Homeಮುಖಪುಟ"ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ"? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ...

“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದರ ಹಿಂದೆ ಏನಾದರು ‘ಸಾರ್ವಜನಿಕ ಹಿತಾಸಕ್ತಿ’ ಇದೆಯಾ? ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿಯವರು 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಪದವಿ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಆರ್‌ಟಿಐ ಕಾರ್ಯಕರ್ತ ದಾಖಲೆ ಕೇಳಿದ್ದಕ್ಕೆ ಹೈಕೋರ್ಟ್ ಮೇಲಿನಂತೆ ಪ್ರಶ್ನಿಸಿದೆ ಎಂದು ವರದಿ ಹೇಳಿದೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಒದಗಿಸುವಂತೆ ದೆಹಲಿ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿದೆ. ಇದನ್ನು ಪ್ರಶ್ನಿಸಿ 2017ರಲ್ಲಿ ದೆಹಲಿ ವಿಶ್ವವಿದ್ಯಾನಿಲಯ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಎ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್‌ (ಎಂ.ಎ) ಪದವಿ ಪಡೆದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಆದರೆ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಕೆಲವರು ಮೋದಿ ಪದವಿ ಪಡೆದಿದ್ದಾರೆ ಎನ್ನುವುದು ಕಟ್ಟು ಕಥೆ ಎಂದಿದ್ದಾರೆ.

ಮಂಗಳವಾರ (ಫೆ.11) ದೆಹಲಿ ವಿಶ್ವವಿದ್ಯಾನಿಲಯದ ಪರವಾಗಿ ಹೈಕೋರ್ಟ್‌ಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest)ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರಿದು, “ವಿಶ್ವ ವಿದ್ಯಾನಿಲಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳ ಪದವಿ ಮತ್ತು ಅಂಕ ಪಟ್ಟಿಗಳ ವಿವರಗಳು ಬಹಳ ‘ವಿಶ್ವಾಸಾರ್ಹ ರೀತಿಯಲ್ಲಿ’ ಇದೆ. ಅವೆಲ್ಲವೂ ವಿದ್ಯಾರ್ಥಿಗಳ ‘ವೈಯಕ್ತಿಕ ಗೌಪ್ಯ’ ಮಾಹಿತಿಗಳು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂಜಯ್ ಹೆಗ್ಡೆ, ಶೈಕ್ಷಣಿಕ ವಿವರಗಳು ಸಾರ್ವಜನಿಕ ಮಾಹಿತಿಯಾಗಿದ್ದು, ಅವುಗಳನ್ನು ನೋಟಿಸ್‌ ಬೋರ್ಡ್‌ಗಳು ಮತ್ತು ಪತ್ರಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಂದುವರಿದು, ಸಾರ್ವಜನಿಕ ಹಿತಾಸಕ್ತಿ ಯಾವಾಗಲು ಬಹಿರಂಗಪಡಿಸುವಿಕೆಯ ಕಡೆ ಇರುತ್ತದೆಯೇ ಹೊರತು, ಮುಚ್ಚಿಡುವುದರ ಕಡೆ ಅಲ್ಲ. ಚುನಾಯಿತ ಜನ ಪ್ರತಿನಿಧಿಗಳ ಆಸ್ತಿ, ಕುಟುಂಬದ ಹಿನ್ನೆಲೆ ಇತ್ಯಾದಿ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಒಬ್ಬ ಜನ ಪ್ರತಿನಿಧಿಯ ಶೈಕ್ಷಣಿಕ ಅರ್ಹತೆ ವಿಚಾರ ಬಂದಾಗ ಸಾರ್ವಜನಿಕ ಪ್ರಾಧಿಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ವಾದ-ಪ್ರತಿವಾದ ಅಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ನಿಗದಿ ಮಾಡಿದೆ.

ಪ್ರಕರಣದ ಹಿನ್ನೆಲೆ :

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಕುಮಾರ್ ಎಂಬವರು, 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪ್ರಧಾನಿ ಮೋದಿ ಬಿಎ ಪದವಿ ಪಡೆದಿದ್ದಾರೆ ಎನ್ನಲಾದ ಸಂದರ್ಭದ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಅಂಕಗಳು ಮತ್ತು ಅವರು ಪದವಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿದ್ದಾರೆಯೇ ಅಥವಾ ಅನುತ್ತೀರ್ಣರಾಗಿದ್ದಾರೆಯೇ? ಎಂಬ ವಿವರಗಳನ್ನು ಕೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ ಆರ್‌ಟಿಐ ಕಾರ್ಯಕರ್ತ ನೀರಜ್ ಕುಮಾರ್ ಮೂರನೇ ವ್ಯಕ್ತಿ (ವಿಷಯಕ್ಕೆ ಸಂಬಂಧಿಸದ) ಎಂಬ ಕಾರಣ ನೀಡಿ, ಮೋದಿಯವರ ಪದವಿ ಕುರಿತು ಮಾಹಿತಿ ನೀಡಲು ನಿರಾಕರಿಸಿತ್ತು. ಇದರ ವಿರುದ್ದ ನೀರಜ್ ಕುಮಾರ್ ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು.

2016ರಲ್ಲಿ ಕೇಂದ್ರ ಮಾಹಿತಿ ಆಯೋಗವು ಆರ್‌ಟಿಐ ಕಾರ್ಯಕರ್ತನಿಗೆ ಮಾಹಿತಿ ಒದಗಿಸುವಂತೆ ದೆಹಲಿ ವಿವಿಗೆ ಸೂಚಿಸಿತ್ತು. ದೆಹಲಿ ವಿಶ್ವವಿದ್ಯಾನಿಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಅದು ಸಾರ್ವಜನಿಕ ದಾಖಲೆಯಾಗಿದೆ ಎಂದು ಹೇಳಿತ್ತು.

ಆದರೆ, ದೆಹಲಿ ವಿವಿ ಮಾಹಿತಿ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಟಿಐ ಮೂಲಕ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಹೆಸರುಗಳು ಮತ್ತು ಅಂಕಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ಹೇಳಿಕೊಂಡಿದೆ.

370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...