Homeಕರ್ನಾಟಕ’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?:...

’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?: ಸಿದ್ದರಾಮಯ್ಯ

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿರುವುದು ಮುಖ್ಯಮಂತ್ರಿ ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ ಎಂದು ಹೇಳಿದ್ದಾರೆ.

- Advertisement -
- Advertisement -

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಯಡಿಯೂರಪ್ಪ ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22 ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

“ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015 ರಲ್ಲಿ ಎಫ್‌ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು” ಎಂದು ಅವರು ನೆನಪಿಸಿದ್ದಾರೆ.

“ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಯಡಿಯೂರಪ್ಪ ಅವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಅವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ. ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪ ಅವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ” ಎಂದು ಹೇಳಿದ್ದಾರೆ.

“ಅವರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ‘ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ಮೋದಿ ಅವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...