Homeರಾಜಕೀಯಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಕೊರೊನಾ ಸಾವಿನ ಕುರಿತು ನ್ಯೂಯಾರ್ಕ್‌ ಟೈಮ್ಸ್‌‌ ವರದಿ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ, ಜೊತೆಗೆ ಸತ್ಯವನ್ನು ಮಾತನಾಡುಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಹೇಳಿದ್ದಾರೆ. ಕೊರೊನಾದಿಂದ ಭಾರತದಲ್ಲಿ ಸುಮಾರು 40 ಲಕ್ಷ ಸಾವು ಸಂಭವಿಸಿದ್ದು, ಆದರೆ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯ ಪ್ರಧಾನಿಯ ವಿರುದ್ದ ಕಿಡಿ ಕಾರಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ ಶನಿವಾರ ಮಾಡಿದ ವರದಿಯಲ್ಲಿ, “ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ. ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ” ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೈಮ್ಸ್‌ ತನ್ನ ವರದಿಯಲ್ಲಿ “ಕೊರೊನಾದಿಂದಾಗಿ ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ನ್ಯೂಯಾರ್ಕ್‌ ಟೈಮ್ಸ್‌ನ ಈ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು, “ಪ್ರಧಾನಿ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಲೇ ಇದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಿ, ಕರ್ತವ್ಯವನ್ನು ನಿಭಾಯಿಸಿ ಮೋದಿಯವರೇ” ಎಂದು ಅವರು ಒತ್ತಾಯಿಸಿದ್ದಾರೆ.

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

ಇದನ್ನೂ ಓದಿ: ಎರಡು ವರ್ಷಗಳ ನಂತರ ಕೊರೊನಾ ನಿರ್ಬಂಧಗಳನ್ನು ಕೊನೆಗೊಳಿಸಿದ ಭಾರತ

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...