Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...