Homeಮುಖಪುಟಮೋದಿ ಪದವಿ ಪ್ರಕರಣ | ಕುತೂಹಲ ತಣಿಸುವುದು ಆರ್‌ಟಿಐ ಉದ್ದೇಶವಲ್ಲ ಎಂದ ದೆಹಲಿ ವಿಶ್ವವಿದ್ಯಾಲಯ!

ಮೋದಿ ಪದವಿ ಪ್ರಕರಣ | ಕುತೂಹಲ ತಣಿಸುವುದು ಆರ್‌ಟಿಐ ಉದ್ದೇಶವಲ್ಲ ಎಂದ ದೆಹಲಿ ವಿಶ್ವವಿದ್ಯಾಲಯ!

- Advertisement -
- Advertisement -

ಮೂರನೇ ವ್ಯಕ್ತಿಯ ಕುತೂಹಲವನ್ನು ತಣಿಸುವುದು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯ ಉದ್ದೇಶ ಅಲ್ಲ ಎಂದು ದೆಹಲಿ ವಿಶ್ವವಿದ್ಯಾಲಯ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿದ್ಯಾನಿಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರ ಪದವಿ ಪ್ರಮಾಣ ಪತ್ರವನ್ನು ಕಂಡುಕೊಳ್ಳಲು ಸಲ್ಲಿಸಲಾಗಿದ್ದ ಆರ್‌ಟಿಐಯ ಅರ್ಜಿ ಪ್ರಕರಣದಲ್ಲಿ ಈ ಹೇಳಿಕೆಯನ್ನು ವಿಶ್ವವಿದ್ಯಾಲಯ ಹೇಳಿದೆ. ಮೋದಿ ಪದವಿ ಪ್ರಕರಣ

1978 ರಲ್ಲಿ ಕೊನೆಗೊಳ್ಳುವ ಶೈಕ್ಷಣಿಕ ವರ್ಷದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಕೇಂದ್ರ ಮಾಹಿತಿ ಆಯೋಗವು ನಿರ್ದೇಶಿಸಿದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯವು 2017 ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠವು ವಿಚಾರಣೆ ನಡೆಸುತ್ತಿತ್ತು.

1978 ರಲ್ಲಿ ಪ್ರಧಾನಿ ಮೋದಿ ಅವರಿಗೆ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ಪದವಿ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ನೀಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ, ಟೀಕಾಕಾರರು ಇದರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಅವರ ಪದವಿಗಳ ವಿಚಾರವು ಕಟ್ಟುಕಥೆ ಎಂದು ಆರೋಪಿಸಿದ್ದಾರೆ. ಮೋದಿ ಪದವಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಮಾಹಿತಿ ಆಯೋಗದ ಆದೇಶವು ಕಾನೂನಿಗೆ ವಿರುದ್ಧವಾಗಿದೆ ಎಂದು ಸಾಲಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6 ಮಾಹಿತಿಯನ್ನು ಒದಗಿಸಬೇಕೆಂದು ಕಡ್ಡಾಯಗೊಳಿಸುತ್ತದೆ ಎಂಬುವುದು ನಿಜವಾದರೂ, ಈ ಕಾಯ್ದೆಯು “ಯಾರದ್ದೋ ಕುತೂಹಲವನ್ನು ತಣಿಸುವ ಉದ್ದೇಶವನ್ನು ಹೊಂದಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಜನಿಕ ಅಧಿಕಾರಿಗಳ ಹೊಣೆಗಾರಿಕೆ ಮತ್ತು ಪಾರದರ್ಶಕತೆಗೆ ಸಂಬಂಧಿಸದ ಮಾಹಿತಿಯನ್ನು ಬಹಿರಂಗಪಡಿಸುವ ಮೂಲಕ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಾಲಿಸಿಟರ್ ಜನರಲ್ ವಾದಿಸಿದ್ದಾರೆ.

ನಿಯಮಗಳು ಅನುಮತಿಸಿದರೆ ಶಿಕ್ಷಣ ಸಂಸ್ಥೆಗಳನ್ನು ವ್ಯಕ್ತಿಗಳು ತಮ್ಮದೇ ಆದ ಪದವಿಗಳು ಅಥವಾ ಅಂಕಪಟ್ಟಿಗಳನ್ನು ಒದಗಿಸುವಂತೆ ಕೇಳಬಹುದು, ಆದರೆ ಕಾಯ್ದೆಯ ಸೆಕ್ಷನ್ 8(1)(ಇ) ಅಂತಹ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಅದನ್ನು ನೀಡುವುದಕ್ಕೆ ವಿನಾಯಿತಿ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಏನಿದು ಪ್ರಕರಣ?

ಮಾಹಿತಿ ಹಕ್ಕು ಹೋರಾಟಗಾರ ನೀರಜ್ ಕುಮಾರ್ ಅವರು, 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಬಿಎ ವಿಭಾಗದಲ್ಲಿದ್ದ ವಿದ್ಯಾರ್ಥಿಗಳ ರೋಲ್ ಸಂಖ್ಯೆಗಳು, ಅಂಕಗಳು ಮತ್ತು ಫಲಿತಾಂಶವು ಉತ್ತೀರ್ಣ ಅಥವಾ ಅನುತ್ತೀರ್ಣವಾಗಿದ್ದರ ಮಾಹಿತಿಯನ್ನು ಕೋರಿದ್ದರು. ಆದರೆ, ವಿಶ್ವವಿದ್ಯಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಈ ವಿನಂತಿಯನ್ನು “ಮೂರನೇ ವ್ಯಕ್ತಿಯ ಮಾಹಿತಿ” ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಹಾಗಾಗಿ ಅವರು ಕೇಂದ್ರ ಮಾಹಿತಿ ಆಯೋಗಕ್ಕೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

2016 ರಲ್ಲಿ ಆಯೋಗವು ಇದು ಸಾರ್ವಜನಿಕ ವಿಚಾರವಾಗಿದೆ ಎಂದು ತೀರ್ಪು ನೀಡಿತ್ತು ಮತ್ತು ಮಾಹಿತಿಯನ್ನು ಬಿಡುಗಡೆ ಮಾಡಲು ವಿಶ್ವವಿದ್ಯಾಲಯಕ್ಕೆ ಆದೇಶಿಸಿತ್ತು. “ದೆಹಲಿ ವಿಶ್ವವಿದ್ಯಾಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಹಾಗಾಗಿ ಇದು ಸಾರ್ವಜನಿಕ ದಾಖಲೆಯಾಗಿದೆ” ಎಂದು ಆಯೋಗ ಹೇಳಿತ್ತು.

ವಿಶ್ವವಿದ್ಯಾನಿಲಯವು ಈ ಹಿಂದೆ ಹೈಕೋರ್ಟ್‌ನಲ್ಲಿ ಎಲ್ಲಾ ವಿದ್ಯಾರ್ಥಿಗಳ ರೋಲ್ ಸಂಖ್ಯೆಗಳು, ಹೆಸರುಗಳು ಮತ್ತು ಅಂಕಗಳಂತಹ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು.

ಇದನ್ನೂಓದಿ: ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...