರನ್ನ ಶಂಕರ್ ಚಿತ್ರರಂಗದ ದಿಗ್ವಿಜಯರಾದ ರಾಜ್, ವಿಷ್ಣುರ ಸಾಲಿಗೆ ಸೇರಿಸಿ ಹೊಗಳಿದ್ದಾರೆ. ನಟರಾದವರಿಗೆ ನಿಜಕ್ಕೂ ತಮ್ಮ ಸುತ್ತಲಿನ ಪ್ರಪಂಚದ ಬಗ್ಗೆ ಇಂತಹ ಕಾಳಜಿ ಇರಬೇಕು. ಆದರೆ ಆ ಸುತ್ತಲಿನ ಪ್ರಪಂಚ ಕೇವಲ ತಮ್ಮ ಬಂಧು, ಸ್ನೇಹಿತರು, ಪಾಲುದಾರರಿಗೆ ಮಾತ್ರ ಸೀಮಿತವಾದರೆ ಅದರಿಂದ ಹೆಚ್ಚೇನು ಲಾಭವಿಲ್ಲ. ದರ್ಶನ್‍ರ ಈ ಕಾಳಜಿಯ ಪ್ರಪಂಚ ಮತ್ತಷ್ಟು ಹಿಗ್ಗುವಂತಾದಾಗ ಅವರು ನಿಜಕ್ಕೂ ಮಹನೀಯರ ಸಾಲಿನಲ್ಲಿ ನಿಲ್ಲಲು ಅರ್ಹರೆನಿಸುತ್ತಾರೆ. ಹಾಗಾಗಲಿ ಎಂಬುದೇ ನಮ್ಮ ಹಾರೈಕೆ.

****

ತೆಲುಗಿನ NTR ಜೀವನ ‘ಚಿತ್ರ’ದಲ್ಲಿ ಕನ್ನಡದ ರಾಜ್ ಪಾತ್ರ

ಟಾಲಿಹುಡ್‍ನ ಸೂಪರ್ ಸ್ಟಾರ್ ನಟ ಎನ್.ಟಿ.ರಾಮದೇವ್‍ರವರ ಬಯೋಪಿಕ್ ಸಿನಿಮಾ ಈಗಾಗಲೇ ಸೆಟ್ಟೇರಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಈ ಚಿತ್ರ ಎನ್‍ಟಿಆರ್ ಅವರ ಖಾಸಗೀ ಜೀವನದ ಹಲವು ವಿಷಯಗಳನ್ನು ಒಳಗೊಂಡಿದೆ. ಅವರ ಬಾಲ್ಯ, ಸಿನಿಮಾ ರಾಜಕೀಯ ಮತ್ತು ಜೀವನದಲ್ಲಾದ ವಿವಾದಗಳನ್ನು ಒಳಗೊಂಡಿದೆ. ಎನ್‍ಟಿಆರ್ ಬಯೋಪಿಕ್ ಚಿತ್ರದಲ್ಲಿ ಎನ್‍ಟಿಆರ್ ಬಣ್ಣದ ಜೀವನದಲ್ಲಿ ಪ್ರಭಾವ ಬೀರಿದ ಚಿತ್ರರಂಗದ ಸ್ಟಾರ್‍ಗಳ ಪಾತ್ರಗಳನ್ನು ಸಹ ತೋರಿಸಲಾಗಿದ್ದು. ಕನ್ನಡದ ಸ್ಯಾಂಡಲ್‍ಹುಡ್‍ನ ದಿಗ್ಗಜ ಡಾ.ರಾಜ್‍ಕುಮಾರ್ ಅವರ ಪಾತ್ರವೂ ಬರಲಿದೆ. ಕನ್ನಡ ಚಿತ್ರರಂಗವನ್ನು ದಾಟಿ ಹೊರಹೋಗದ ರಾಜಣ್ಣ ಎನ್‍ಟಿಆರ್ ಬದುಕಿನಲ್ಲಿ ಬೀರಿದ ಪಾತ್ರವೇನು, ಚಿತ್ರದಲ್ಲಿ ರಾಜ್ ಅವರ ಪಾತ್ರಕ್ಕೆ ಬಣ್ಣ ಹಚ್ಚುವವರಾರು? ಎಂಬ ಪ್ರಶ್ನೆ ಕನ್ನಡಿಗರಲ್ಲಿ ಕಾಡತ್ತಿದೆ. ಆದರೆ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ನಿರ್ದೇಶಕ ತೇಜ್ ಮಹಿತಿ ಬಿಟ್ಟುಕೊಟ್ಟಿಲ್ಲ.

