Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....