Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...