Homeಮುಖಪುಟಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಗುಜರಾತ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಸಲ್ಲಿಸಿದ ಮಾನನಷ್ಟಕ್ಕಾಗಿ ಕ್ರಿಮಿನಲ್ ವಿಚಾರಣೆಯನ್ನು ವಿಲೇವಾರಿ ಮಾಡಿದ ನಂತರ, ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಜಯೇಶ್‌ಭಾಯ್ ಲಿಂಬಾಭಾಯ್ ಪಟೇಲ್ ಅವರ ನ್ಯಾಯಾಲಯವು ಎಎಪಿ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಿದೆ. ಮೇ 23ರಂದು ನ್ಯಾಯಾಲಯದ ಮುಂದೆ ಇಬ್ಬರು ನಾಯಕರಿಗೆ ಹಾಜರಾಗುವಂತೆ ಆದೇಶಿಸಲಾಗಿದೆ.

”ಮೋದಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕಿತ್ತು. ಆದರೆ ಅವರು ಅದನ್ನು ಹೇಳದೇ ಮುಚ್ಚಿಟ್ಟಿದ್ದಾರೆ. ಪ್ರಧಾನಿ ಅವರು ಪದವಿ ದಾಖಲಾತಿಯನ್ನು ತೋರಿಸಲಾಗುತ್ತಿಲ್ಲ ಏಕೆಂದರೆ ಆ ಪದವಿ ನಕಲಿಯಾಗಿರಬಹುದು, ಅದನ್ನು ನೀಡಿದ ವಿಶ್ವವಿದ್ಯಾಲಯವನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು… ಒಂದು ವೇಳೆ ಪದವಿ ದಾಖಲೆ ಸತ್ಯ ಆಗಿದ್ದರೆ, ಅದರ ಮಾಹಿತಿಯನ್ನು ವಿಶ್ವವಿದ್ಯಾಯ ಏಕೆ ಬಹಿರಂಗಪಡಿಸುತ್ತಿಲ್ಲ?” ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಅವರ ಇಂತಹ ಕೆಲವು ಹೇಳಿಕೆಗಳು ಮಾನಹಾನಿಕರ ಎಂದು ಪಟೇಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

ಸಂಜಯ್ ಸಿಂಗ್ ಅವರು ಪ್ರಧಾನಿ ಪದವಿ ವಿಚಾರದಲ್ಲಿ ವಿಶ್ವವಿದ್ಯಾಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪಿಯೂಷ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.

ಪಟೇಲ್ ಪ್ರಕಾರ, ಕೇಜ್ರಿವಾಲ್ ಅವರು ಏಪ್ರಿಲ್ 1 ರಂದು ಪತ್ರಿಕಾಗೋಷ್ಠಿಯಲ್ಲಿ ಮತ್ತು ಸಿಂಗ್ ಏಪ್ರಿಲ್ 2 ರಂದು ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ “ಮಾನಹಾನಿಕರ ಹೇಳಿಕೆಗಳನ್ನು” ಮಾಡಿದ್ದಾರೆ.

”ವೈಯಕ್ತಿಕ ವಿಚಾರಗಳಿಗಾಗಿ ಆರ್‌ಟಿಐ ಯೋಗ್ಯವಲ್ಲ ಹಾಗಾಗಿ ಆ ರೀತಿ ಮಾಹಿತಿ ಪಡೆಯುವುದು ಮಾನನಷ್ಟ ಎಂದು ಪಟೇಲ್ ವಾದಿಸಿದರು.

ಗುಜರಾತ್ ಹೈಕೋರ್ಟ್ ಇತ್ತಿಚಿಗಷ್ಟೇ ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಆದೇಶ ನೀಡಿತ್ತು.

ಪ್ರಧಾನಿ ಮೋದಿ ಅವರ ಪದವಿಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ “ಮಾಹಿತಿ ಹುಡುಕಲು” ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಕಳೆದ ತಿಂಗಳು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 25,000 ರೂಪಾಯಿ ದಂಡ ವಿಧಿಸಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....