****

`ಕಲಿ’ಗೆ ಅದೇನು ಕೇಡುಗಾಲ ಬಂತು

ಗಿಮಿಕ್ ನಿರ್ದೇಶಕ ಪ್ರೇಮ್‍ರವರ ಡ್ರೀಮ್ ಪ್ರಾಜೆಕ್ಟ್ ಎಂದೇ ಸುದ್ದಿಯಾಗಿದ್ದ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿನಯಿಸಲಿದ್ದ ‘ಕಲಿ’ ಚಿತ್ರ ಮುಹೂರ್ತ ಮುಗಿಸಿ ಸುಮ್ಮನಾಗಿಬಿಟ್ಟಿದೆ. ಮುಹೂರ್ತ ಮುಗಿದು ಎರಡು ವರ್ಷವಾದರೂ ಚಿತ್ರ ಸೆಟ್ಟೇರಿದಿದ್ದರಿಂದ ಕಲಿ ಚಿತ್ರದ ಅಬ್ಬರದ ಕನಸು ಕಂಡಿದ್ದ ಸುದೀಪ್ ಅಭಿಮಾನಿಗಳು ಚಿತ್ರ ಸೆಟ್ಟೇರುವುದೋ , ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಲೇ ಇತ್ತು. ಇಷ್ಟಾದರೂ ಚಿತ್ರ ಬಗ್ಗೆ ಸುದೀಪ್ ಆಗಲೀ, ಪ್ರೇಮ್ ಆಗಲಿ ತುಟಿ ಬಿಚ್ಚಿರಲಿಲ್ಲ. ನಿರ್ಮಾಪಕ ಮನೋಹರ್ ಮಾತ್ರ ಚಿತ್ರ ನಿಂತು ಹೋಗಿಲ್ಲ ಡಿಲೇ ಆಗಿದೆ ಅಷ್ಡೇ ಎಂದಿದ್ದರು.
ಆದರೆ ಸುದೀಪ್ ಈಗ ಚಿತ್ರ ಸೆಟ್ಟೇರುವುದಿಲ್ಲ, ಸಿನಿಮಾ ಡ್ರಾಪ್ ಆಗಿದೆ ಎಂದಿದ್ದಾರೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂ.1 ಯಾರಿ ವಿತ್ ಶಿವಣ್ಣ, ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಸುದೀಪ್ ಸತ್ಯ ಬಿಚ್ಚಿಟ್ಟಿದ್ದಾರೆ. ಮಹಾಭಾರತ ಯಾವುದೋ ಭಾಗವನ್ನು ಆಯ್ದುಕೊಂಡು ಸ್ಕ್ರಿಪ್ಟ್ ರೆಡಿಯಾಗಿತ್ತು, ಅದನ್ನು ಸುದೀಪ್ ಮೆಚ್ಚಿಕೊಂಡಿದ್ದರು. ಆದರೆ ಮುಹೂರ್ತದ ನಂತರ ಈ ಸ್ಕ್ರಿಪ್ಟ್ ಸರಿಯಿಲ್ಲ, ಯಾವುದೊ ಒಂದು ಪಾಸಿಟಿವ್ ಆಗಿಲ್ಲ ಎನ್ನಿಸುತ್ತಿತ್ತು ಹಾಗೂ ಮಹಾಭಾರತದ ಆ ಭಾಗವನ್ನು ಮುಟ್ಟಬೇಡಿ ಅದು ಸರಿಯಿಲ್ಲ, ಆ ಸ್ಕ್ರಿಪ್ಟ್ ಪಾಸಿಟಿವ್ ಆದುದ್ದಲ್ಲ ಎಂದು ತುಂಬಾ ಜನ ಹೇಳಿದ್ದರು, ಹಾಗಾಗಿ ಈ ಸ್ಕ್ರಿಪ್ಟ್ ಬೇಡ ಬೇರೆಯದು ಮಾಡೋಣ ಎಂದು ಪ್ರೇಮ್ ಅವರನ್ನು ಒಪ್ಪಿಸಿದ್ದೇನೆ ಎಂದಿದ್ದಾರೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...