Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...