Homeರಾಜಕೀಯಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಕೊರೊನಾ ಸಾವಿನ ಕುರಿತು ನ್ಯೂಯಾರ್ಕ್‌ ಟೈಮ್ಸ್‌‌ ವರದಿ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ, ಜೊತೆಗೆ ಸತ್ಯವನ್ನು ಮಾತನಾಡುಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಹೇಳಿದ್ದಾರೆ. ಕೊರೊನಾದಿಂದ ಭಾರತದಲ್ಲಿ ಸುಮಾರು 40 ಲಕ್ಷ ಸಾವು ಸಂಭವಿಸಿದ್ದು, ಆದರೆ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯ ಪ್ರಧಾನಿಯ ವಿರುದ್ದ ಕಿಡಿ ಕಾರಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ ಶನಿವಾರ ಮಾಡಿದ ವರದಿಯಲ್ಲಿ, “ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ. ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ” ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೈಮ್ಸ್‌ ತನ್ನ ವರದಿಯಲ್ಲಿ “ಕೊರೊನಾದಿಂದಾಗಿ ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ನ್ಯೂಯಾರ್ಕ್‌ ಟೈಮ್ಸ್‌ನ ಈ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು, “ಪ್ರಧಾನಿ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಲೇ ಇದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಿ, ಕರ್ತವ್ಯವನ್ನು ನಿಭಾಯಿಸಿ ಮೋದಿಯವರೇ” ಎಂದು ಅವರು ಒತ್ತಾಯಿಸಿದ್ದಾರೆ.

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

ಇದನ್ನೂ ಓದಿ: ಎರಡು ವರ್ಷಗಳ ನಂತರ ಕೊರೊನಾ ನಿರ್ಬಂಧಗಳನ್ನು ಕೊನೆಗೊಳಿಸಿದ ಭಾರತ

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...