Homeರಾಜಕೀಯಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಮೋದಿ ಸತ್ಯ ಮಾತನಾಡುವುದಿಲ್ಲ, ಸತ್ಯ ಮಾತನಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ ವ್ಯಂಗ್ಯ

ಕೊರೊನಾ ಸಾವಿನ ಕುರಿತು ನ್ಯೂಯಾರ್ಕ್‌ ಟೈಮ್ಸ್‌‌ ವರದಿ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ, ಜೊತೆಗೆ ಸತ್ಯವನ್ನು ಮಾತನಾಡುಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಹೇಳಿದ್ದಾರೆ. ಕೊರೊನಾದಿಂದ ಭಾರತದಲ್ಲಿ ಸುಮಾರು 40 ಲಕ್ಷ ಸಾವು ಸಂಭವಿಸಿದ್ದು, ಆದರೆ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯ ಪ್ರಧಾನಿಯ ವಿರುದ್ದ ಕಿಡಿ ಕಾರಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ ಶನಿವಾರ ಮಾಡಿದ ವರದಿಯಲ್ಲಿ, “ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ. ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ” ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೈಮ್ಸ್‌ ತನ್ನ ವರದಿಯಲ್ಲಿ “ಕೊರೊನಾದಿಂದಾಗಿ ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ನ್ಯೂಯಾರ್ಕ್‌ ಟೈಮ್ಸ್‌ನ ಈ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು, “ಪ್ರಧಾನಿ ಮೋದಿ ಅವರು ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಲೇ ಇದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ. ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಿ, ಕರ್ತವ್ಯವನ್ನು ನಿಭಾಯಿಸಿ ಮೋದಿಯವರೇ” ಎಂದು ಅವರು ಒತ್ತಾಯಿಸಿದ್ದಾರೆ.

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

ಇದನ್ನೂ ಓದಿ: ಎರಡು ವರ್ಷಗಳ ನಂತರ ಕೊರೊನಾ ನಿರ್ಬಂಧಗಳನ್ನು ಕೊನೆಗೊಳಿಸಿದ ಭಾರತ

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...