Homeಚಳವಳಿ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

- Advertisement -
- Advertisement -

ಪ್ರಧಾನಿ ಮೋದಿ ಕಳೆದ ಬಾರಿ ಸಂಸತ್ತಿನಲ್ಲಿ, ಕೃಷಿ ಕಾನೂನನ್ನು ವಿರೋಧಿಸಿ ಹೋರಾಟ ನಿರತರಾಗಿದ್ದ ರೈತ ಮುಖಂಡರನ್ನು ಉಲ್ಲೇಖಿಸಿ ‘ಆಂದೋಲನ ಜೀವಿ’ಗಳು ಎಂದು ಹಂಗಿಸಿದ್ದರು. ಆದರೆ ರೈತರು ಮಾತ್ರ ಹೌದು ನಾವು ಆಂದೋಲನ ಜೀವಿಗಳು ಎಂದು ಒಪ್ಪಿಕೊಂಡಿದ್ದರು. ಜೊತೆಗೆ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು, ಮಹಾತ್ಮರನ್ನು ಉದಾಹರಿಸಿ ಇವರೆಲ್ಲರ ಆಂದೋಲನದ ಫಲವೇ ನಮ್ಮ ಸ್ವಾತಂತ್ಯ್ರ ಎಂದು ಹೇಳಿದ್ದರು.

ಇದೀಗ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ಪ್ರಧಾನಿಯ ಈ ಘೋಷಣೆಗೆ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೇಳಿಕೆ ಇಲ್ಲಿದೆ.

ಕರ್ನಾಟಕ – ಬಸವರಾಜ್ ಬೊಮ್ಮಾಯಿ; ಭಾರತೀಯ ಜನತಾ ಪಕ್ಷ (BJP)

“ಪ್ರಧಾನಿ ಮೋದಿ ಕೃಷಿ ಕಾನೂನನ್ನು ಹಿಂಪಡೆದಿರುವುದರ ಹಿಂದೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ. ರೈತರ ಹೋರಾಟಕ್ಕೆ ಮಣಿಯುವ ಪ್ರಶ್ನೆಯೂ ಉದ್ಭವಿಸಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಪರವಾಗಿ ರೈತರು ಹೋರಾಟ ನಡೆಸುತ್ತಿದ್ದರು. ಇದು ಸ್ಪಂದನಶೀಲ ಸರ್ಕಾರ. ರೈತರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ”

ತಮಿಳುನಾಡು – ಎಂ. ಕೆ. ಸ್ಟಾಲಿನ್; ಡ್ರಾವಿಡ ಮಕ್ಕಳ್ ಕಚ್ಚಿ (DMK)

“ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಇಡೀ ರೈತರ ಹೋರಾಟಕ್ಕೆ ಸಂದ ಜಯವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರ ಮಾತುಗಳನ್ನು ಗೌರವಿಸಬೇಕು. ಇದು ಇತಿಹಾಸ ಹೇಳುವ ಪಾಠ”

“ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಶಾಸಕಾಂಗ ಸಭೆಯಲ್ಲಿ ರೈತರ ಪರವಾಗಿ ನಿಂತು ನಿರ್ಣಯ ಅಂಗೀಕರಿಸಿದ್ದಕ್ಕೆ ನಾವು ಹೆಮ್ಮೆ ಪಡುತ್ತಿದ್ದೇವೆ. ರೈತರು ತಮ್ಮ ನೈತಿಕ ಹೋರಾಟದ ಮೂಲಕ ಹಕ್ಕುಗಳನ್ನು ಗಳಿಸಿ ಭಾರತವು ಗಾಂಧಿಯ ನೆಲ ಎಂದು ಜಗತ್ತಿಗೆ ಸಾರಿದ್ದಾರೆ!”

