Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...