Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...