2019 ರಲ್ಲಿ ರಾಹುಲ್ ಗಾಂಧಿ ಅವರು ನೀಡಿದ ”ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ ಕೋರ್ಟ್ ಶುಕ್ರವಾರ ಗುಜರಾತ್ ಸರ್ಕಾರಕ್ಕೆ ಮತ್ತು ಮೊಕದ್ದಮೆ ಹೂಡಿರುವವರಿಗೆ ನೋಟಿಸ್ ಜಾರಿ ಮಾಡಿದ್ದು 10 ದಿನಗಳಳೊಗೆ ಉತ್ತರಿಸುವಂತೆ ಕೇಳಿದೆ. ಆನಂತರ ಈ ವಿಷಯವನ್ನು ಆಗಸ್ಟ್ 4 ರಂದು ಪೋಸ್ಟ್ ಮಾಡಲಾಗಿದೆ.
ಉಚ್ಚ ನ್ಯಾಯಾಲಯದ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ, ಲೋಕಸಭೆಯ ಸಂಸದರಾಗಿ ಗಾಂಧಿಯವರ ಮರುಸ್ಥಾಪನೆಗೆ ದಾರಿಯಾಗುತ್ತಿತ್ತು.
BREAKING | Supreme Court Issues Notice On Congress Leader Rahul Gandhi's Plea To Stay Conviction; Posts For Hearing On August 4 | @awstika #SupremeCourt #RahulGandhi @RahulGandhi https://t.co/DVExqaC8gk
— Live Law (@LiveLawIndia) July 21, 2023
ಏನಿದು ಘಟನೆ?
ಏಪ್ರಿಲ್ 13, 2019ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿಯವರನ್ನು ಉಲ್ಲೇಖಿಸಿ, ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಹೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಮೋದಿ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಗುಜರಾತ್ ನ್ಯಾಯಾಲಯವು ಅವರನ್ನು ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ರಾಹುಲ್ ಅವರ ಸಂಸದ ಸ್ಥಾನಮಾನವನ್ನು ತೆಗೆದುಹಾಕಲು ಕಾರಣವಾಯಿತು ಮತ್ತು ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಲಾಯಿತು.
ಸೂರತ್ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಜುಲೈ 7ರಂದು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು.
ರಾಹುಲ್ ಗಾಂಧಿಯವರ ದೋಷಾರೋಪಣೆಗೆ ತಡೆಯಾಜ್ಞೆ ನೀಡಿದ್ದರೆ ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪಿಸಲು ದಾರಿ ಮಾಡಿಕೊಡಬಹುದಿತ್ತು.
ರಾಹುಲ್ ಗಾಂಧಿ ಅವರು ಪ್ರಸ್ತುತ ಕೇರಳದ ವಯನಾಡಿನ ಸಂಸದರಾಗಿ ಅನರ್ಹಗೊಂಡಿದ್ದಾರೆ. ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ.
ಹೈಕೋರ್ಟ್ ಆದೇಶವನ್ನು ತಡೆಹಿಡಿಯದಿದ್ದರೆ ಸರಿಪಡಿಸಲಾಗದ ತಪ್ಪು ನಡೆಯುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಮನವಿಯಲ್ಲಿ ಹೇಳಿದ್ದಾರೆ. ಆದೇಶವನ್ನು ತಡೆಹಿಡಿಯದೇ ಇದ್ದರೇ ಆದೇಶ ಬದಲಾಯಿಸದಿದ್ದರೆ ಅದು ಅನ್ಯಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.