Homeಚಳವಳಿಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ 60 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಕಲ್ಲು ಕೂಡ ಕರಗಬಹುದು, ಆದರೆ ಪ್ರಧಾನಿ ಮೋದಿಯ ಹೃದಯ ಕರಗಲಿಲ್ಲ. ಅವರು ಸೌರಭ್ ಗಂಗೂಲಿಯ ಹೃದಯಾಘಾತಕ್ಕಾಗಿ ಟ್ವೀಟ್ ಮಾಡಿದ್ದಾರೆಯೇ ಹೊರತು ರೈತರಿಗಾಗಿ ಮರುಗಿಲ್ಲ ಎಂದು ರೈತ ಹೋರಾಟದ ಮುಖಂಡ, ಸ್ವರಾಜ್ ಇಂಡಿಯಾ ಪಕ್ಷದ ನಾಯಕ ಯೋಗೇಂದ್ರ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ-ಕಾರ್ಮಿಕ-ದಲಿತ-ಜನಪರ ಸಂಘಟನೆಗಳ “ಐಕ್ಯ ಹೋರಾಟ’’ವು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ, “ರಾಷ್ಟ್ರೀಯ ನಾಯಕರೊಡನೆ ಮುಕ್ತ ಸಂವಾದ” ಕಾರ್ಯಕ್ರಮದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆ: ತೊಂದರೆಗೊಳಗಾದವರಿಗೆ ರಕ್ಷಣೆ ಅಗತ್ಯವೆಂದ IMF

“ರೈತ ಮುಖಂಡರಾದ ಗೋಪಾಲ್ ಗೌಡ, ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ಅವರು ರೈತರು ಯಾವಾಗ ಎದ್ದೇಳುತ್ತಾರೆ ಎಂದು ಮಾತನಾಡುತ್ತಿದ್ದರು. ಆ ದಿನ ಇಂದು ಬಂದಿದೆ. ಅವರುಗಳ ಆತ್ಮಗಳು ಈ ಎಲ್ಲವನ್ನು ಮೇಲಿನಿಂದ ನೋಡುತ್ತಿವೆ ಮತ್ತು ನಮಗೆ ಆಶೀರ್ವಾದ ಮಾಡುತ್ತಿವೆ” ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.

ಈ ಕಾನೂನುಗಳನ್ನು ಹೇರುವ ಮೂಲಕ ರೈತರಿಗೆ ಐತಿಹಾಸಿಕ ಉಡುಗೊರೆಯನ್ನು ನೀಡಲು ಬಯಸುತ್ತೇನೆ ಎಂದು ಮೋದಿ ಹೇಳುತ್ತಾರೆ. ಆದರೆ ರೈತರೇ ಇದು ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಕೃಷಿ ಕಾನೂನಿನ ಬಗ್ಗೆ ಚರ್ಚಿಸಲು ನೀವು ಯಾವುದಾದರೂ ರೈತ ಸಂಘಟನೆಗಳನ್ನು ಸಂಪರ್ಕಿಸಿದ್ದೀರಾ? ಎಂದು ಪ್ರಶ್ನಿಸಿದ ಯೋಗೇಂದ್ರ ಯಾದವ್‌, “ಈ ಬಗ್ಗೆ ಚರ್ಚಿಸಿರುವ ದೊಡ್ಡ ಸಂಖ್ಯೆಯ ಸದಸ್ಯರನ್ನು ಹೊಂದಿರುವ ಯಾವುದಾದರೂ ರೈತ ಸಂಘಟನೆಗಳ ಹೆಸರನ್ನು ಬಹಿರಂಗ ಪಡಿಸಿ” ಎಂದು ಕೇಂದ್ರ ಸರ್ಕಾರಕ್ಕೆ ಸವಾಲೆಸೆದರು.

“ಸ್ವತಃ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಜೊತೆ ಗುರುತಿಸಿಕೊಂಡಿರುವ ರೈತ ಸಂಘಗಳು ಕೂಡಾ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳುತ್ತಿವೆ. ಈಗ ಮೋದಿ ಮಾತ್ರ ನಾನು ರೈತರಿಗೆ ಉಡುಗೊರೆ ನೀಡಿದ್ದೇನೆ ಎಂದು ಹೇಳುತ್ತಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...