Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...