Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...