Homeಮುಖಪುಟ"ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ"? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ...

“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದರ ಹಿಂದೆ ಏನಾದರು ‘ಸಾರ್ವಜನಿಕ ಹಿತಾಸಕ್ತಿ’ ಇದೆಯಾ? ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿಯವರು 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಪದವಿ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಆರ್‌ಟಿಐ ಕಾರ್ಯಕರ್ತ ದಾಖಲೆ ಕೇಳಿದ್ದಕ್ಕೆ ಹೈಕೋರ್ಟ್ ಮೇಲಿನಂತೆ ಪ್ರಶ್ನಿಸಿದೆ ಎಂದು ವರದಿ ಹೇಳಿದೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಒದಗಿಸುವಂತೆ ದೆಹಲಿ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿದೆ. ಇದನ್ನು ಪ್ರಶ್ನಿಸಿ 2017ರಲ್ಲಿ ದೆಹಲಿ ವಿಶ್ವವಿದ್ಯಾನಿಲಯ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಎ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್‌ (ಎಂ.ಎ) ಪದವಿ ಪಡೆದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಆದರೆ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಕೆಲವರು ಮೋದಿ ಪದವಿ ಪಡೆದಿದ್ದಾರೆ ಎನ್ನುವುದು ಕಟ್ಟು ಕಥೆ ಎಂದಿದ್ದಾರೆ.

ಮಂಗಳವಾರ (ಫೆ.11) ದೆಹಲಿ ವಿಶ್ವವಿದ್ಯಾನಿಲಯದ ಪರವಾಗಿ ಹೈಕೋರ್ಟ್‌ಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest)ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರಿದು, “ವಿಶ್ವ ವಿದ್ಯಾನಿಲಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳ ಪದವಿ ಮತ್ತು ಅಂಕ ಪಟ್ಟಿಗಳ ವಿವರಗಳು ಬಹಳ ‘ವಿಶ್ವಾಸಾರ್ಹ ರೀತಿಯಲ್ಲಿ’ ಇದೆ. ಅವೆಲ್ಲವೂ ವಿದ್ಯಾರ್ಥಿಗಳ ‘ವೈಯಕ್ತಿಕ ಗೌಪ್ಯ’ ಮಾಹಿತಿಗಳು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂಜಯ್ ಹೆಗ್ಡೆ, ಶೈಕ್ಷಣಿಕ ವಿವರಗಳು ಸಾರ್ವಜನಿಕ ಮಾಹಿತಿಯಾಗಿದ್ದು, ಅವುಗಳನ್ನು ನೋಟಿಸ್‌ ಬೋರ್ಡ್‌ಗಳು ಮತ್ತು ಪತ್ರಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಂದುವರಿದು, ಸಾರ್ವಜನಿಕ ಹಿತಾಸಕ್ತಿ ಯಾವಾಗಲು ಬಹಿರಂಗಪಡಿಸುವಿಕೆಯ ಕಡೆ ಇರುತ್ತದೆಯೇ ಹೊರತು, ಮುಚ್ಚಿಡುವುದರ ಕಡೆ ಅಲ್ಲ. ಚುನಾಯಿತ ಜನ ಪ್ರತಿನಿಧಿಗಳ ಆಸ್ತಿ, ಕುಟುಂಬದ ಹಿನ್ನೆಲೆ ಇತ್ಯಾದಿ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಒಬ್ಬ ಜನ ಪ್ರತಿನಿಧಿಯ ಶೈಕ್ಷಣಿಕ ಅರ್ಹತೆ ವಿಚಾರ ಬಂದಾಗ ಸಾರ್ವಜನಿಕ ಪ್ರಾಧಿಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ವಾದ-ಪ್ರತಿವಾದ ಅಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ನಿಗದಿ ಮಾಡಿದೆ.

ಪ್ರಕರಣದ ಹಿನ್ನೆಲೆ :

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಕುಮಾರ್ ಎಂಬವರು, 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪ್ರಧಾನಿ ಮೋದಿ ಬಿಎ ಪದವಿ ಪಡೆದಿದ್ದಾರೆ ಎನ್ನಲಾದ ಸಂದರ್ಭದ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಅಂಕಗಳು ಮತ್ತು ಅವರು ಪದವಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿದ್ದಾರೆಯೇ ಅಥವಾ ಅನುತ್ತೀರ್ಣರಾಗಿದ್ದಾರೆಯೇ? ಎಂಬ ವಿವರಗಳನ್ನು ಕೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ ಆರ್‌ಟಿಐ ಕಾರ್ಯಕರ್ತ ನೀರಜ್ ಕುಮಾರ್ ಮೂರನೇ ವ್ಯಕ್ತಿ (ವಿಷಯಕ್ಕೆ ಸಂಬಂಧಿಸದ) ಎಂಬ ಕಾರಣ ನೀಡಿ, ಮೋದಿಯವರ ಪದವಿ ಕುರಿತು ಮಾಹಿತಿ ನೀಡಲು ನಿರಾಕರಿಸಿತ್ತು. ಇದರ ವಿರುದ್ದ ನೀರಜ್ ಕುಮಾರ್ ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು.

2016ರಲ್ಲಿ ಕೇಂದ್ರ ಮಾಹಿತಿ ಆಯೋಗವು ಆರ್‌ಟಿಐ ಕಾರ್ಯಕರ್ತನಿಗೆ ಮಾಹಿತಿ ಒದಗಿಸುವಂತೆ ದೆಹಲಿ ವಿವಿಗೆ ಸೂಚಿಸಿತ್ತು. ದೆಹಲಿ ವಿಶ್ವವಿದ್ಯಾನಿಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಅದು ಸಾರ್ವಜನಿಕ ದಾಖಲೆಯಾಗಿದೆ ಎಂದು ಹೇಳಿತ್ತು.

ಆದರೆ, ದೆಹಲಿ ವಿವಿ ಮಾಹಿತಿ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಟಿಐ ಮೂಲಕ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಹೆಸರುಗಳು ಮತ್ತು ಅಂಕಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ಹೇಳಿಕೊಂಡಿದೆ.

370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....