Homeಮುಖಪುಟಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಾರೆ, ಅದಕ್ಕಾಗಿಯೇ ಅವರು ಕಾಂಗ್ರೆಸ್‌ನ್ನು ಟೀಕಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಾರೆ, ಅದಕ್ಕಾಗಿಯೇ ಅವರು ಕಾಂಗ್ರೆಸ್‌ನ್ನು ಟೀಕಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಲೋಕಸಭೆ ಚುನಾವಣೆಯ ಮೊದಲ ಸುತ್ತಿನ ಮತದಾನ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದೃಶ್ಯ ಮತದಾರರ ಭಯವಿದೆ, ಅದಕ್ಕಾಗಿಯೇ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆ’ ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

‘ಕಾಂಗ್ರೆಸ್ ಏನೂ ಅಲ್ಲ ಎಂದಾದರೆ, ಹಳೆಯ ಪಕ್ಷದ ಬಗ್ಗೆ ಪ್ರಧಾನಿ ಏಕೆ ತಲೆ ಕೆಡಿಸಿಕೊಂಡಿದ್ದಾರೆ’ ಎಂದು ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ತಾವು ಸುಮಾರು 10-12 ರಾಜ್ಯಗಳಿಗೆ ಪ್ರವಾಸ ಮಾಡಿದ್ದು, ಅಲ್ಲಿನ ಮತದಾರರಿಂದ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

“ನಾನು ಹೇಳಬಹುದಾದ ಅಂಡರ್‌ಕರೆಂಟ್ ಗೋಚರಿಸುವುದಿಲ್ಲ ಎಂದು ಭಾವಿಸುತ್ತೇನೆ. ಆದರೆ, ಚುನಾವಣೆಯಲ್ಲಿ ಹೊರಬರುವ ಈ ಅದೃಶ್ಯ ಮತದಾರರಿಗೆ ಮೋದಿಜಿ ಹೆದರುತ್ತಾರೆ ಮತ್ತು ಅದಕ್ಕಾಗಿಯೇ ಅವರು ಯಾವಾಗಲೂ ಕಾಂಗ್ರೆಸ್ ಅನ್ನು ಟೀಕಿಸುತ್ತಿದ್ದಾರೆ” ಎಂದು ಖರ್ಗೆ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಈ ಬಾರಿ 400 ಸ್ಥಾನಗಳನ್ನು ಪಡೆಯುತ್ತದೆ ಮತ್ತು ಅವರಿಗೆ ಅಂತಹ ದೊಡ್ಡ ವಿಶ್ವಾಸವಿದ್ದರೆ, ಕೇಸರಿ ಪಕ್ಷವು ಭ್ರಷ್ಟರನ್ನು ತಮ್ಮ ತೆಕ್ಕೆಗೆ ಏಕೆ ಸ್ವಾಗತಿಸುತ್ತಿದೆ ಎಂದು ಹಿರಿಯ ಅವರು ಪ್ರಶ್ನಿಸಿದರು.

“ಮೋದಿ ಎಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ನೀವು (ಬಿಜೆಪಿ) ಒಂದು ಕಡೆ ಹೇಳುತ್ತೀರಿ. ನಂತರ ನೀವು ಸುಮಾರು 444 ಶಾಸಕರನ್ನು ಅವರು ಸೇರಿರುವ ಪಕ್ಷಗಳ ಹೊರತಾಗಿಯೂ ಆಮಿಷವೊಡ್ಡಿ ಖರೀದಿಸಿದ್ದೀರಿ ಎಂದು ನಾನು ಹೇಳುತ್ತೇನೆ” ಎಂದು ಅವರು ಹೇಳಿದರು.

“ಈ ಹಿಂದೆ ಮುಖ್ಯಮಂತ್ರಿಗಳು, ಗುತ್ತಿಗೆದಾರರು ಮತ್ತು ಇತರರು ಸೇರಿದಂತೆ 23 ದೊಡ್ಡ ವ್ಯಕ್ತಿಗಳನ್ನು ಬಿಜೆಪಿ ಸ್ವಾಗತಿಸಿದೆ. ಅವರು ಕೇಸರಿ ಪಕ್ಷಕ್ಕೆ ಸೇರಿದ ತಕ್ಷಣ ಅವರು ಶುದ್ಧರಾದರು” ಎಂದು ಆರೋಪಿಸಿದರು.

