Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...