Homeರಾಜಕೀಯಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಕೊರೊನಾ ಸಾವಿನ ಕುರಿತು ನ್ಯೂಯಾರ್ಕ್‌ ಟೈಮ್ಸ್‌‌ ವರದಿ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ, ಜೊತೆಗೆ ಸತ್ಯವನ್ನು ಮಾತನಾಡುಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಹೇಳಿದ್ದಾರೆ. ಕೊರೊನಾದಿಂದ ಭಾರತದಲ್ಲಿ ಸುಮಾರು 40 ಲಕ್ಷ ಸಾವು ಸಂಭವಿಸಿದ್ದು, ಆದರೆ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯ ಪ್ರಧಾನಿಯ ವಿರುದ್ದ ಕಿಡಿ ಕಾರಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ ಶನಿವಾರ ಮಾಡಿದ ವರದಿಯಲ್ಲಿ, “ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ. ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ” ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೈಮ್ಸ್‌ ತನ್ನ ವರದಿಯಲ್ಲಿ “ಕೊರೊನಾದಿಂದಾಗಿ ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ನ್ಯೂಯಾರ್ಕ್‌ ಟೈಮ್ಸ್‌ನ ಈ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು, “ಪ್ರಧಾನಿ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಲೇ ಇದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಿ, ಕರ್ತವ್ಯವನ್ನು ನಿಭಾಯಿಸಿ ಮೋದಿಯವರೇ” ಎಂದು ಅವರು ಒತ್ತಾಯಿಸಿದ್ದಾರೆ.

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

ಇದನ್ನೂ ಓದಿ: ಎರಡು ವರ್ಷಗಳ ನಂತರ ಕೊರೊನಾ ನಿರ್ಬಂಧಗಳನ್ನು ಕೊನೆಗೊಳಿಸಿದ ಭಾರತ

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...