“ಸುಮಾರು 10 ವರ್ಷಗಳ ಕಾಲ ಪ್ರಧಾನಿಯಾಗಿ,  13 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ವ್ಯಕ್ತಿಗೆ ಯಾರು ಭ್ರಷ್ಟರು, ಯಾರು ಒಳ್ಳೆಯವರು ಮತ್ತು ಯಾರು ಕೆಟ್ಟವರು ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ನನಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಅವರು ಹೇಳಿದರು.

ಇಂತಹ ವ್ಯಕ್ತಿ ಆಡಳಿತ ನಡೆಸುತ್ತಿರುವುದು ದೇಶದ ದುರದೃಷ್ಟಕರ ಎಂದ ಅವರು, ಭ್ರಷ್ಟರನ್ನು ಸ್ವಚ್ಛಗೊಳಿಸಲು ಮೋದಿ ಮತ್ತು ಅಮಿತ್ ಶಾ ಅವರ ಬಳಿ ದೊಡ್ಡ “ವಾಷಿಂಗ್ ಮೆಷಿನ್”ಗಳಿವೆ ಎಂದು ಲೇವಡಿ ಮಾಡಿದರು.

ಪ್ರಧಾನಿಯವರು ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ. 2019ರ ಚುನಾವಣೆಯ ಸಂದರ್ಭದಲ್ಲಿ ತಾವು ಈ ಹಿಂದೆ ಹೇಳಿದ್ದೆಲ್ಲವನ್ನೂ ಮರೆತುಬಿಟ್ಟಿದ್ದಾರೆ ಎಂದಿ ವಾಗ್ದಾಳಿ ನಡೆಸಿದರು.

ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ ಎಂದ ಅವರು, ಆ ಎರಡು ಕೋಟಿ ಉದ್ಯೋಗ ಎಲ್ಲಿದೆ ಎಂದು ಪ್ರಶ್ನಿಸಿದರು.

ಪ್ರತಿ ಕುಟುಂಬಕ್ಕೆ ₹15 ಲಕ್ಷ ನೀಡುವುದಾಗಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದನ್ನು ಖರ್ಗೆ ಸ್ಮರಿಸಿದರು. ಕಾಂಗ್ರೆಸ್ ಹೊರಗೆ ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರುವುದಾಗಿ ಪ್ರಧಾನಿ ಘೋಷಿಸಿದ್ದರು ಎಂದರು.

“ಪ್ರಧಾನಮಂತ್ರಿ ಅಥವಾ ಕಾಂಗ್ರೆಸ್ ಸುಳ್ಳು ಹೇಳುತ್ತಿದ್ದಾರೆಯೇ ಎಂಬುದನ್ನು ಜನರು ನಿರ್ಣಯಿಸಲಿ. ನಾನು ಮೋದಿಜಿ ನೀವು ಸುಳ್ಳುಗಾರ ಎಂದು ಹೇಳಿದಾಗ, ಖರ್ಗೆಜಿಯವರು ಪ್ರಧಾನಿಯನ್ನು ಈ ರೀತಿ ಸುಳ್ಳುಗಾರ ಎಂದು ಏಕೆ ಕರೆಯುತ್ತಿದ್ದಾರೆ ಎಂದು ಜನರು ಕೇಳುತ್ತಾರೆ. ಏಕೆಂದರೆ ಇವು ಸತ್ಯಗಳು … ನೀವು ಮರೆಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ಮೋದಿಯವರ ಗ್ಯಾರಂಟಿ ಏನು, ಅವರು ಏನು ಭರವಸೆ ನೀಡಿದರೂ ಅದನ್ನು ಕಾರ್ಯಗತಗೊಳಿಸುವುದಿಲ್ಲವೋ ಅದು ಗ್ಯಾರಂಟಿ” ಎಂದು ಅವರು ಆರೋಪಿಸಿದರು.