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಕೇರಳ – ಪಿಣರಾಯಿ ವಿಜಯನ್; ಭಾರತ ಕಮ್ಯುನಿಷ್ಟ್‌ ಪಕ್ಷ (CPIM)

“ಒಂದು ವರ್ಷದಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ವರ್ಗ ಹೋರಾಟಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳ ಒಂದು ಅಧ್ಯಾಯವನ್ನು ಭಾರತೀಯ ರೈತರು ಬರೆದಿದ್ದಾರೆ. ಸರಿಸಾಟಿಯಿಲ್ಲದ ಸಂಕಲ್ಪ ಮತ್ತು ಅಚಲ ಮನೋಭಾವದಿಂದ ಹೋರಾಡಿದ ರೈತರು ಮತ್ತು ರೈತ ಸಂಘಟನೆಗಳು ಹಾಗೂ ಹುತಾತ್ಮರಿಗೆ ನಮನಗಳು”

ತೆಲಂಗಾಣ – ತೆಲಂಗಾಣ ರಾಷ್ಟ್ರ ಸಮಿತಿ (TRS)

“ಕೇಂದ್ರದ ನಿರ್ಧಾರವು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ರೈತರ ವಿಜಯವಾಗಿದೆ” ಎಂದು ಆಡಳಿತ ಪಕ್ಷ ಟಿಆರ್‌ಎಸ್‌ ಹೇಳಿದೆ.

ಕೃಷಿ ಸಚಿವ ಎಸ್ ನಿರಂಜನ್ ರೆಡ್ಡಿ ಮಾತನಾಡಿ, “ಪ್ರಧಾನಿ ಮೋದಿ ಅಂತಿಮವಾಗಿ ದೇಶದ ತಳಮಟ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಮೊದಲೇ ರದ್ದು ಮಾಡಿದ್ದರೆ ರೈತರ ಆಂದೋಲನ ತಪ್ಪಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಪಂಜಾಬ್ – ಚರಣ್‌ಜಿತ್‌ ಚನ್ನಿ; ಕಾಂಗ್ರೆಸ್

“ಈ ನಿರ್ಧಾರವು ತುಂಬಾ ತಡವಾಯಿತು, ಆದರೆ ಇದನ್ನು ನಾನು ಸ್ವಾಗತಿಸುತ್ತೇನೆ. ‘ಸಂಘರ್ಷ’ದ ಸಂದರ್ಭದಲ್ಲಿನ ರೈತರ ತ್ಯಾಗವನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಲಾಗುವುದು. ಎಂಎಸ್‌ಪಿಯನ್ನು ಶಾಸನಬದ್ಧ ಹಕ್ಕನ್ನಾಗಿ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ”

“ಕೇಂದ್ರದ ವಿರುದ್ಧ ವರ್ಷವಿಡೀ ನಡೆದ ಆಂದೋಲನದಲ್ಲಿ ನ್ಯಾಯಕ್ಕಾಗಿ ನಡೆದ ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು”

ಮಹಾರಾಷ್ಟ್ರ – ಉದ್ಧವ್‌ ಠಾಕ್ರೆ; ಶಿವಸೇನೆ

“ಈ ದೇಶದಲ್ಲಿ ಜನಸಾಮಾನ್ಯರು ಏನು ಮಾಡಬಹುದು ಮತ್ತು ಅದರ ಶಕ್ತಿ ಏನು ಎಂಬುದಕ್ಕೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಒಂದು ಉದಾಹರಣೆಯಾಗಿದೆ. ಮೊದಲನೆಯದಾಗಿ ಗುರುನಾನಕ್ ಜಯಂತಿಯಂದು ಪ್ರಧಾನಮಂತ್ರಿಯವರು ಮಾಡಿದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ದೇಶದೆಲ್ಲೆಡೆ ರೈತರ ಕಾಯ್ದೆ ವಿರುದ್ಧ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿತ್ತು. ಆಂದೋಲನ ಇಂದಿಗೂ ಮುಂದುವರೆದಿದೆ. ಎಲ್ಲರ ಹೊಟ್ಟೆ ತುಂಬಿಸುವ ಅನ್ನದಾತ ಅನಗತ್ಯವಾಗಿ ಬಲಿಯಾಗಿದ್ದಾನೆ. ಆದರೆ ಅನ್ನದಾತ ತನ್ನ ಶಕ್ತಿಯನ್ನು ತೋರಿಸಿದ್ದು, ಅವನಿಗೆ ನಮಸ್ಕಾರ”

