Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...