Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...