“ಈ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ನಮನಗಳು. ಇಂತಹ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಇಂದು ನಡೆದಿರುವ ಅವಮಾನ ಮುಂದೆ ಆಗದಂತೆ ಎಲ್ಲಾ ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಈ ಕಾನೂನುಗಳನ್ನು ರದ್ದುಗೊಳಿಸುವ ತಾಂತ್ರಿಕ ಪ್ರಕ್ರಿಯೆಯು ತ್ವರಿತಗೊಳ್ಳುವ ನಿರೀಕ್ಷೆಯಿದೆ.”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಪಶ್ಚಿಮ ಬಂಗಾಳ – ಮಮತಾ ಬ್ಯಾನರ್ಜಿ; ತೃಣ ಮೂಲ ಕಾಂಗ್ರೆಸ್ (TMC)

“ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದ್ದು, ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ತೀವ್ರ ಸಂತಾಪಗಳು”

ಜಾರ್ಖಂಡ್ – ಹೇಮಂತ್ ಸೊರೆನ್; ಝಾರ್ಖಂಡ್‌ ಮುಕ್ತಿ ಮೋರ್ಚಾ(JMK)

“ಇದು ಅತ್ಯಂತ ಹಾಸ್ಯಾಸ್ಪದ ಘೋಷಣೆಯಾಗಿದೆ. ಈಗ ಇಡೀ ಬಿಜೆಪಿ ಪ್ರಧಾನಿಯನ್ನು ರೈತ ಸ್ನೇಹಿಯಂತೆ ಕಾಣಬೇಕು ಎಂಬ ಅಭಿಯಾನದಲ್ಲಿ ತೊಡಗಿದೆ! ಇಂದಿಗೂ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದು ಸಾಬೀತಾಗಿದೆ. ಈ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಪ್ರಧಾನಿ ಕೂಡಲೇ 5 ಕೋಟಿ ರೂಪಾಯಿ ಪರಿಹಾರ ನೀಡಿ, ಹುತಾತ್ಮರ ಸ್ಥಾನಮಾನ ನೀಡಬೇಕು”

“ಮೃತ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಅವರ ವಿರುದ್ಧದ ಎಫ್‌ಐಆರ್‌ಗಳು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇವೆ, ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಷ್ಟು ದಿನ ರೈತರು ಮನೆ ಬಿಟ್ಟು ತಮ್ಮ ಮಕ್ಕಳೊಂದಿಗೆ ರಸ್ತೆಗಿಳಿದಿದ್ದರು. ಹೀಗಾಗಿ ರೈತರ ಬೆಳೆ ಪರಿಹಾರವಾಗಿ ನಾಡಿನ ಎಲ್ಲ ರೈತರಿಗೆ ತಲಾ 10 ಲಕ್ಷ ರೂ. ನೀಡಬೇಕು. ಅಲ್ಲದೆ ಕೇಂದ್ರ ಕೃಷಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.”

ರಾಜಸ್ತಾನ – ಅಶೋಕ್ ಗೆಹ್ಲೋಟ್;ಕಾಂಗ್ರೆಸ್

“ಇಂದು ಪ್ರಧಾನಿ ಒತ್ತಾಯಪೂರ್ವಕವಾಗಿ ಬಂದು ಮಾತನಾಡುವಂತಾಯಿತು. ದೇಶದ ಜನತೆಗೆ ಸಂದೇಶ ನೀಡಲೇ ಬೇಕಾಗಿ ಬಂತು. ಮೂರು ಕರಾಳ ಕಾನೂನು ನಮ್ಮ ವಿಧಾನಸಭೆಯಿಂದ ಈಗಾಗಲೇ ತಿರಸ್ಕರಿಸಲ್ಪಟ್ಟಿದ್ದವು. ಅದನ್ನು ಈಗ ವಾಪಾಸು ಪಡೆಯುವ ಘೋಷಣೆ ಮಾಡುವಂತಾಯಿತು. ಇದು ದೇಶದ ರೈತರ ಅದ್ಭುತ ವಿಜಯ ಎಂದು ನಾನು ಭಾವಿಸುತ್ತೇನೆ, ನಾನು ರೈತರನ್ನು ಅಭಿನಂದಿಸುತ್ತೇನೆ”

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...