Homeಮುಖಪುಟಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಒಳ್ಳೆಯದ್ದು, ಕೆಟ್ಟದ್ದು, ಕೊಳಕಾದುದ್ದು ಏನೇ ಇರಲಿ. ಏನು ನೋಡಬೇಕೆಂದು ನಾವು ನಿರ್ಧರಿಸುತ್ತೇವೆಯೇ ಹೊರತು ಸರ್ಕಾರ ಹೇಳುವುದಲ್ಲ ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಹೇಳಿದ್ದಾರೆ.

- Advertisement -
- Advertisement -

2002ರ ಗುಜರಾತ್‌ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತಾಗಿ ಬಿಬಿಸಿ ನಿರ್ಮಿಸಿರುವ  ‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರವನ್ನು ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ರಾತ್ರಿ ಪ್ರದರ್ಶಿಸಲಾಗಿದೆ.

ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಮತ್ತು ಫ್ರೆಟರ್ನಿಟಿ ಗ್ರೂಪ್ ಎಂದು ಕರೆಯಲ್ಪಡುವ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ಸಂಘಟನೆಗಳು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಿದ್ದವು. ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಿದ್ದಾರೆ ಎನ್ನಲಾಗಿದೆ.

ಅಧಿಕೃತವಾಗಿ ಜನವರಿ 17ರಂದು ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರದ ಮೊದಲ ಎಪಿಸೋಡ್ ಅನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಬಿಬಿಸಿ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋವನ್ನು ಸಹ ತದನಂತರ ಭಾರತದಲ್ಲಿ ಕಾಣದಂತೆ ತಡೆಹಿಡಿಯಲಾಗಿತ್ತು. ಅಲ್ಲದೆ ವಿಮೋ ಪ್ಲೇಯರ್, ಟೆಲಿಗ್ರಾಂಗಳಲ್ಲಿ ಆ ಡಾಕ್ಯುಮೆಂಟರಿ ವೈರಲ್ ಆಗುತ್ತಿದ್ದಂತೆ ಅಲ್ಲಿಂದಲೂ ಡಿಲೀಟ್ ಮಾಡಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ಮೊಹುವಾ ಮೊಯಿತ್ರ, “ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವಾಗುವ ಹೊಸ ಲಿಂಕ್ ಇಲ್ಲಿದೆ. ಒಳ್ಳೆಯದ್ದು, ಕೆಟ್ಟದ್ದು, ಕೊಳಕಾದುದ್ದು ಏನೇ ಇರಲಿ. ಏನು ನೋಡಬೇಕೆಂದು ನಾವು ನಿರ್ಧರಿಸುತ್ತೇವೆಯೇ ಹೊರತು ಸರ್ಕಾರ ಹೇಳುವುದಲ್ಲ” ಎಂದು ಕಿಡಿಕಾರಿಕಾರಿದ್ದಾರೆ.

‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜವಾಹರ್‌‌‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘ ಇಂದು ಪ್ರದರ್ಶಿಸಲು ಯೋಜಿಸಿದೆ. ಆದರೆ ಈ ಪ್ರದರ್ಶನವನ್ನು ರದ್ದುಗೊಳಿಸುವಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಕೇಳಿದೆ.

ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜನವರಿ 24 ರಂದು ರಾತ್ರಿ 9 ಗಂಟೆಗೆ ನಿಗದಿ ಪಡಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಲಹೆಯಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಕೇರಳದಲ್ಲಿ ಹಲವಾರು ಕಡೆ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸುವುದಾಗಿ ಆಡಳಿತರೂಢ ಸಿಪಿಎಂ ಪಕ್ಷದ ಯುವಜನ ಸಂಘಟನೆಯಾದ ಡಿವೈಎಫ್‌ಐ ತಿಳಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...