‘ಅವರು ನೀಡುತ್ತಿರುವ ಭರವಸೆಗಳನ್ನು ಈಡೇರಿಸುವುದಿಲ್ಲ ಎಂಬುದು ಮೋದಿಯವರ ಗ್ಯಾರಂಟಿ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಆರೋಪಿಸಿದ್ದಾರೆ.

‘ಪ್ರಧಾನಿಯವರು ಸಂಪೂರ್ಣವಾಗಿ ಹತಾಶೆಗೊಂಡಿದ್ದಾರೆ’ ಎಂದು ಆರೋಪಿಸಿದ ಅವರು, “ಹಾಗಾಗಿ, ಕಾಂಗ್ರೆಸ್ ಹಿಂದೂ ಸಮುದಾಯದ ಹಣ ಮತ್ತು ಇತರ ಆಸ್ತಿಗಳನ್ನು ತೆಗೆದುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಮೋದಿ ಹೇಳುತ್ತಿದ್ದಾರೆ” ಎಂದು ತಿರುಗೆಟು ಕೊಟ್ಟರು.

“ಅವರು ಹಾಗೆ ಹೇಳಿದ್ದಾರೋ ಇಲ್ಲವೋ? ಅದಕ್ಕಾಗಿಯೇ ನಾನು ನಿಮ್ಮನ್ನು (ಮಾಧ್ಯಮ) ವಿನಂತಿಸುತ್ತೇನೆ … ನೀವು ಈ ವಿಷಯಗಳನ್ನು ಹೈಲೈಟ್ ಮಾಡಿ… ಈ ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ಉಳಿಸಲು” ಎಂದು ಅವರು ಹೇಳಿದರು.

ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದಿರುವ ಸಮುದಾಯ ಎಂದು ಮೋದಿ ಉಲ್ಲೇಖಿಸಿದ್ದಾರೆ ಎಂದು ಖರ್ಗೆ ಟೀಕಿಸಿದರು. “ನಾನೇ ಐದು ಮಕ್ಕಳನ್ನು ಪಡೆದಿದ್ದೇನೆ. ನಾನು ಏನು ಮಾಡಬಹುದು” ಎಂದು ಅವರು ಪ್ರಶ್ನಿಸಿದರು.

ಮಕ್ಕಳ ಸಂಖ್ಯೆಗೆ ಧಾರ್ಮಿಕ ಅರ್ಥವನ್ನು ನೀಡುತ್ತಿದ್ದಾರೆ ಎಂದು ಮೋದಿಯನ್ನು ಟೀಕಿಸಿದ ಕಾಂಗ್ರೆಸ್ ನಾಯಕ, ಅಂಬೇಡ್ಕರ್ ಅವರ ಕುಟುಂಬದ 14ನೇ ಮಗು ಎಂದು ಗಮನಸೆಳೆದರು.

ಪ್ರತಿಯೊಂದನ್ನೂ ಧರ್ಮದೊಂದಿಗೆ ಜೋಡಿಸುವ ಮೂಲಕ ದೇಶವನ್ನು ನಾಶಮಾಡಲು ಮೋದಿ ಪ್ರಯತ್ನಿಸುತ್ತಿದ್ದಾರೆ. ಈ ದೇಶದ ಇತಿಹಾಸವನ್ನು ಇನ್ನಷ್ಟು ಓದಬೇಕು ಮತ್ತು ರಾಷ್ಟ್ರವನ್ನು ಹೇಗೆ ಒಗ್ಗೂಡಿಸಬೇಕು ಎಂಬುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಪ್ರಧಾನಿ ಎಂದಿಗೂ ಇತರರ ಮಾತುಗಳನ್ನು ಕೇಳುವುದಿಲ್ಲ ಮತ್ತು ಪತ್ರಿಕಾ ಪ್ರತಿನಿಧಿಗಳಿಗೆ ಪ್ರಶ್ನೆಗಳನ್ನು ಕೇಳಲು ಸಹ ಅನುಮತಿಸುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಬಿಲಿಯನೇರ್ ಸ್ನೇಹಿತರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....