Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...